Homeಮುಖಪುಟಎಕ್ಸಿಟ್ ಪೋಲ್‌ಗಳೆಲ್ಲವೂ ಸುಳ್ಳು: ಪರಕಾಲ ಪ್ರಭಾಕರ್

ಎಕ್ಸಿಟ್ ಪೋಲ್‌ಗಳೆಲ್ಲವೂ ಸುಳ್ಳು: ಪರಕಾಲ ಪ್ರಭಾಕರ್

- Advertisement -
- Advertisement -

ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಟೀಕಿಸಿದ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಪರಕಾಲ ಪ್ರಭಾಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನಿಲುವು ಇರುವುದರಿಂದ ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಹೇಳಿದ್ದಾರೆ.

ಮಾಜಿ ಸಂಸದ ಮತ್ತು ಅವಿಭಜಿತ ಆಂಧ್ರಪ್ರದೇಶದ ಮಾಜಿ ಕೃಷಿ ಸಚಿವ ಶೋಬನಾದ್ರೀಶ್ವರ ರಾವ್ ಅವರು ಬರೆದಿರುವ ‘ಅವಿನೀತಿ ಚಕ್ರವರ್ತಿ ನರೇಂದ್ರ ಮೋದಿ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದ ಪರಕಾಲ ಪ್ರಭಾಕರ್, ಮತ ಎಣಿಕೆ ಸಂದರ್ಭದಲ್ಲಿ ಎನ್‌ಡಿಎಗೆ ನೆರವಾಗುವ ಏಕೈಕ ಉದ್ದೇಶದಿಂದ ಸುಳ್ಳು ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಕೇವಲ 10 ಲೋಕಸಭೆ ಕ್ಷೇತ್ರಗಳಿರುವ ರಾಜ್ಯದಲ್ಲಿ ಎನ್‌ಡಿಎಗೆ 13 ಸ್ಥಾನಗಳು ಎಂಬಂತಹ ಫಲಿತಾಂಶಗಳನ್ನು ನೀಡಿದ ಎಕ್ಸಿಟ್‌ ಪೋಲ್‌ ಲೋಪವನ್ನು ಎತ್ತಿ ತೋರಿಸಿದ ಪ್ರಭಾಕರ್, ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಟೀಕಿಸಿದ್ದಾರೆ.

ಚುನಾವಣೆ ಮುಗಿದಿರುವುದರಿಂದ ಯಾರೂ ನಿರಾಶರಾಗುವ ಅಗತ್ಯವಿಲ್ಲ. ಹೆಚ್ಚಿನ ನಿರ್ಗಮನ ಸಮೀಕ್ಷೆಗಳು ಬೋಗಸ್. ಎಕ್ಸಿಟ್ ಪೋಲ್‌ಗಳನ್ನು ಎನ್‌ಡಿಎ ನಡೆಸಿದೆ. ಎನ್‌ಡಿಎಯನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮತ ಎಣಿಕೆ ವೇಳೆಯಲ್ಲಿ ಅಕ್ರಮ ಮಾಡಲು ಎನ್‌ಡಿಎ ಶಕ್ತಿಮೀರಿ ಪ್ರಯತ್ನಿಸಲಿದೆ. ಅದರ ಭಾಗವಾಗಿಯೇ ಎನ್‌ಡಿಎ ಪರ ಧನಾತ್ಮಕ ಸಮೀಕ್ಷೆಗಳು ಬಂದಿದೆ. ಮತ ಎಣಿಕೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜಾಗೃತರಾಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಯಾವತ್ತೂ ಸತ್ಯ ಹೇಳಿಲ್ಲ, ನಂಬುವ ಅಗತ್ಯವಿಲ್ಲ ಎಂದು ಶೋಬಾನಾದ್ರೀಶ್ವರರಾವ್ ಹೇಳಿದ್ದಾರೆ. ಕೃಷಿ ಕ್ಷೇತ್ರವನ್ನು ನಿರ್ನಾಮ ಮಾಡಲು ಮೋದಿ ಸಂಕಲ್ಪ ಮಾಡಿದ್ದಾರೆ. ಅವರನ್ನು ಸೋಲಿಸಬೇಕಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಯುಪಿಎ ಸರಕಾರ ಎಡಪಕ್ಷಗಳ ಬೆಂಬಲದೊಂದಿಗೆ ಉದ್ಯೋಗ ಖಾತ್ರಿ, ಆಹಾರ ಭದ್ರತೆ ಕಾಯಿದೆಯಂತಹ ಹಲವು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿತ್ತು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನದ ಬೆನ್ನಲ್ಲೆ ಮಾಧ್ಯಮಗಳು ಎಕ್ಸಿಟ್‌ ಪೋಲ್‌ಗಳ ಫಲಿತಾಂಶವನ್ನು ಪ್ರಕಟಿಸಿತ್ತು, ಎಲ್ಲಾ ಎಕ್ಸಿಟ್‌ ಪೋಲ್‌ಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿತ್ತು. ಆದರೆ ಈ ಎಕ್ಸಿಟ್‌ ಪೋಲ್‌ಗಳನ್ನು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕರು ತಿರಸ್ಕರಿಸಿದ್ದರು. ಮಾಧ್ಯಮಗಳ ಎಕ್ಸಿಟ್‌ ಪೋಲ್‌ಗಳನ್ನು ರಾಹುಲ್‌ ಗಾಂಧಿ ‘ಮೋದಿ ಪೋಲ್‌’ ಎಂದು ಕರೆದರೆ, ಎಕ್ಸಿಟ್‌ ಪೋಲ್‌ನ್ನು ಎರಡು ತಿಂಗಳ ಮೊದಲೇ ಮನೆಯಲ್ಲಿ ಕುಳಿತು ತಯಾರಿಸಲಾಗಿದೆ ಎಂದು ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

 ಇದನ್ನು ಓದಿ: ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...