Homeಚಳವಳಿಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

’ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು’

- Advertisement -
- Advertisement -

ದೇಶದ ರೈತರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳಿ, ಬಿಸಿಲೆನ್ನದೇ ದೇಶದ ರಸ್ತೆಗೆ ಇಳಿದಿದ್ದಾರೆ. ತಮ್ಮ ಹಕ್ಕುಗಳಿಗಾಗಿ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಡೀ ದೇಶವೇ ಅವರ ಬೆನ್ನಿಗೆ ನಿಂತಿದೆ. ಅವರಿಗೆ ಈಗ ಬೇಕಿರುವುದು ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗ್ಯವಿದೆ. ಅನ್ನದ ಋಣ ತೀರಿಸಲು ಇದೊಂದು ಸವರ್ಣಾವಕಾಶ.

ನಿನ್ನೆ ಮೂವರು ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರ ರೈತರ ಮುಖ್ಯ ಬೇಡಿಕೆಗಳಾವುದನ್ನು ಒಪ್ಪುವ ಲಕ್ಷಣ ಇಲ್ಲ. ಈ ಹಿನ್ನೆಲೆ ರೈತ ಸಂಘಟನೆಗಳು ಮತ್ತಷ್ಟು ದಿನಗಳ ಕಾಲ ದೀರ್ಘ ಹೋರಾಟಕ್ಕೆ ಅಣಿಯಾಗುತ್ತಿವೆ. ದೆಹಲಿಯಲ್ಲಿ ರೈತರ ಸಂಘರ್ಷ ತಿಂಗಳುಗಟ್ಟಲೆ ನಡೆಯಲಿದೆ. ಲಕ್ಷಾಂತರ ಅನ್ನದಾತರು ತಾವೇ ಕೆಲವು ಸಿದ್ಧತೆ ಮಾಡಿಕೊಂಡು ಬಂದಿದ್ದರೂ ವಿವಿಧ ಮೂಲ ಸೌಲಭ್ಯಗಳ ಅಗತ್ಯ ಇನ್ನೂ ಹೆಚ್ಚಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ…

ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಖಂಡ, ಮಧ್ಯಪ್ರದೇಶ ,ಬಿಹಾರ ಮೊದಲಾದ ಬೇರೆ-ಬೇರೆ ರಾಜ್ಯಗಳ ರೈತರು  ಈ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆಹಾರ, ನೀರು ಸೇರಿ ಮೂಲಸೌಕರ್ಯಕ್ಕೆ ಆರ್ಥಿಕ ಸಹಾಯದ ಅವಶ್ಯಕತೆ ಇದೆ ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಹೇಳಿದೆ.

ಪ್ರತಿಭಟನೆ ತೀವ್ರಗೊಳ್ಳುವಂತೆಯೇ, ಕೇಂದ್ರ ಸರ್ಕಾರದ ದೌರ್ಜನ್ಯ ಕೂಡ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ದೊಡ್ಡ ಪ್ರಮಾಣದ ಹಣ ಸಹಾಯ ಅಗತ್ಯ ಇದೆ. ದೇಶದ ಜನರು, ಸಾಧ್ಯವಿರುವವರೆಲ್ಲಾ ಧನ ಸಹಾಯ ಮಾಡಿ ಎಂದು ಸಂಘಟನೆ ಮನವಿ ಮಾಡಿದೆ.

ದೆಹಲಿ ಚಲೋ

ದೇಶದ ಬಹುಸಂಖ್ಯಾತ ಅನ್ನದಾತರು ಬಡವರು, ವಿಶ್ವಕ್ಕೆ ಅನ್ನ ನೀಡುವ ಇವರು ತಮ್ಮ ಸಹಾಯಕ್ಕೆ ಮತ್ತೊಬ್ಬರ ಬಳಿ ಬೇಡುವ ಪರಿಸ್ಥಿತಿ ತಂದಿರುವ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೇ ಕೆಲವು ಸಂಖ್ಯೆಯಲ್ಲಿ ಕಾರುಗಳಲ್ಲಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಮಾತನಾಡುವ ಜನತೆಗೆ ನೆಲ ಮೂಲದ ರೈತರ ಬವಣೆಗಳ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ ಎಂದು ಟೀಕಿಸಿದ್ದಾರೆ. ಪ್ರತಿದಿನ ನಾವು ತಿನ್ನುವ ಅನ್ನವನ್ನೂ ನೊಡಿದಾಗಲಾದರೂ ಅನ್ನದಾತರ ಬೆಲೆ ಅರ್ಥವಾದಿತ್ತು. ಆದರೆ, ವಾಟ್ಸಾಪ್ ಯೂನಿವರ್ಸಿಟಿಗಳಲ್ಲಿ ಪದವಿ ಪಡೆದ ಜನರು ರೈತರನ್ನು ಭಯೋತ್ಪಾದಕರು ಎನ್ನುವ ಮಟ್ಟಕ್ಕೆ ಬಂದಿದ್ದಾರೆ. ಇದು ಕಳವಳಕಾರಿ ಸಂಗತಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳುತ್ತಾರೆ.

ಸದ್ಯ ದೇಶದಲ್ಲಿ ಭುಗಿಲೆದ್ದಿರುವ ರೈತರ ಪ್ರತಿಭಟನೆಗೆ ದೇಶದ ಜನರ ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗತ್ಯವೂ ಇದ್ದು, ಭಾರತ ಮಾತೆಯ ರೈತ ಮಕ್ಕಳು ತಮಗೆ ಸಹಾಯ ನೀಡಿ ಎಂದು ಕೇಳುತ್ತಿದ್ದಾರೆ. ಅನ್ನದ ಋಣ ತೀರಿಸಲು ಇದೊಂದು ಸುವರ್ಣಾವಕಾಶವೆ ಸರಿ.

ಬ್ಯಾಂಕ್ ಖಾತೆ ವಿವರಗಳು ಹೀಗಿವೆ:

The Bank Account Details are as follows:

Name: All India Kisan Sabha

A/C No: 20032032844

Bank: ALLAHABAD BANK

Address: ALLAHABAD BANK BUILDING,

17 PARLIAMENT STREET, NEW DELHI

State: DELHI

IFSC Code: ALLA0210163 (used for RTGS, IMPS and NEFT transactions)

Branch Code: 210163

MICR Code: 110010026


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...