Homeಅಂತರಾಷ್ಟ್ರೀಯAll eyes on Madleen | ನೆರವು ಹೊತ್ತು ಗಾಝಾದತ್ತ 'ಮದ್ಲೀನ್' ಹಡಗು; ಇಸ್ರೇಲ್‌ನ ನೌಕಾ...

All eyes on Madleen | ನೆರವು ಹೊತ್ತು ಗಾಝಾದತ್ತ ‘ಮದ್ಲೀನ್’ ಹಡಗು; ಇಸ್ರೇಲ್‌ನ ನೌಕಾ ದಿಗ್ಬಂಧನ ಮುರಿಯಲಿದೆಯೆ!

ಈ ಪ್ರಯಾಣ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಇಟಲಿಯ ಸಿಸಿಲಿಯಿಂದ ಭಾನುವಾರ ಹೊರಟಿದೆ. ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಮತ್ತು ಫ್ರೆಂಚ್ ಸಂಸದೆ ರಿಮಾ ಹಸನ್ ಸೇರಿದಂತೆ ಇತರರು ಹಡಗಿನಲ್ಲಿದ್ದಾರೆ ಎಂದು ವರದಿಯಾಗಿದೆ. All eyes on Madleene,All eyes on Madeleine Madleen

ಈ ಹಿಂದೆ ನೆರವಿನೊಂದಿಗೆ ಹೊರಟಿದ್ದ ಅದರ ಹಡಗಿನ ಮೇಲೆ ಮೆಡಿಟರೇನಿಯನ್‌ ಸಮುದ್ರದಲ್ಲಿ ಡ್ರೋನ್ ದಾಳಿಗಳಾಗಿದ್ದವು. ಹಾಗಾಗಿ, ಅಂತರರಾಷ್ಟ್ರೀಯ ಲಾಭರಹಿತ ಸಂಸ್ಥೆಯಾಗಿರುವ ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)ವು ಗಾಝಾಗೆ ಮಾನವೀಯ ನೆರವು ಈ ಬಾರಿ ಟ್ರ್ಯಾಕರ್‌ನೊಂದಿಗೆ ತನ್ನ ‘ಮದ್ಲೀನ್’ ಹಡಗನ್ನು ಮುನ್ನಡೆಸುತ್ತಿದ್ದು ಇಸ್ರೇಲ್‌ ವಸಾಹತುಗಾರರು ಗಾಝಾದ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು ಮುರಿಯಲು ಮುಂದಾಗಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿದೆ.

“ಮಾಲ್ಟಾ ಕರಾವಳಿಯ ಅಂತರರಾಷ್ಟ್ರೀಯ ಸಮುದ್ರದಲ್ಲಿ ಇಸ್ರೇಲಿ ಡ್ರೋನ್‌ಗಳು ಮತ್ತೊಂದು ಫ್ರೀಡಂ ಫ್ಲೋಟಿಲ್ಲಾ ನೆರವು ಹಡಗಿನ ಕಾನ್ಸೈನ್ಸ್ ಮೇಲೆ ಬಾಂಬ್ ದಾಳಿ ಮಾಡಿದ ಕೇವಲ ಒಂದು ತಿಂಗಳ ನಂತರ ಈ ಹಡಗು ಹೊರಟಿದೆ. ಇದು ಗಾಝಾದ ಮುತ್ತಿಗೆಯನ್ನು ಮುರಿಯುವ ಈ ಕಾರ್ಯಾಚರಣೆಯ ತುರ್ತು ಮತ್ತು ಅಪಾಯವನ್ನು ಒತ್ತಿಹೇಳುತ್ತದೆ” ಎಂದು ಒಕ್ಕೂಟ ಹೇಳಿಕೆಯಲ್ಲಿ ತಿಳಿಸಿದೆ.

