Homeಕರೋನಾ ತಲ್ಲಣಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್‌ನಲ್ಲಿ ಕೇವಲ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಶುಕ್ರವಾರದಂದು 49 ಹೊಸ ಪ್ರಕರಣಗಳು ವರದಿಯಾಗಿವೆ

- Advertisement -
- Advertisement -

ಪಂಜಾಬ್‌ನ ಅಮರಿಂದರ್‌ ನೇತೃತ್ವದ ಸರ್ಕಾರವು ಆಗಸ್ಟ್ 2 ರಿಂದ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ರಾಜ್ಯದ ಎಲ್ಲಾ ತರಗತಿಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸುವುದಾಗಿ ಶನಿವಾರ ಪ್ರಕಟಿಸಿದೆ.

ಪಂಜಾಬ್ ಸರ್ಕಾರದ ಅಧಿಸೂಚನೆಯ ಪ್ರಕಾರ, ಕೊರೊನಾ ಸೂಕ್ತ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ಶಾಲೆಗಳು ಸರಿಯಾದ ಮಾರ್ಗಸೂಚಿಯನ್ನು ಅನುಸರಿಸುವ ನಿರೀಕ್ಷೆಯಿದೆ. “ಶಾಲಾ ಶಿಕ್ಷಣ ಇಲಾಖೆಯು ಈ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಂಜಾಬ್‌ನಲ್ಲಿ ಸುಮಾರು ನಾಲ್ಕು ತಿಂಗಳು ಮುಚ್ಚಿದ್ದ 10 ರಿಂದ 12 ನೇ ತರಗತಿಯ ಶಾಲೆಗಳು ಜುಲೈ 26 ರಂದು ಪುನಾರಂಭಗೊಂಡಿದ್ದವು. ಆ ಸಮಯದಲ್ಲಿ, ಶಾಲಾ ಶಿಕ್ಷಣ ಇಲಾಖೆಯು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿ, ಸಂಪೂರ್ಣವಾಗಿ ಲಸಿಕೆ ಹಾಕಿದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮಾತ್ರ ಶಾಲೆಗಳಿಗೆ ಖುದ್ದಾಗಿ ಹಾಜರಾಗಲು ಅನುಮತಿ ನೀಡಿದ್ದವು. ಮಕ್ಕಳನ್ನು ತರಗತಿಗಳಿಗೆ ಹಾಜರಾಗಲು ಪೋಷಕರಿಂದ ಲಿಖಿತ ಒಪ್ಪಿಗೆ ಪಡೆಯುವುದನ್ನು ಶಾಲೆಗಳಿಗೆ ಕಡ್ಡಾಯ ಮಾಡಲಾಗಿತ್ತು.

ಇದನ್ನೂ ಓದಿ: ಪಂಜಾಬ್: ನವಜೋತ್ ಸಿಧುಗೆ ಆಡಿಯೋ ಸಂದೇಶ ನೀಡಿ, ಕಾಂಗ್ರೆಸ್ ಕಾರ್ಯಕರ್ತ ಸಾವು

ಶುಕ್ರವಾರ, ಪಂಜಾಬ್‌ನಲ್ಲಿ 49 ಹೊಸ ಕೊರೊನಾ ಪ್ರಕರಣಗಳನ್ನು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5.99 ಲಕ್ಷಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದಂದು ರಾಜ್ಯದಲ್ಲಿ ಯಾವುದೇ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ.

ಪಂಜಾಬ್‌ನಲ್ಲಿ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಹೆಚ್ಚಿನ ಹೊಸ ಸೋಂಕುಗಳು ಜಲಂಧರ್, ಫಿರೋಜ್‌ಪುರ ಮತ್ತು ಲುಧಿಯಾನದಿಂದ ವರದಿಯಾಗಿವೆ.

ರಾಜ್ಯದ ಶಾಲೆಗಳು ದೈಹಿಕ ತರಗತಿಗಳ ಜೊತೆಗೆ ಆನ್‌ಲೈನ್‌ ತರಗತಿಗಳನ್ನು ಕೂಡಾ ನಡೆಸುತ್ತಿವೆ. ಭಾರತದ ಇತರ ಹಲವು ರಾಜ್ಯಗಳು ಕೆಲವು ವಯೋಮಾನದ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸಲು ಅವಕಾಶ ನೀಡಿವೆ.

ಕರ್ನಾಟಕದಲ್ಲೂ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳಿಗೆ ಹಾಜರಾಗಳು ಅನುಮತಿ ನೀಡಲಾಗಿದೆ. ಉಳಿದಂತೆ ಆನ್‌ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....