Homeಕರ್ನಾಟಕರಾಷ್ಟ್ರೀಯ ಖೋ ಖೋ ಪಂದ್ಯಾವಳಿಗೆ ಬಿಡುಗಡೆಯಾಗಿರುವ 19 ಲಕ್ಷದ ಮೇಲೆ ಎಲ್ಲರ ಕಣ್ಣು

ರಾಷ್ಟ್ರೀಯ ಖೋ ಖೋ ಪಂದ್ಯಾವಳಿಗೆ ಬಿಡುಗಡೆಯಾಗಿರುವ 19 ಲಕ್ಷದ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ರಾಷ್ಟ್ರೀಯ ಮಟ್ಟದ ಖೋ ಖೋ ಪಂದ್ಯಾವಳಿ ತುಮಕೂರು ನಗರದಲ್ಲಿ ನಡೆಸಲು ಭರದ ಸಿದ್ದತೆ ನಡೆದಿದೆ. ಇದೇ ತಿಂಗಳ 27 ರಿಂದ ಮೂರು ದಿನಗಳು ಪಂದ್ಯಾವಳಿ ನಡೆಯಲಿದೆ. ಇದಕ್ಕಾಗಿ 19 ಲಕ್ಷ ರೂ ಹಣವೂ ಬಿಡುಗಡೆ ಆಗಿದೆ. ತುಮಕೂರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಹಣ ಬಂದಿದ್ದು ಇದರ ಮೇಲೆ ಕೆಲವರ ಕಣ್ಣು ಬಿದ್ದಿದೆ. ಖೋ ಖೋ ಪಂದ್ಯಾವಳಿ ಯಶಸ್ವಿಯಾಗಿ ನಡೆಸಬೇಕು. ಜಿಲ್ಲೆಗೆ ಕಿರ್ತಿ ತರಬೇಕು ಎಂಬುದಕ್ಕಿಂತ ಹೂಣ ಲೂಟಿ ಮಾಡುವ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಜನಪ್ರತಿನಿಧಿಗಳು ತಮಗೆ ಬೇಕಾದವರಿಗೆ ಖೋ ಖೋ ಪಂದ್ಯಾವಳಿ ಉಸ್ತುವಾರಿ ವಹಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

ದೇಶದ ಎಲ್ಲಾ ರಾಜ್ಯಗಳಿಂದ ಪುರುಷರು ಮತ್ತು ಮಹಿಳೆಯರ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ ಪುರುಷ ವಿಭಾಗದಲ್ಲಿ 29 ತಂಡಗಳು ಮತ್ತು 29 ಮಹಿಳಾ ತಂಡಗಳು  ಭಾಗವಹಿಸಲಿವೆ. ಅಂದರೆ ಸುಮಾರು ಒಂದು ಸಾವಿರ ಮಂದಿ ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ದೇಶದ ವಿವಿಧ ರಾಜ್ಯ ಗಳಿಂದ ಬರುವ ಖೋ ಖೋ ತಂಡಗಳಿಗೆ ಸೂಕ್ತ ವಸತಿ, ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು. ಹೀಗಾಗಿ ನೂರಾರು ಕ್ರೀಡಾಪಟುಗಳಿಗೆ ಸಿದ್ದಗಂಗಾ ಮಠದಲ್ಲಿ  ಉಚಿತ ವಸತಿ ಮತ್ತು ಊಟದ ವ್ಯವಸ್ಥೆ  ಕಲ್ಪಿಸಿದರೆ ಲಕ್ಷಾಂತರ ರೂಪಾಳಿ ಹಣ ಉಳಿಸುವ ಲೆಕ್ಕಹಾಕಲಾಗುತ್ತಿದೆ.