ಮದ್ಲೀನ್ ಹಡಗು ಶಿಶು ಆಹಾರ, ಹಿಟ್ಟು, ಅಕ್ಕಿ, ಡೈಪರ್‌ಗಳು, ಮಹಿಳೆಯರ ನೈರ್ಮಲ್ಯ ಉತ್ಪನ್ನಗಳು, ನೀರಿನ ಡೀಸಲಿನೇಷನ್ ಕಿಟ್‌ಗಳು, ವೈದ್ಯಕೀಯ ಸರಬರಾಜುಗಳು, ಊರುಗೋಲುಗಳು ಮತ್ತು ಮಕ್ಕಳ ಪ್ರಾಸ್ಥೆಟಿಕ್ಸ್ ಅನ್ನು ಹೊತ್ತೊಯ್ಯುತ್ತಿದೆ ಎಂದು ಒಕ್ಕೂಟ ತಿಳಿಸಿದೆ.

 

View this post on Instagram

 

A post shared by AJ+ (@ajplus)

ಇಸ್ರೇಲಿ ವಸಾಹತುಗಾರರು ಮುತ್ತಿಗೆ ಹಾಕಿದ ಪ್ಯಾಲೆಸ್ತೀನಿ ಪ್ರದೇಶವಾದ ಗಾಝಾದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಗಳ ಬಗ್ಗೆ ಅಂತರರಾಷ್ಟ್ರೀಯ ಗಮನವನ್ನು ಸೆಳೆಯಲು ಪ್ರಯತ್ನಿಸುತ್ತಿರುವುದರಿಂದ, ಈ ಸಹಾಯವು ಪ್ರಮಾಣದಲ್ಲಿ ಸೀಮಿತವಾಗಿದ್ದರೂ, ನಿರ್ಣಾಯಕ ಉದ್ದೇಶವನ್ನುಹೊಂದಿದೆ ಎಂದು ಒಕ್ಕೂಟ ಹೇಳಿದೆ.

ಗಾಝಾದಲ್ಲಿ ಇಸ್ರೇಲ್‌ನ “ಅಕ್ರಮ ಮುತ್ತಿಗೆ ಮತ್ತು ಹೆಚ್ಚುತ್ತಿರುವ ಯುದ್ಧ ಅಪರಾಧ”ಗಳ ವಿರುದ್ಧ ನಾಗರಿಕ ಪ್ರತಿರೋಧದ ಅಹಿಂಸಾತ್ಮಕ ಕ್ರಿಯೆ ಇದಾಗಿದೆ ಎಂದು ಒಕ್ಕೂಟ ಹೇಳಿದೆ.

ಮದ್ಲೀನ್ ಅಂತರರಾಷ್ಟ್ರೀಯ ಕಡಲ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುವ ನಿರಾಯುಧ ನಾಗರಿಕ ಹಡಗು ಎಂದು ಅವರು ಹೇಳಿದ್ದು, ಯಾವುದೇ ಪ್ರತಿಬಂಧ ಇಲ್ಲದಿದ್ದರೆ ಹಡಗು ಗಾಝಾಗೆ ತಲುಪಲು ಏಳು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದಾರೆ.

“ಈ ಕಾರ್ಯಾಚರಣೆ ಎಷ್ಟೇ ಅಪಾಯಕಾರಿಯಾಗಿದ್ದರೂ, ನರಮೇಧಕ್ಕೆ ಒಳಗಾಗುತ್ತಿರುವ ಜೀವಗಳ ಮುಂದೆ ಇಡೀ ಪ್ರಪಂಚದ ಮೌನದಷ್ಟು ಅಪಾಯಕಾರಿ ಅಲ್ಲ” ಎಂದು ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರು ಹೇಳಿದ್ದಾರೆ.

