Homeಚಳವಳಿಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

’ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು’

- Advertisement -
- Advertisement -

ದೇಶದ ರೈತರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳಿ, ಬಿಸಿಲೆನ್ನದೇ ದೇಶದ ರಸ್ತೆಗೆ ಇಳಿದಿದ್ದಾರೆ. ತಮ್ಮ ಹಕ್ಕುಗಳಿಗಾಗಿ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಡೀ ದೇಶವೇ ಅವರ ಬೆನ್ನಿಗೆ ನಿಂತಿದೆ. ಅವರಿಗೆ ಈಗ ಬೇಕಿರುವುದು ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗ್ಯವಿದೆ. ಅನ್ನದ ಋಣ ತೀರಿಸಲು ಇದೊಂದು ಸವರ್ಣಾವಕಾಶ.

ನಿನ್ನೆ ಮೂವರು ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರ ರೈತರ ಮುಖ್ಯ ಬೇಡಿಕೆಗಳಾವುದನ್ನು ಒಪ್ಪುವ ಲಕ್ಷಣ ಇಲ್ಲ. ಈ ಹಿನ್ನೆಲೆ ರೈತ ಸಂಘಟನೆಗಳು ಮತ್ತಷ್ಟು ದಿನಗಳ ಕಾಲ ದೀರ್ಘ ಹೋರಾಟಕ್ಕೆ ಅಣಿಯಾಗುತ್ತಿವೆ. ದೆಹಲಿಯಲ್ಲಿ ರೈತರ ಸಂಘರ್ಷ ತಿಂಗಳುಗಟ್ಟಲೆ ನಡೆಯಲಿದೆ. ಲಕ್ಷಾಂತರ ಅನ್ನದಾತರು ತಾವೇ ಕೆಲವು ಸಿದ್ಧತೆ ಮಾಡಿಕೊಂಡು ಬಂದಿದ್ದರೂ ವಿವಿಧ ಮೂಲ ಸೌಲಭ್ಯಗಳ ಅಗತ್ಯ ಇನ್ನೂ ಹೆಚ್ಚಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ…

ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಖಂಡ, ಮಧ್ಯಪ್ರದೇಶ ,ಬಿಹಾರ ಮೊದಲಾದ ಬೇರೆ-ಬೇರೆ ರಾಜ್ಯಗಳ ರೈತರು  ಈ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆಹಾರ, ನೀರು ಸೇರಿ ಮೂಲಸೌಕರ್ಯಕ್ಕೆ ಆರ್ಥಿಕ ಸಹಾಯದ ಅವಶ್ಯಕತೆ ಇದೆ ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಹೇಳಿದೆ.

ಪ್ರತಿಭಟನೆ ತೀವ್ರಗೊಳ್ಳುವಂತೆಯೇ, ಕೇಂದ್ರ ಸರ್ಕಾರದ ದೌರ್ಜನ್ಯ ಕೂಡ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ದೊಡ್ಡ ಪ್ರಮಾಣದ ಹಣ ಸಹಾಯ ಅಗತ್ಯ ಇದೆ. ದೇಶದ ಜನರು, ಸಾಧ್ಯವಿರುವವರೆಲ್ಲಾ ಧನ ಸಹಾಯ ಮಾಡಿ ಎಂದು ಸಂಘಟನೆ ಮನವಿ ಮಾಡಿದೆ.

ದೆಹಲಿ ಚಲೋ

ದೇಶದ ಬಹುಸಂಖ್ಯಾತ ಅನ್ನದಾತರು ಬಡವರು, ವಿಶ್ವಕ್ಕೆ ಅನ್ನ ನೀಡುವ ಇವರು ತಮ್ಮ ಸಹಾಯಕ್ಕೆ ಮತ್ತೊಬ್ಬರ ಬಳಿ ಬೇಡುವ ಪರಿಸ್ಥಿತಿ ತಂದಿರುವ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೇ ಕೆಲವು ಸಂಖ್ಯೆಯಲ್ಲಿ ಕಾರುಗಳಲ್ಲಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಮಾತನಾಡುವ ಜನತೆಗೆ ನೆಲ ಮೂಲದ ರೈತರ ಬವಣೆಗಳ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ ಎಂದು ಟೀಕಿಸಿದ್ದಾರೆ. ಪ್ರತಿದಿನ ನಾವು ತಿನ್ನುವ ಅನ್ನವನ್ನೂ ನೊಡಿದಾಗಲಾದರೂ ಅನ್ನದಾತರ ಬೆಲೆ ಅರ್ಥವಾದಿತ್ತು. ಆದರೆ, ವಾಟ್ಸಾಪ್ ಯೂನಿವರ್ಸಿಟಿಗಳಲ್ಲಿ ಪದವಿ ಪಡೆದ ಜನರು ರೈತರನ್ನು ಭಯೋತ್ಪಾದಕರು ಎನ್ನುವ ಮಟ್ಟಕ್ಕೆ ಬಂದಿದ್ದಾರೆ. ಇದು ಕಳವಳಕಾರಿ ಸಂಗತಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳುತ್ತಾರೆ.

ಸದ್ಯ ದೇಶದಲ್ಲಿ ಭುಗಿಲೆದ್ದಿರುವ ರೈತರ ಪ್ರತಿಭಟನೆಗೆ ದೇಶದ ಜನರ ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗತ್ಯವೂ ಇದ್ದು, ಭಾರತ ಮಾತೆಯ ರೈತ ಮಕ್ಕಳು ತಮಗೆ ಸಹಾಯ ನೀಡಿ ಎಂದು ಕೇಳುತ್ತಿದ್ದಾರೆ. ಅನ್ನದ ಋಣ ತೀರಿಸಲು ಇದೊಂದು ಸುವರ್ಣಾವಕಾಶವೆ ಸರಿ.

ಬ್ಯಾಂಕ್ ಖಾತೆ ವಿವರಗಳು ಹೀಗಿವೆ:

The Bank Account Details are as follows:

Name: All India Kisan Sabha

A/C No: 20032032844

Bank: ALLAHABAD BANK

Address: ALLAHABAD BANK BUILDING,

17 PARLIAMENT STREET, NEW DELHI

State: DELHI

IFSC Code: ALLA0210163 (used for RTGS, IMPS and NEFT transactions)

Branch Code: 210163

MICR Code: 110010026


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...