Homeಕರೋನಾ ತಲ್ಲಣಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್‌ನಲ್ಲಿ ಕೇವಲ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಶುಕ್ರವಾರದಂದು 49 ಹೊಸ ಪ್ರಕರಣಗಳು ವರದಿಯಾಗಿವೆ

- Advertisement -
- Advertisement -

ಪಂಜಾಬ್‌ನ ಅಮರಿಂದರ್‌ ನೇತೃತ್ವದ ಸರ್ಕಾರವು ಆಗಸ್ಟ್ 2 ರಿಂದ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ರಾಜ್ಯದ ಎಲ್ಲಾ ತರಗತಿಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸುವುದಾಗಿ ಶನಿವಾರ ಪ್ರಕಟಿಸಿದೆ.

ಪಂಜಾಬ್ ಸರ್ಕಾರದ ಅಧಿಸೂಚನೆಯ ಪ್ರಕಾರ, ಕೊರೊನಾ ಸೂಕ್ತ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ಶಾಲೆಗಳು ಸರಿಯಾದ ಮಾರ್ಗಸೂಚಿಯನ್ನು ಅನುಸರಿಸುವ ನಿರೀಕ್ಷೆಯಿದೆ. “ಶಾಲಾ ಶಿಕ್ಷಣ ಇಲಾಖೆಯು ಈ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಂಜಾಬ್‌ನಲ್ಲಿ ಸುಮಾರು ನಾಲ್ಕು ತಿಂಗಳು ಮುಚ್ಚಿದ್ದ 10 ರಿಂದ 12 ನೇ ತರಗತಿಯ ಶಾಲೆಗಳು ಜುಲೈ 26 ರಂದು ಪುನಾರಂಭಗೊಂಡಿದ್ದವು. ಆ ಸಮಯದಲ್ಲಿ, ಶಾಲಾ ಶಿಕ್ಷಣ ಇಲಾಖೆಯು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿ, ಸಂಪೂರ್ಣವಾಗಿ ಲಸಿಕೆ ಹಾಕಿದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮಾತ್ರ ಶಾಲೆಗಳಿಗೆ ಖುದ್ದಾಗಿ ಹಾಜರಾಗಲು ಅನುಮತಿ ನೀಡಿದ್ದವು. ಮಕ್ಕಳನ್ನು ತರಗತಿಗಳಿಗೆ ಹಾಜರಾಗಲು ಪೋಷಕರಿಂದ ಲಿಖಿತ ಒಪ್ಪಿಗೆ ಪಡೆಯುವುದನ್ನು ಶಾಲೆಗಳಿಗೆ ಕಡ್ಡಾಯ ಮಾಡಲಾಗಿತ್ತು.

ಇದನ್ನೂ ಓದಿ: ಪಂಜಾಬ್: ನವಜೋತ್ ಸಿಧುಗೆ ಆಡಿಯೋ ಸಂದೇಶ ನೀಡಿ, ಕಾಂಗ್ರೆಸ್ ಕಾರ್ಯಕರ್ತ ಸಾವು

ಶುಕ್ರವಾರ, ಪಂಜಾಬ್‌ನಲ್ಲಿ 49 ಹೊಸ ಕೊರೊನಾ ಪ್ರಕರಣಗಳನ್ನು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5.99 ಲಕ್ಷಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದಂದು ರಾಜ್ಯದಲ್ಲಿ ಯಾವುದೇ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ.

ಪಂಜಾಬ್‌ನಲ್ಲಿ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಹೆಚ್ಚಿನ ಹೊಸ ಸೋಂಕುಗಳು ಜಲಂಧರ್, ಫಿರೋಜ್‌ಪುರ ಮತ್ತು ಲುಧಿಯಾನದಿಂದ ವರದಿಯಾಗಿವೆ.

ರಾಜ್ಯದ ಶಾಲೆಗಳು ದೈಹಿಕ ತರಗತಿಗಳ ಜೊತೆಗೆ ಆನ್‌ಲೈನ್‌ ತರಗತಿಗಳನ್ನು ಕೂಡಾ ನಡೆಸುತ್ತಿವೆ. ಭಾರತದ ಇತರ ಹಲವು ರಾಜ್ಯಗಳು ಕೆಲವು ವಯೋಮಾನದ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸಲು ಅವಕಾಶ ನೀಡಿವೆ.

ಕರ್ನಾಟಕದಲ್ಲೂ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳಿಗೆ ಹಾಜರಾಗಳು ಅನುಮತಿ ನೀಡಲಾಗಿದೆ. ಉಳಿದಂತೆ ಆನ್‌ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...