Homeಮುಖಪುಟಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿದ್ದು, ವಿಶ್ವದಲ್ಲೇ ಎರಡನೆ ಅತೀ ಹೆಚ್ಚು ಕೊರೊನಾ ಸೋಂಕಿತರಿರುವ ದೇಶವಾಗಿ ಭಾರತ ಹೊರಹೊಮ್ಮಿದೆ. ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಹಾಗೂ ಧಾರ್ಮಿಕ ಹಬ್ಬಗಳು ಕೂಡಾ ಇದಕ್ಕೆ ಕಾರಣ ಎನ್ನಲಾಗಿದೆ. ಇದೀಗ ಉತ್ತರಾಖಂಡ್‌ ರಾಜ್ಯದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳ ಕೂಡಾ ವಿವಾದದ ಕೇಂದ್ರ ಬಿಂದುವಾಗಿದೆ. ಮೇಳದಲ್ಲಿ ಸುಮಾರು 40 ಲಕ್ಷ ಜನ ಸೇರುತ್ತಾರೆ ಎನ್ನಲಾಗಿದೆ.

ಕೊರೊನಾ ಸಮಯದಲ್ಲಿ ಕುಂಭಮೇಳ ಆಚರಣೆಯ ಬಗ್ಗೆ ಹಲವಾರು ಜನರು ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ಮಾತ್ರ ಅದನ್ನು ಗಣನೆಗೆ ತೆಗೆದುಕೊಳ್ಳದೆ ಆಚರಣೆಗೆ ಅನುಮತಿ ನೀಡಿತ್ತು. ಮೇಳದಲ್ಲಿ 40 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿರುವುದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

ಕುಂಭಮೇಳವನ್ನು ಉಲ್ಲೇಖಿಸಿ, ಖ್ಯಾತ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ: ಕೇಂದ್ರದ ಜಾಣ ಕುರುಡು, ನೂರಾರು ಲಸಿಕಾ ಕೇಂದ್ರಗಳಿಗೆ ಬೀಗ

ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, “ಓಹ್, ತುಂಬಾ ಚೆನ್ನಾಗಿದೆ. ಓಹೋಹ್, ರುಚಿಯಾಗಿದೆ! ಇದು ನನ್ನ ಮಾತುಗಳಲ್ಲ. ಇದು ಇಂದಿನ ಕುಂಭಮೇಳದ ಜನಸಂದಣಿಯನ್ನು ನೋಡಿ ಕೊರೊನಾ ಆಡುತ್ತಿರುವ ಮಾತು. ಇದನ್ನು ಸರಿಪಡಿಸಲು ಎಷ್ಟು ಲಾಕ್‌ಡೌನ್‌ಗಳು ಬೇಕಾಗಬಹುದು” ಎಂದು ಕುಂಭಮೇಳದ ಚಿತ್ರವನ್ನು ಟ್ವೀಟ್ ಮಾಡಿ ಅವರು ಹೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ ಅವರು, ‘‘ಕುಂಭಮೇಳ…. ಶುಭವಿದಾಯ ಭಾರತ, ಸ್ವಾಗತ ಕೊರೊನಾ” ಎಂದು ಬರೆದಿದ್ದಾರೆ.

ಜೊತೆಗೆ ಅವರು, “ಪ್ರಸ್ತುತ ಬಾಹುಬಲಿ ರೂಪದ ಕುಂಭಮೇಳಕ್ಕೆ ಹೋಲಿಸಿದರೆ ಮಾರ್ಚ್ 2020 ರ ದೆಹಲಿ ತಬ್ಲೀಗಿ ಜಮಾತ್‌ ಒಂದು ಕಿರುಚಿತ್ರದಂತೆ. ನಾವೆಲ್ಲಾ ಹಿಂದೂಗಳು ಮುಸ್ಲಿಮರನ್ನು ಕ್ಷಮೆಯಾಚಿಸಬೇಕಿದೆ ಏಕೆಂದರೆ ಅವರು ಈ ಹಿಂದೆ ತಿಳಿಯದೆ ಮಾಡಿದ್ದರು. ಆದರೆ ನಾವು ಒಂದು ವರ್ಷದ ನಂತರ ಸಂಪೂರ್ಣವಾಗಿ ಎಲ್ಲಾ ತಿಳಿದ ನಂತರ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಅಲ್ಲ ಅದಕ್ಕಿಂತ ದೊಡ್ಡದು ಬಂದರೂ ರೈತ ಹೋರಾಟ ನಿಲ್ಲದು- ರಾಕೇಶ್ ಟಿಕಾಯತ್

“ಬಾಹ್ಯಾಕಾಶವು ಅನಂತವಾಗಿದೆಯೆ ಎಂದು ನನಗೆ ಖಚಿತವಾಗಿ ತಿಳಿದಿಲ್ಲ, ಆದರೆ ಮೂರ್ಖತನ ಅನಂತವಾಗಿದೆ” ಎಂಬ ಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೈನ್ ಅವರ ಮಾತುಗಳನ್ನು ಉಲ್ಲೇಖಿಸಿರು ರಾಮ್ ಗೋಪಾಲ್ ವರ್ಮಾ, ಕುಂಭಮೇಳದ ಮತ್ತು ತಬ್ಲೀಗಿ ಜಮಾತ್‌ ಸಭೆಯ ಫೋಟೋವನ್ನು ಹಾಕಿ, ಎಡಭಾಗದಲ್ಲಿ ಕುಂಭಮೇಳ-2021 ಮತ್ತು ಬಲಭಾಗದಲ್ಲಿ ಜಮಾತ್‌-2020. ಈ ಮೌನದ ಕಾರಣ ದೇವರಿಗೆ ಮಾತ್ರ ತಿಳಿದಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಕಳೆದ ಒಂದು ದಿನದಲ್ಲಿ ಹಲವು ದಾಖಲೆ ಮಾಡಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...