Homeಮುಖಪುಟಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಎಬಿಪಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ”ಭಾರತವು ಹಿಂದೂ ರಾಷ್ಟ್ರ ಏಕೆಂದರೆ ದೇಶದ ಎಲ್ಲಾ ನಾಗರಿಕರು ಹಿಂದೂಗಳು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಅಷ್ಟೇ ಅಲ್ಲದೇ ಅವರು ಟ್ವಿಟರ್‌ನಲ್ಲಿ ಸಂದರ್ಶನದ ಕ್ಲಿಪ್‌ನ್ನು ಸಹ ಹಂಚಿಕೊಂಡಿದ್ದಾರೆ.

ಹಿಂದೂಗಳೇ ಪರಮಾಧಿಕಾರ ಹೊಂದುವುದನ್ನು ಹಿಂದೂ ರಾಷ್ಟ್ರ ಬಯಸುತ್ತದೆ. ಅವರ ಪ್ರಕಾರ, ಭಾರತದ ಜಾತ್ಯತೀತ ಸಂವಿಧಾನವನ್ನು ಕಿತ್ತುಹಾಕುವ ಮೂಲಕ ಮತ್ತು ಅಸ್ತಿತ್ವದಲ್ಲಿರುವ ಸಂಸ್ಥೆಗಳನ್ನು ಕಂಟ್ರೋಲ್ ಮಾಡುವ ಅಧಿಕಾರವನ್ನು ಹಿಂದೂಗಳಿಗೆ ನೀಡುವ ಮೂಲಕ ಹಿಂದೂ ರಾಷ್ಟ್ರ ರಚಿಸುವುದಾಗಿದೆ.

ಆದಿತ್ಯನಾಥ್ ಅವರು, ಹಿಂದೂ ಎನ್ನುವುದು ಒಂದು ನಂಬಿಕೆ, ಧರ್ಮ ಅಥವಾ ಪಂಥಕ್ಕೆ ಸಂಬಂಧಿಸಿದ್ದಲ್ಲ, ಇದು ಸಾಂಸ್ಕೃತಿಕ ಪದವಾಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

”ಭಾರತದಿಂದ ಯಾರಾದರೂ ಹಜ್‌ಗೆ ಹೋದರೆ, ಅವರನ್ನು ಅಲ್ಲಿ ಹಿಂದೂ ಎಂದು ಸಂಬೋಧಿಸುತ್ತಾರೆ. ಅಲ್ಲಿ ಯಾರೂ ಅವರನ್ನು ಹಾಜಿ ಎಂದು ನೋಡುವುದಿಲ್ಲ, ಯಾರೂ ಅವರನ್ನು ಇಸ್ಲಾಂ ಎಂದು ಸ್ವೀಕರಿಸುವುದಿಲ್ಲ, ಅಲ್ಲಿ ಅವರನ್ನು ಹಿಂದೂ ಎಂಬ ಹೆಸರಿನಿಂದ ಸಂಬೋಧಿಸಲಾಗುತ್ತದೆ. ಆ ಸಂದರ್ಭವನ್ನು ನೋಡಿದರೆ, ಭಾರತವು ಹಿಂದೂ ರಾಷ್ಟ್ರವಾಗಿದೆ, ಏಕೆಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದೂವಾಗಿದ್ದಾನೆ” ಎಂದು ಮುಖ್ಯಮಂತ್ರಿ ಎಬಿಪಿಗೆ ತಿಳಿಸಿದರು.

ಭಾರತದಲ್ಲಿ ಜನಿಸಿದ ಪ್ರತಿಯೊಬ್ಬರನ್ನು ಹಿಂದೂಗಳು ಎಂದು ಕರೆಯಲಾಗುತ್ತದೆ ಮತ್ತು ಪ್ರತಿಯೊಬ್ಬರು ತಮ್ಮನ್ನ ತಾವು ಅದೇ ದೃಷ್ಟಿಕೋನದಲ್ಲಿ ನೋಡಿದರೆ, ಅವರಿಗೆ ಅದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಆದಿತ್ಯನಾಥ್ ಹೇಳಿದರು.

”ನಾವು ಹಿಂದೂವನ್ನು ಧರ್ಮ, ನಂಬಿಕೆ ಮತ್ತು ಪಂಥದೊಂದಿಗೆ ಜೋಡಿಸಿದರೆ, ನಾವು ಹಿಂದೂ ಪದವನ್ನು ಅರ್ಥಮಾಡಿಕೊಳ್ಳುವಲ್ಲಿ ತಪ್ಪು ಮಾಡುತ್ತಿದ್ದೇವೆ ಎಂದು ಅರ್ಥ..” ಎಂದು ಆದಿತ್ಯನಾಥ್ ಹೇಳಿದರು. ಇದೇ ವೇಳೆ ಅವರು, “ಪ್ರತಿಯೊಬ್ಬ ಭಾರತಿಯನು ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿರಬೇಕು, ಅದು ನಮ್ಮ ಮಾರ್ಗದರ್ಶಿಯಾಗಿದೆ” ಎಂದು ಹೇಳುತ್ತಾರೆ.

”ಅಖಂಡ ಭಾರತ” ಕಲ್ಪನೆಯು ನಿಜವಾಗಲಿದ್ದು, ಪಾಕಿಸ್ತಾನವು ಅಂತಿಮವಾಗಿ ಭಾರತದೊಳಗೆ ಸೇರಿಕೊಳ್ಳುತ್ತದೆ ಎಂದು ಸಂದರ್ಶನದಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

”ಅಖಂಡ ಭಾರತ” ಎಂಬುದು ಹಿಂದುತ್ವವಾದಿಗಳು ಪ್ರತಿಪಾದಿಸುವ ಪರಿಕಲ್ಪನೆಯಾಗಿದೆ. ಇದು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಭಾರತದ ಭಾಗವಾಗಲಿದೆ ಎಂದು ಹೇಳುತ್ತದೆ.

”ಆಧ್ಯಾತ್ಮಿಕ ಜಗತ್ತಿನಲ್ಲಿ ಪಾಕಿಸ್ತಾನವು ವಾಸ್ತವವಲ್ಲ, ಆ ದೇಶ ಇಷ್ಟು ದಿನ ಬದುಕಿರುವುದೇ ಅದೃಷ್ಟದಿಂದ.. ಅದು ಇರುವವರೆಗೂ ಭೂಮಿಗೆ ಹೊರೆಯಾಗಲಿದೆ. ಶೀಘ್ರದಲ್ಲೇ ಭಾರತಕ್ಕೆ ಸೇರುವುದು ಪಾಕಿಸ್ತಾನದ  ಆಸಕ್ತಿಯಾಗಿದೆ” ಎಂದು ಸಂದರ್ಶನದಲ್ಲಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...