Homeಅಂತರಾಷ್ಟ್ರೀಯAll eyes on Madleen | ನೆರವು ಹೊತ್ತು ಗಾಝಾದತ್ತ 'ಮದ್ಲೀನ್' ಹಡಗು; ಇಸ್ರೇಲ್‌ನ ನೌಕಾ...

All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!

ಈ ಪ್ರಯಾಣ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಇಟಲಿಯ ಸಿಸಿಲಿಯಿಂದ ಭಾನುವಾರ ಹೊರಟಿದೆ. ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಮತ್ತು ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿದ್ದಾರೆ ಎಂದು ವರದಿಯಾಗಿದೆ. All eyes on Madleene,All eyes on Madeleine Madleen

ಈ ಹಿಂದೆ ನೆರವಿನೊಂದಿಗೆ ಹೊರಟಿದ್ದ ಅದರ ಹಡಗಿನ ಮೇಲೆ ಮೆಡಿಟರೇನಿಯನ್‌ ಸಮುದ್ರದಲ್ಲಿ ಡ್ರೋನ್ ದಾಳಿಗಳಾಗಿದ್ದವು. ಹಾಗಾಗಿ, ಅಂತರರಾಷ್ಟ್ರೀಯ ಲಾಭರಹಿತ ಸಂಸ್ಥೆಯಾಗಿರುವ ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)ವು ಗಾಝಾಗೆ ಮಾನವೀಯ ನೆರವು ಈ ಬಾರಿ ಟ್ರ್ಯಾಕರ್‌ನೊಂದಿಗೆ ತನ್ನ ‘ಮದ್ಲೀನ್’ ಹಡಗನ್ನು ಮುನ್ನಡೆಸುತ್ತಿದ್ದು ಇಸ್ರೇಲ್‌ ವಸಾಹತುಗಾರರು ಗಾಝಾದ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು ಮುರಿಯಲು ಮುಂದಾಗಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

“ಮಾಲ್ಟಾ ಕರಾವಳಿಯ ಅಂತರರಾಷ್ಟ್ರೀಯ ಸಮುದ್ರದಲ್ಲಿ ಇಸ್ರೇಲಿ ಡ್ರೋನ್‌ಗಳು ಮತ್ತೊಂದು ಫ್ರೀಡಂ ಫ್ಲೋಟಿಲ್ಲಾ ನೆರವು ಹಡಗಿನ ಕಾನ್ಸೈನ್ಸ್ ಮೇಲೆ ಬಾಂಬ್ ದಾಳಿ ಮಾಡಿದ ಕೇವಲ ಒಂದು ತಿಂಗಳ ನಂತರ ಈ ಹಡಗು ಹೊರಟಿದೆ. ಇದು ಗಾಝಾದ ಮುತ್ತಿಗೆಯನ್ನು ಮುರಿಯುವ ಈ ಕಾರ್ಯಾಚರಣೆಯ ತುರ್ತು ಮತ್ತು ಅಪಾಯವನ್ನು ಒತ್ತಿಹೇಳುತ್ತದೆ” ಎಂದು ಒಕ್ಕೂಟ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಲೀನ್ ಹಡಗು ಶಿಶು ಆಹಾರ, ಹಿಟ್ಟು, ಅಕ್ಕಿ, ಡೈಪರ್‌ಗಳು, ಮಹಿಳೆಯರ ನೈರ್ಮಲ್ಯ ಉತ್ಪನ್ನಗಳು, ನೀರಿನ ಡೀಸಲಿನೇಷನ್ ಕಿಟ್‌ಗಳು, ವೈದ್ಯಕೀಯ ಸರಬರಾಜುಗಳು, ಊರುಗೋಲುಗಳು ಮತ್ತು ಮಕ್ಕಳ ಪ್ರಾಸ್ಥೆಟಿಕ್ಸ್ ಅನ್ನು ಹೊತ್ತೊಯ್ಯುತ್ತಿದೆ ಎಂದು ಒಕ್ಕೂಟ ತಿಳಿಸಿದೆ.

 

View this post on Instagram

 

A post shared by AJ+ (@ajplus)

ಇಸ್ರೇಲಿ ವಸಾಹತುಗಾರರು ಮುತ್ತಿಗೆ ಹಾಕಿದ ಪ್ಯಾಲೆಸ್ತೀನಿ ಪ್ರದೇಶವಾದ ಗಾಝಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಗಳ ಬಗ್ಗೆ ಅಂತರರಾಷ್ಟ್ರೀಯ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿರುವುದರಿಂದ, ಈ ಸಹಾಯವು ಪ್ರಮಾಣದಲ್ಲಿ ಸೀಮಿತವಾಗಿದ್ದರೂ, ನಿರ್ಣಾಯಕ ಉದ್ದೇಶವನ್ನುಹೊಂದಿದೆ ಎಂದು ಒಕ್ಕೂಟ ಹೇಳಿದೆ.

