Homeಅಂತರಾಷ್ಟ್ರೀಯಇನ್‌ಸ್ಟಾಗ್ರಾಮ್‌ನಲ್ಲಿ 44 ಮಿಲಿಯನ್ ಬಾರಿ ಶೇರ್ ಆಯ್ತು 'ಆಲ್ ಐಸ್ ಆನ್ ರಾಫಾ' ಚಿತ್ರ

ಇನ್‌ಸ್ಟಾಗ್ರಾಮ್‌ನಲ್ಲಿ 44 ಮಿಲಿಯನ್ ಬಾರಿ ಶೇರ್ ಆಯ್ತು ‘ಆಲ್ ಐಸ್ ಆನ್ ರಾಫಾ’ ಚಿತ್ರ

- Advertisement -
- Advertisement -

ಗಜಾ ನಗರದಿಂದ ಸ್ಥಳಾಂತರಗೊಂಡ ಪ್ಯಾಲೆಸ್ಟೀನಿಯನ್ನರ ಶಿಬಿರದಲ್ಲಿ ಇಸ್ರೇಲಿ ಮಾರಣಾಂತಿಕ ದಾಳಿಯ ನಂತರ ಸೋಮವಾರದಿಂದ “ಎಲ್ಲ ಕಣ್ಣುಗಳು ರಫಾಹ್” (All Eyes On Rafah) ಎಂಬ ಪದಗಳನ್ನು ಹೊಂದಿರುವ ಎಐ ರಚಿತವಾದ ಚಿತ್ರವನ್ನು 44 ದಶಲಕ್ಷಕ್ಕೂ ಹೆಚ್ಚು ಇನ್‌ಸ್ಟಾಗ್ರಾಮ್ ಖಾತೆಗಳಿಂದ ಹಂಚಿಕೊಳ್ಳಲಾಗಿದೆ.

ಹಮಾಸ್ ವಿರುದ್ಧ ಇಸ್ರೇಲ್‌ನ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಅಲ್ಲಿಗೆ ಓಡಿಹೋದ ಲಕ್ಷಾಂತರ ಪ್ಯಾಲೆಸ್ಟೀನಿಯನ್ನರನ್ನು ಸೂಚಿಸುವ, ಪರ್ವತಗಳಿಂದ ಆವೃತವಾಗಿರುವ ಮರುಭೂಮಿಯ ಭೂದೃಶ್ಯದಾದ್ಯಂತ ಅಂತ್ಯವಿಲ್ಲದೆ ಚಾಚಿಕೊಂಡಿರುವ ಡೇರೆಗಳ ಸಾಲುಗಳನ್ನು ಚಿತ್ರವು ತೋರಿಸುತ್ತಿದೆ.

ಚಿಲಿ-ಯುಎಸ್ ನಟ ಪೆಡ್ರೊ ಪ್ಯಾಸ್ಕಲ್, ಪ್ಯಾಲೇಸ್ಟಿನಿಯನ್ ಮೂಲದ ಟಾಪ್ ಮಾಡೆಲ್‌ಗಳಾದ ಬೆಲ್ಲಾ, ಗಿಗಿ ಹಡಿಡ್ ಮತ್ತು ಫ್ರೆಂಚ್ ಫುಟ್‌ಬಾಲ್ ತಾರೆ ಉಸ್ಮಾನೆ ಡೆಂಬೆಲೆ ಇದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಸೆಲೆಬ್ರಿಟಿಗಳಲ್ಲಿ ಸೇರಿದ್ದಾರೆ.

ಆನ್‌ಲೈನ್ ಮಾನಿಟರ್ ವಿಸಿಬ್ರೇನ್ ಪ್ರಕಾರ, “ಆಲ್ ಐಸ್ ಆನ್ ರಾಫಾ” ಎಂಬ ಘೋಷಣೆಯನ್ನು ಇತರ ಪ್ರಕಟಣೆಗಳು ಮತ್ತು ಸಾಮಾಜಿಕ ನೆಟ್‌ವರ್ಕ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ವಿಶೇಷವಾಗಿ ಎಕ್ಸ್, ಹ್ಯಾಶ್‌ಟ್ಯಾಗ್ #alleyesonrafah ಸುಮಾರು ಒಂದು ಮಿಲಿಯನ್ ಹಿಟ್‌ಗಳನ್ನು ಕಂಡಿದೆ.

