Homeಕರ್ನಾಟಕರಾಷ್ಟ್ರೀಯ ಖೋ ಖೋ ಪಂದ್ಯಾವಳಿಗೆ ಬಿಡುಗಡೆಯಾಗಿರುವ 19 ಲಕ್ಷದ ಮೇಲೆ ಎಲ್ಲರ ಕಣ್ಣು

ರಾಷ್ಟ್ರೀಯ ಖೋ ಖೋ ಪಂದ್ಯಾವಳಿಗೆ ಬಿಡುಗಡೆಯಾಗಿರುವ 19 ಲಕ್ಷದ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ರಾಷ್ಟ್ರೀಯ ಮಟ್ಟದ ಖೋ ಖೋ ಪಂದ್ಯಾವಳಿ ತುಮಕೂರು ನಗರದಲ್ಲಿ ನಡೆಸಲು ಭರದ ಸಿದ್ದತೆ ನಡೆದಿದೆ. ಇದೇ ತಿಂಗಳ 27 ರಿಂದ ಮೂರು ದಿನಗಳು ಪಂದ್ಯಾವಳಿ ನಡೆಯಲಿದೆ. ಇದಕ್ಕಾಗಿ 19 ಲಕ್ಷ ರೂ ಹಣವೂ ಬಿಡುಗಡೆ ಆಗಿದೆ. ತುಮಕೂರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಣ ಬಂದಿದ್ದು ಇದರ ಮೇಲೆ ಕೆಲವರ ಕಣ್ಣು ಬಿದ್ದಿದೆ. ಖೋ ಖೋ ಪಂದ್ಯಾವಳಿ ಯಶಸ್ವಿಯಾಗಿ ನಡೆಸಬೇಕು. ಜಿಲ್ಲೆಗೆ ಕಿರ್ತಿ ತರಬೇಕು ಎಂಬುದಕ್ಕಿಂತ ಹೂಣ ಲೂಟಿ ಮಾಡುವ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಜನಪ್ರತಿನಿಧಿಗಳು ತಮಗೆ ಬೇಕಾದವರಿಗೆ ಖೋ ಖೋ ಪಂದ್ಯಾವಳಿ ಉಸ್ತುವಾರಿ ವಹಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಎಲ್ಲಾ ರಾಜ್ಯಗಳಿಂದ ಪುರುಷರು ಮತ್ತು ಮಹಿಳೆಯರ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ ಪುರುಷ ವಿಭಾಗದಲ್ಲಿ 29 ತಂಡಗಳು ಮತ್ತು 29 ಮಹಿಳಾ ತಂಡಗಳು  ಭಾಗವಹಿಸಲಿವೆ. ಅಂದರೆ ಸುಮಾರು ಒಂದು ಸಾವಿರ ಮಂದಿ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ದೇಶದ ವಿವಿಧ ರಾಜ್ಯ ಗಳಿಂದ ಬರುವ ಖೋ ಖೋ ತಂಡಗಳಿಗೆ ಸೂಕ್ತ ವಸತಿ, ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಹೀಗಾಗಿ ನೂರಾರು ಕ್ರೀಡಾಪಟುಗಳಿಗೆ ಸಿದ್ದಗಂಗಾ ಮಠದಲ್ಲಿ  ಉಚಿತ ವಸತಿ ಮತ್ತು ಊಟದ ವ್ಯವಸ್ಥೆ  ಕಲ್ಪಿಸಿದರೆ ಲಕ್ಷಾಂತರ ರೂಪಾಳಿ ಹಣ ಉಳಿಸುವ ಲೆಕ್ಕಹಾಕಲಾಗುತ್ತಿದೆ.

ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿ ತುಮಕೂರಿನಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಂದ ಮತ್ತು ಅಧಿಕಾರಿಗಳಿಂದ ಹಣ ಸಂಗ್ರಹಿಸುವ ಯೋಜನೆ ರೂಪಿಸಲಾಗಿದೆ. ಪಂದ್ಯಾವಳಿಗೆ ಬೇಕಾದ ಊಟದ ವ್ಯವಸ್ಥೆಯನ್ನು ಕೆಲವು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ವಹಿಸಿದ್ದು ಅಚ್ಚುಕಟ್ಟಾಗಿ ನಿರ್ವಹಿಸಲು ಜನಪ್ರತಿನಿಧಿಗಳು ಸೂಚಿಸಿದ್ದಾರೆ. ಇದಕ್ಕೆ ಆ ಅಧಿಕಾರಿಗಳು ಎಸ್ ಎಂದಿದ್ದಾರೆ. ಇದರಿಂದ ಊಟದ ಖರ್ಚಿನ ಹಣವೂ ಉಳಿಸಿ ಜೇಬಿಗಿಳಿಸುವ ಹುನ್ನಾರಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

ಖೋ ಖೊ ಪಂದ್ಯಾವಳಿಗೆ ಬರುವ ರೆಫರಿಗಳಿಗೆ ಫೈವ್ ಸ್ಟಾರ್ ಹೋಟೆಲ್ ಗಳಲ್ಲೇ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕೆಂಬ ನಿಯಮವಿದೆ.ಆದರೆ ತುಮಕೂರಿನಲ್ಲಿ ಒಂದೇ ಒಂದು ಸ್ಟಾರ್ ಹೋಟೆಲ್ ಕೂಡ ಇಲ್ಲ ಹಾಗಾಗಿ ರೆಫರಿಗಳಿಗೆ ಬೆಂಗಳೂರಿನಲ್ಲೇ ವ್ಯವಸ್ಥೆ ಕಲ್ಪಿಸಬೇಕು. ಆದರೆ ಆಯೋಜಕರು ತುಮಕೂರಿನಲ್ಲಿ ಸ್ವಲ್ಪಮಟ್ಟಿಗೆ ಹೇಳಿಕೊಳ್ಳುವಂತಹ ಎಸಿ ಇರುವ ಹೋಟೆಲ್ ಗಳಿಗೆ ಫೈವ್ ಸ್ಟಾರ್ ನಾಮಫಲಕ ಹಾಕಿ ದೇಶದ ವಿವಿಧ ಭಾಗಗಳಿಂದ ಬರುವ ರೆಫರಿಗಳನ್ನು ಅಲ್ಲಿಯೇ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ. ಈ ಯೋಜನೆ ಕೂಡ ಜನಪ್ರತಿನಿಧಿಗಳೇ ರೂಪಿಸಿರುವುದು ಎಂದು ಆಪ್ತಮೂಲಗಳು ತಿಳಿಸಿವೆ.

ಸಂಸದರು ಮತ್ತು ಶಾಸಕರು ತಮ್ಮ ಆಪ್ತನಾದ ಬಸವರಾಜು ಎಂಬುವರಿಗೆ ಖೋ ಖೋ ಪಂದ್ಯಾವಳಿಯ ಜವಾಬ್ದಾರಿ ವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಉಪನಿರ್ದೇಶಕರು ಮುಕ್ತವಾಗಿ ಕೆಲಸ ಮಾಡಲು ಕೂಡ ಬಿಡದೆ ಸಂಸದರು ಮತ್ತು ಶಾಸಕರು ತಮ್ಮ ಆಪ್ತರನ್ನೇ ಖೋ ಖೋ ಪಂದ್ಯಾವಳಿಯ ಉಸ್ತುವಾರಿಗೆ ನೇಮಕ ಮಾಡುವಂತೆ ಒತ್ತಡ ಹೇರುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...