ಗಾಝಾದಲ್ಲಿ ಇಸ್ರೇಲ್‌ನ “ಅಕ್ರಮ ಮುತ್ತಿಗೆ ಮತ್ತು ಹೆಚ್ಚುತ್ತಿರುವ ಯುದ್ಧ ಅಪರಾಧ”ಗಳ ವಿರುದ್ಧ ನಾಗರಿಕ ಪ್ರತಿರೋಧದ ಅಹಿಂಸಾತ್ಮಕ ಕ್ರಿಯೆ ಇದಾಗಿದೆ ಎಂದು ಒಕ್ಕೂಟ ಹೇಳಿದೆ.

ಮದ್ಲೀನ್ ಅಂತರರಾಷ್ಟ್ರೀಯ ಕಡಲ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುವ ನಿರಾಯುಧ ನಾಗರಿಕ ಹಡಗು ಎಂದು ಅವರು ಹೇಳಿದ್ದು, ಯಾವುದೇ ಪ್ರತಿಬಂಧ ಇಲ್ಲದಿದ್ದರೆ ಹಡಗು ಗಾಝಾಗೆ ತಲುಪಲು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ.

ಹಗಡಿನಲ್ಲಿ ಇರುವ ಮತ್ತೊಬ್ಬ ಪ್ರಯಾಣಿಕರಾದ ಥಿಯಾಗೊ ಅವಿಲಾ ಅವರು ಮಾತನಾಡಿ, “ನಾವು ಸಮುದ್ರದ ಮೂಲಕ ಗಾಝಾದ ಮುತ್ತಿಗೆಯನ್ನು ಮುರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ. ವೈದ್ಯರು, ವಕೀಲರು ಮತ್ತು ಮಾಧ್ಯಮದ ಸದಸ್ಯರಿರುವ ಅಂತರರಾಷ್ಟ್ರೀಯ ಉಪಕ್ರಮವಾದ ಗ್ಲೋಬಲ್ ಮಾರ್ಚ್ ಟು ಗಾಜಾ ಬಗ್ಗೆಯೂ ಅವಿಲಾ ಪ್ರಸ್ತಾಪಿಸಿದ್ದು, ಈ ಅಂತರರಾಷ್ಟ್ರೀಯ ಉಪಕ್ರಮವು ಜೂನ್ ಮಧ್ಯದಲ್ಲಿ ಈಜಿಪ್ಟ್‌ನಿಂದ ಹೊರಟು ರಫಾ ಕ್ರಾಸಿಂಗ್‌ಗೆ ತಲುಪಿ ಅಲ್ಲಿ ಪ್ರತಿಭಟನೆ ನಡೆಸಲಿದ್ದು, ಗಾಝಾ ಆಕ್ರಮಣವನ್ನು ನಿಲ್ಲಿಸಿ ಗಡಿಯನ್ನು ಮತ್ತೆ ತೆರೆಯುವಂತೆ ಇಸ್ರೇಲ್‌ಗೆ ಕರೆ ನೀಡಲಿದೆ ಎಂದು ಹೇಳಿದ್ದಾರೆ.

ಪ್ರದೇಶದ ಸುಮಾರು 20 ಲಕ್ಷ ನಿವಾಸಿಗಳು ಹಸಿವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಸಹ ಸಂಸ್ಥೆಗಳು ಮತ್ತು ಪ್ರಮುಖ ಮಾನವೀಯ ಸಂಸ್ಥೆಗಳು ಗಾಝಾದಲ್ಲಿನ ಭೀಕರ ಪರಿಸ್ಥಿತಿಗಳನ್ನು ವರದಿ ಮಾಡುತ್ತಲೇ ಇವೆ. ವಸಾಹತುಗಾರ ಇಸ್ರೇಲಿ ನಿರ್ಬಂಧಗಳು, ನಾಗರಿಕ ಸುವ್ಯವಸ್ಥೆಯಲ್ಲಿನ ಕುಸಿತ ಮತ್ತು ವ್ಯಾಪಕ ಲೂಟಿಯು ನೆರವು ವಿತರಣೆಗೆ ಪ್ರಾಥಮಿಕ ಅಡೆತಡೆಗಳಾಗಿ ಅವರು ಉಲ್ಲೇಖಿಸಿದ್ದಾರೆ.