ರಾಷ್ಟ್ರಮಟ್ಟದ ಖೋ ಖೋ ಪಂದ್ಯಾವಳಿ ತುಮಕೂರಿನಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಂದ ಮತ್ತು ಅಧಿಕಾರಿಗಳಿಂದ ಹಣ ಸಂಗ್ರಹಿಸುವ ಯೋಜನೆ ರೂಪಿಸಲಾಗಿದೆ. ಪಂದ್ಯಾವಳಿಗೆ ಬೇಕಾದ ಊಟದ ವ್ಯವಸ್ಥೆಯನ್ನು ಕೆಲವು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ವಹಿಸಿದ್ದು ಅಚ್ಚುಕಟ್ಟಾಗಿ ನಿರ್ವಹಿಸಲು ಜನಪ್ರತಿನಿಧಿಗಳು ಸೂಚಿಸಿದ್ದಾರೆ. ಇದಕ್ಕೆ ಆ ಅಧಿಕಾರಿಗಳು ಎಸ್ ಎಂದಿದ್ದಾರೆ. ಇದರಿಂದ ಊಟದ ಖರ್ಚಿನ ಹಣವೂ ಉಳಿಸಿ ಜೇಬಿಗಿಳಿಸುವ ಹುನ್ನಾರಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

ಖೋ ಖೊ ಪಂದ್ಯಾವಳಿಗೆ ಬರುವ ರೆಫರಿಗಳಿಗೆ ಫೈವ್ ಸ್ಟಾರ್ ಹೋಟೆಲ್ ಗಳಲ್ಲೇ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕೆಂಬ ನಿಯಮವಿದೆ.ಆದರೆ ತುಮಕೂರಿನಲ್ಲಿ ಒಂದೇ ಒಂದು ಸ್ಟಾರ್ ಹೋಟೆಲ್ ಕೂಡ ಇಲ್ಲ ಹಾಗಾಗಿ ರೆಫರಿಗಳಿಗೆ ಬೆಂಗಳೂರಿನಲ್ಲೇ ವ್ಯವಸ್ಥೆ ಕಲ್ಪಿಸಬೇಕು. ಆದರೆ ಆಯೋಜಕರು ತುಮಕೂರಿನಲ್ಲಿ ಸ್ವಲ್ಪಮಟ್ಟಿಗೆ ಹೇಳಿಕೊಳ್ಳುವಂತಹ ಎಸಿ ಇರುವ ಹೋಟೆಲ್ ಗಳಿಗೆ ಫೈವ್ ಸ್ಟಾರ್ ನಾಮಫಲಕ ಹಾಕಿ ದೇಶದ ವಿವಿಧ ಭಾಗಗಳಿಂದ ಬರುವ ರೆಫರಿಗಳನ್ನು ಅಲ್ಲಿಯೇ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕೆಂಬ ತೀರ್ಮಾನಕ್ಕೆ ಬರಲಾಗಿದೆ. ಈ ಯೋಜನೆ ಕೂಡ ಜನಪ್ರತಿನಿಧಿಗಳೇ ರೂಪಿಸಿರುವುದು ಎಂದು ಆಪ್ತಮೂಲಗಳು ತಿಳಿಸಿವೆ.

ಸಂಸದರು ಮತ್ತು ಶಾಸಕರು ತಮ್ಮ ಆಪ್ತನಾದ ಬಸವರಾಜು ಎಂಬುವರಿಗೆ ಖೋ ಖೋ ಪಂದ್ಯಾವಳಿಯ ಜವಾಬ್ದಾರಿ ವಹಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ. ಉಪನಿರ್ದೇಶಕರು ಮುಕ್ತವಾಗಿ ಕೆಲಸ ಮಾಡಲು ಕೂಡ ಬಿಡದೆ ಸಂಸದರು ಮತ್ತು ಶಾಸಕರು ತಮ್ಮ ಆಪ್ತರನ್ನೇ ಖೋ ಖೋ ಪಂದ್ಯಾವಳಿಯ ಉಸ್ತುವಾರಿಗೆ ನೇಮಕ ಮಾಡುವಂತೆ ಒತ್ತಡ ಹೇರುತ್ತಿರುವುದು ಈಗ ಗುಟ್ಟಾಗಿ ಉಳಿದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...