ಹಗಡಿನಲ್ಲಿ ಇರುವ ಮತ್ತೊಬ್ಬ ಪ್ರಯಾಣಿಕರಾದ ಥಿಯಾಗೊ ಅವಿಲಾ ಅವರು ಮಾತನಾಡಿ, “ನಾವು ಸಮುದ್ರದ ಮೂಲಕ ಗಾಝಾದ ಮುತ್ತಿಗೆಯನ್ನು ಮುರಿಯುತ್ತಿದ್ದೇವೆ” ಎಂದು ಹೇಳಿದ್ದಾರೆ. ವೈದ್ಯರು, ವಕೀಲರು ಮತ್ತು ಮಾಧ್ಯಮದ ಸದಸ್ಯರಿರುವ ಅಂತರರಾಷ್ಟ್ರೀಯ ಉಪಕ್ರಮವಾದ ಗ್ಲೋಬಲ್ ಮಾರ್ಚ್ ಟು ಗಾಜಾ ಬಗ್ಗೆಯೂ ಅವಿಲಾ ಪ್ರಸ್ತಾಪಿಸಿದ್ದು, ಈ ಅಂತರರಾಷ್ಟ್ರೀಯ ಉಪಕ್ರಮವು ಜೂನ್ ಮಧ್ಯದಲ್ಲಿ ಈಜಿಪ್ಟ್‌ನಿಂದ ಹೊರಟು ರಫಾ ಕ್ರಾಸಿಂಗ್‌ಗೆ ತಲುಪಿ ಅಲ್ಲಿ ಪ್ರತಿಭಟನೆ ನಡೆಸಲಿದ್ದು, ಗಾಝಾ ಆಕ್ರಮಣವನ್ನು ನಿಲ್ಲಿಸಿ ಗಡಿಯನ್ನು ಮತ್ತೆ ತೆರೆಯುವಂತೆ ಇಸ್ರೇಲ್‌ಗೆ ಕರೆ ನೀಡಲಿದೆ ಎಂದು ಹೇಳಿದ್ದಾರೆ.

ಪ್ರದೇಶದ ಸುಮಾರು 20 ಲಕ್ಷ ನಿವಾಸಿಗಳು ಹಸಿವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಸಹ ಸಂಸ್ಥೆಗಳು ಮತ್ತು ಪ್ರಮುಖ ಮಾನವೀಯ ಸಂಸ್ಥೆಗಳು ಗಾಝಾದಲ್ಲಿನ ಭೀಕರ ಪರಿಸ್ಥಿತಿಗಳನ್ನು ವರದಿ ಮಾಡುತ್ತಲೇ ಇವೆ. ವಸಾಹತುಗಾರ ಇಸ್ರೇಲಿ ನಿರ್ಬಂಧಗಳು, ನಾಗರಿಕ ಸುವ್ಯವಸ್ಥೆಯಲ್ಲಿನ ಕುಸಿತ ಮತ್ತು ವ್ಯಾಪಕ ಲೂಟಿಯು ನೆರವು ವಿತರಣೆಗೆ ಪ್ರಾಥಮಿಕ ಅಡೆತಡೆಗಳಾಗಿ ಅವರು ಉಲ್ಲೇಖಿಸಿದ್ದಾರೆ.

ಪ್ರದೇಶವನ್ನು ಆಳುತ್ತಿರುವ ಪ್ಯಾಲೆಸ್ತೀನ್‌ ಹೋರಾಟಗಾರ ಸಂಘಟನೆ ಹಮಾಸ್‌ನಿಂದ ಭದ್ರತಾ ಬೆದರಿಕೆಗಳನ್ನು ಉಲ್ಲೇಖಿಸಿ ಇಸ್ರೇಲ್ ಒಂದು ದಶಕಕ್ಕೂ ಹೆಚ್ಚು ಕಾಲ ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಜಾರಿಗೊಳಿಸಿದೆ. ಆದಾಗ್ಯೂ, ಈ ದಿಗ್ಬಂಧನವು ಸಾಮೂಹಿಕ ಶಿಕ್ಷೆಗೆ ಸಮನಾಗಿರುತ್ತದೆ ಮತ್ತು ಮಾನವೀಯ ಬಿಕ್ಕಟ್ಟನ್ನು ಗಮನಾರ್ಹವಾಗಿ ಹದಗೆಡಿಸುತ್ತದೆ ಎಂದು ಮಾನವ ಹಕ್ಕುಗಳ ಗುಂಪುಗಳು ವಾದಿಸುತ್ತವೆ.