ಪ್ರದೇಶವನ್ನು ಆಳುತ್ತಿರುವ ಪ್ಯಾಲೆಸ್ತೀನ್‌ ಹೋರಾಟಗಾರ ಸಂಘಟನೆ ಹಮಾಸ್‌ನಿಂದ ಭದ್ರತಾ ಬೆದರಿಕೆಗಳನ್ನು ಉಲ್ಲೇಖಿಸಿ ಇಸ್ರೇಲ್ ಒಂದು ದಶಕಕ್ಕೂ ಹೆಚ್ಚು ಕಾಲ ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಜಾರಿಗೊಳಿಸಿದೆ. ಆದಾಗ್ಯೂ, ಈ ದಿಗ್ಬಂಧನವು ಸಾಮೂಹಿಕ ಶಿಕ್ಷೆಗೆ ಸಮನಾಗಿರುತ್ತದೆ ಮತ್ತು ಮಾನವೀಯ ಬಿಕ್ಕಟ್ಟನ್ನು ಗಮನಾರ್ಹವಾಗಿ ಹದಗೆಡಿಸುತ್ತದೆ ಎಂದು ಮಾನವ ಹಕ್ಕುಗಳ ಗುಂಪುಗಳು ವಾದಿಸುತ್ತವೆ.

ಹಿಂದಿನ ಫ್ಲೋಟಿಲ್ಲಾ ಹಡಗಾದ ಮಾವಿ ಮರ್ಮರದ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ 2010 ರಲ್ಲಿ ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವನ್ನು ಸ್ಥಾಪಿಸಲಾಯಿತು. ಈ ವೇಳೆ 10 ಮಾನವ ಹಕ್ಕುಗಳ ಹೋರಾಟಗಾರರು ಸಾವಿಗೀಡಾಗಿದ್ದರು.

ಮದ್ಲೀನ್ ಹಡಗಿನ ಸುರಕ್ಷಿತ ಮಾರ್ಗವನ್ನು ಖಾತರಿಪಡಿಸುವಂತೆ ವಿಶ್ವದ ಸರ್ಕಾರಗಳಿಗೆ ಒಕ್ಕೂಟ ಕರೆ ನೀಡಿದೆ ಮತ್ತು ಕಾರ್ಯಾಚರಣೆಯ ನಿಖರ ಮತ್ತು ನಿರಂತರ ವರದಿಯನ್ನು ಒದಗಿಸುವಂತೆ ಮಾಧ್ಯಮಗಳನ್ನು ಒತ್ತಾಯಿಸಿದೆ. ಸಂಭಾವ್ಯ ಸಂಘರ್ಷದ ಆತಂಕಗಳ ನಡುವೆ ಹಡಗಿನ ಪ್ರಯಾಣವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ. ಅಷ್ಟೆ ಅಲ್ಲದೆ, ಫೋರೆನ್ಸಿಕ್ ಆರ್ಕಿಟೆಕ್ಚರ್‌ನ ಸಹಭಾಗಿತ್ವದಲ್ಲಿ, ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ‘ಮದ್ಲೀನ್’ ಹಡಗನ್ನು ಸುಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯೊಂದಿಗೆ ಸಜ್ಜುಗೊಳಿಸಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

“ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾನೂನುಬಾಹಿರವೆಂದು ಪರಿಗಣಿಸಲಾದ ಇಸ್ರೇಲ್‌ನ ದಿಗ್ಬಂಧನವನ್ನು ಪ್ರಶ್ನಿಸಲು ಮದ್ಲೀನ್ ಗಾಝಾದ ಕಡೆಗೆ ಸಾಗುತ್ತಿದೆ. ಈ ವೇಳೆ ಇಸ್ರೇಲಿ ನೌಕಾ ಪಡೆಗಳಿಂದ ಪ್ರತಿಬಂಧನಲಕ್ಕೆ ಒಳಗಾಗುವ ಅಪಾಯವಿದೆ. ಹಿಂದಿನ ಫ್ಲೋಟಿಲ್ಲಾಗಳು ಹಿಂಸಾತ್ಮಕ ದಾಳಿಗಳು, ಕಾನೂನುಬಾಹಿರ ಬಂಧನಗಳು ಮತ್ತು ಮಾನವೀಯ ಕಾರ್ಯಾಚರಣೆಗಳ ಅಡಚಣೆಯನ್ನು ಎದುರಿಸಿವೆ. ಈ ಸಂದರ್ಭದಲ್ಲಿ, ಟ್ರ್ಯಾಕರ್ ಕೇವಲ ಸಂಚಾರ ಸಾಧನವಲ್ಲ; ಇದು ರಕ್ಷಣೆಯ ಒಂದು ರೂಪವಾಗಿದೆ,” ಎಂದು ಮದ್ಲೀನ್ ಟ್ರ್ಯಾಕರ್‌ನಲ್ಲಿ ಹೇಳಿದೆ. All eyes on Madleen

ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆ ಮದ್ಲೀನ್ ಬಗ್ಗೆ ಅಜ್‌ಜಝೀರಾ ಮಾಧ್ಯಮ ಮಾಡಿರುವ ಸಾಕ್ಷ್ಯ ಚಿತ್ರ ನೋಡಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...