ಈಜಿಪ್ಟ್‌ನ ಗಡಿಯಲ್ಲಿರುವ ದಕ್ಷಿಣ ಗಜಾ ನಗರದ ಮೇಲಿನ ದಾಳಿಯ ಬಗ್ಗೆ ಮೂರು ದಿನಗಳಲ್ಲಿ ಎಕ್ಸ್‌ ವೇದಿಕೆಯಲ್ಲಿ 27.5 ಮಿಲಿಯನ್ ಸಂದೇಶಗಳನ್ನು ಪ್ರಕಟಿಸಲಾಗಿದೆ; ಇದು ಅಂತರರಾಷ್ಟ್ರೀಯವಾಗಿ ಆಕ್ರೋಶವನ್ನು ಉಂಟುಮಾಡಿದೆ.

ಶಿಬಿರದ ಮೇಲೆ ಇಸ್ರೇಲಿ ನಡೆಸಿದ ದಾಳಿಯಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡು 45 ಜನರು ಸಾವನ್ನಪ್ಪಿದರು. 249 ಮಂದಿ ಗಾಯಗೊಂಡರು ಎಂದು ಗಾಜಾದ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಬ್ಬರು ಹಿರಿಯ ಹಮಾಸ್ ಉಗ್ರಗಾಮಿಗಳನ್ನು ಗುರಿಯಾಗಿಸಿ ಕೊಂದಿರುವುದಾಗಿ ಇಸ್ರೇಲ್‌ನ ಸೇನೆ ಹೇಳಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸರ್ಕಾರ ತನಿಖೆ ನಡೆಸುತ್ತಿರುವ “ದುರಂತ ಅಪಘಾತ”ದ ಕುರಿತು ಮಾತನಾಡಿದ್ದಾರೆ.

ಇಸ್ರೇಲಿ ಅಧಿಕೃತ ಅಂಕಿಅಂಶಗಳ ಆಧಾರದ ಮೇಲೆ ಎಎಫ್‌ಪಿ ಲೆಕ್ಕಾಚಾರದ ಪ್ರಕಾರ, ದಕ್ಷಿಣ ಇಸ್ರೇಲ್‌ನಲ್ಲಿ ಹಮಾಸ್‌ನ ಅಭೂತಪೂರ್ವ ಅಕ್ಟೋಬರ್ 7 ದಾಳಿಯಿಂದ ಮಾರಣಾಂತಿಕ ಗಾಜಾ ಯುದ್ಧವು 1,189 ಜನರ ಸಾವಿಗೆ ಕಾರಣವಾಯಿತು, ಹೆಚ್ಚಾಗಿ ಸಮಾನ್ಯ ನಾಗರಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಉಗ್ರಗಾಮಿಗಳು 252 ಒತ್ತೆಯಾಳುಗಳನ್ನು ಇರಿಸಿಕೊಂಡಿದ್ದು, ಅವರಲ್ಲಿ 121 ಮಂದಿ ಗಾಜಾದಲ್ಲಿ ಉಳಿದಿದ್ದಾರೆ, ಇದರಲ್ಲಿ 37 ಮಂದಿ ಸತ್ತಿದ್ದಾರೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಹಮಾಸ್ ನಡೆಸುತ್ತಿರುವ ಪ್ರದೇಶದ ಆರೋಗ್ಯ ಸಚಿವಾಲಯದ ಪ್ರಕಾರ, ಇಸ್ರೇಲ್‌ನ ಪ್ರತೀಕಾರದ ಆಕ್ರಮಣವು ಗಾಜಾದಲ್ಲಿ ಕನಿಷ್ಠ 36,171 ಜನರನ್ನು ಕೊಂದಿದೆ, ಅಲ್ಲಿಯೂ ಕೂಡ ಹೆಚ್ಚಾಗಿ ನಾಗರಿಕರು ಹತರಾಗಿದ್ದಾರೆ.

ಇದನ್ನೂ ಓದಿ; ‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...