ಹಿಂದಿನ ಫ್ಲೋಟಿಲ್ಲಾ ಹಡಗಾದ ಮಾವಿ ಮರ್ಮರದ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ 2010 ರಲ್ಲಿ ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವನ್ನು ಸ್ಥಾಪಿಸಲಾಯಿತು. ಈ ವೇಳೆ 10 ಮಾನವ ಹಕ್ಕುಗಳ ಹೋರಾಟಗಾರರು ಸಾವಿಗೀಡಾಗಿದ್ದರು.

ಮದ್ಲೀನ್ ಹಡಗಿನ ಸುರಕ್ಷಿತ ಮಾರ್ಗವನ್ನು ಖಾತರಿಪಡಿಸುವಂತೆ ವಿಶ್ವದ ಸರ್ಕಾರಗಳಿಗೆ ಒಕ್ಕೂಟ ಕರೆ ನೀಡಿದೆ ಮತ್ತು ಕಾರ್ಯಾಚರಣೆಯ ನಿಖರ ಮತ್ತು ನಿರಂತರ ವರದಿಯನ್ನು ಒದಗಿಸುವಂತೆ ಮಾಧ್ಯಮಗಳನ್ನು ಒತ್ತಾಯಿಸಿದೆ. ಸಂಭಾವ್ಯ ಸಂಘರ್ಷದ ಆತಂಕಗಳ ನಡುವೆ ಹಡಗಿನ ಪ್ರಯಾಣವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವ ನಿರೀಕ್ಷೆಯಿದೆ. ಅಷ್ಟೆ ಅಲ್ಲದೆ, ಫೋರೆನ್ಸಿಕ್ ಆರ್ಕಿಟೆಕ್ಚರ್‌ನ ಸಹಭಾಗಿತ್ವದಲ್ಲಿ, ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ‘ಮದ್ಲೀನ್’ ಹಡಗನ್ನು ಸುಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯೊಂದಿಗೆ ಸಜ್ಜುಗೊಳಿಸಿದೆ. ಮದ್ಲೀನ್ ಎಲ್ಲಿದೆ ಎಂದು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು.

“ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾನೂನುಬಾಹಿರವೆಂದು ಪರಿಗಣಿಸಲಾದ ಇಸ್ರೇಲ್‌ನ ದಿಗ್ಬಂಧನವನ್ನು ಪ್ರಶ್ನಿಸಲು ಮದ್ಲೀನ್ ಗಾಝಾದ ಕಡೆಗೆ ಸಾಗುತ್ತಿದೆ. ಈ ವೇಳೆ ಇಸ್ರೇಲಿ ನೌಕಾ ಪಡೆಗಳಿಂದ ಪ್ರತಿಬಂಧನಲಕ್ಕೆ ಒಳಗಾಗುವ ಅಪಾಯವಿದೆ. ಹಿಂದಿನ ಫ್ಲೋಟಿಲ್ಲಾಗಳು ಹಿಂಸಾತ್ಮಕ ದಾಳಿಗಳು, ಕಾನೂನುಬಾಹಿರ ಬಂಧನಗಳು ಮತ್ತು ಮಾನವೀಯ ಕಾರ್ಯಾಚರಣೆಗಳ ಅಡಚಣೆಯನ್ನು ಎದುರಿಸಿವೆ. ಈ ಸಂದರ್ಭದಲ್ಲಿ, ಟ್ರ್ಯಾಕರ್ ಕೇವಲ ಸಂಚಾರ ಸಾಧನವಲ್ಲ; ಇದು ರಕ್ಷಣೆಯ ಒಂದು ರೂಪವಾಗಿದೆ,” ಎಂದು ಮದ್ಲೀನ್ ಟ್ರ್ಯಾಕರ್‌ನಲ್ಲಿ ಹೇಳಿದೆ. All eyes on Madleen

ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆ ಮದ್ಲೀನ್ ಬಗ್ಗೆ ಅಜ್‌ಜಝೀರಾ ಮಾಧ್ಯಮ ಮಾಡಿರುವ ಸಾಕ್ಷ್ಯ ಚಿತ್ರ ನೋಡಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

ಸರ್ಕಾರ ಜೋಳ ಖರೀದಿಸುವಂತೆ ಒತ್ತಾಯಿಸಿ ‘ಸಿಂಧನೂರು ಬಂದ್’; ಬೃಹತ್ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...