Homeಕರ್ನಾಟಕಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

- Advertisement -
- Advertisement -

ಶೃಂಗೇರಿಯಲ್ಲಿ 2025 ಜನವರಿ 4ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಒಂದು ಸ್ವಹಿತಾಸಕ್ತಿ ಗುಂಪು ಆಯೋಜಿಸುತ್ತಿದ್ದು, ಪರಿಷತ್ತಿನ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸಮ್ಮೇಳನದ ಆಹ್ವಾನ ಪತ್ರಿಕೆಗಳು ಹಾಗೂ ಬ್ಯಾನರ್ಗಳಲ್ಲಿ, ಅವ್ಯವಹಾರಗಳ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ ಹೆಸರು ಹಾಗೂ ಭಾವಚಿತ್ರವನ್ನು ಬಳಸಿ, ಅವರನ್ನು ಇನ್ನೂ“ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು” ಎಂದು ಪ್ರಚುರಪಡಿಸಲಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಾಹಿತ್ಯಾಭಿಮಾನಿಗಳು ವಿರೋಧ ವ್ಯಕ್ತ ಪಡಿಸಿದ್ದಾರೆ. 

ಈ ಸಮ್ಮೇಳನವು ಸಮಗ್ರ ಸಾಹಿತ್ಯ ವಲಯವನ್ನು ಒಳಗೊಂಡಿಲ್ಲದೆ, ಕೆಲವೇ ಮಂದಿ ಸ್ವಾರ್ಥಪರ ವ್ಯಕ್ತಿಗಳ ವೈಯಕ್ತಿಕ ಲಾಭಕ್ಕಾಗಿ ಆಯೋಜಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದೇ ಗುಂಪಿನವರು ಹಿಂದೆ ಶೃಂಗೇರಿಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ, ಬಾಂಬ್ ಬೆದರಿಕೆ ಹಾಕುವ ಮೂಲಕ ಸಮ್ಮೇಳನವನ್ನು ಹಾಳುಗೆಡವಲು ಯತ್ನಿಸಿದ್ದರು ಎಂಬುದನ್ನು ನೆನಪಿಸಿದ್ದಾರೆ. 

ಹಿರಿಯ ಸಾಹಿತಿಗಳಾದ ಕಲ್ಕುಳಿ ವಿಠಲ ಹೆಗ್ಡೆಯವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅಂದಿನ ಎರಡು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ದಿನ ರಾಜ್ಯದ ಅನೇಕ ಸಾಹಿತ್ಯಾಸಕ್ತರ ನೆರವಿನಿಂದ ಸಮ್ಮೇಳನ ಯಶಸ್ವಿಯಾಗಿ ನೆರವೇರಿದ ನಂತರ, ಎರಡನೆಯ ದಿನ ಇದೇ ಚುಟುಕು ಸಾಹಿತ್ಯ ಸಮ್ಮೇಳನದ ರೂವಾರಿಗಳು ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುವ ಬೆದರಿಕೆ ಹಾಕಿ ಸಾಹಿತ್ಯ ಕಾರ್ಯಕ್ರಮವನ್ನೇ ಅರ್ಧಕ್ಕೆ ನಿಲ್ಲಿಸಿದ್ದರು. ಇಂತಹ ಸಾಹಿತ್ಯ ವಿರೋಧಿಗಳ ಗುಂಪು ಈಗ ಎಲ್ಲಾ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಮತ್ತೊಮ್ಮೆ ಕಾನೂನು ಬಾಹಿರವಾಗಿ ತಮ್ಮ ನಡೆ ಇಟ್ಟಿದ್ದಾರೆ ಎಂದು ಸಾಹಿತ್ಯಾಸಕ್ತರ ವಲಯ ಗಂಭೀರವಾಗಿ ಆರೋಪಿಸಿದೆ.

ಅಷ್ಟೇ ಅಲ್ಲದೆ, ಹಲವಾರು ಸಾಹಿತ್ಯಾಭಿಮಾನಿಗಳ ಮೇಲೆ ಅಸಂಬದ್ಧ ಆರೋಪಗಳನ್ನು ಹೊರಿಸಿ ಪ್ರಕರಣಗಳನ್ನು ದಾಖಲಿಸುವ ಮೂಲಕ ಮಾನಸಿಕ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ದೂರಲಾಗಿದೆ. ಇಂತಹ ನಡೆಗಳು ಸಾಹಿತ್ಯ ವಾತಾವರಣಕ್ಕೆ ಧಕ್ಕೆ ತರುತ್ತವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಸಾಹಿತ್ಯ ಮೌಲ್ಯಗಳು ಮತ್ತು ಶಿಷ್ಟಾಚಾರಗಳನ್ನು ಮೀರಿ, ರಾಜಕೀಯ ಉದ್ದೇಶದಿಂದ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ವಿರೋಧ ವ್ಯಕ್ತಪಡಿಸಿದವರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಶ್ರೀ ಮಂದಾರ, ಜಗದೀಶ್ ಕಣದಮನೆ, ಭರತ್ ಗಿಣಿಕಲ್, ವೆಂಕಟೇಶ್ ಹಾಗಲಗಂಜಿ, ಚಂದ್ರಶೇಖರ್ ಹೆಗ್ಡೆ ಕಲ್ಕುಳಿ, ಸಂತೋಷ್ ಕಾಳ್ಯ, ರಾಜಕುಮಾರ್ ಹೆಗ್ಡೆ, ತ್ರಿಮೂರ್ತಿ ಹೊಸ್ತೋಟ, ಕಳಸಪ್ಪ ಕೆಲವಳ್ಳಿ, ನವಿನ್ ಕರುವಾನೆ ಮತ್ತು ಅಶೋಕ್ ಕುಂದೂರ್ ಸೇರಿದಂತೆ ಹಲವು ಸಾಹಿತ್ಯಾಭಿಮಾನಿಗಳು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರ‍್ಯಾಗಿಂಗ್‌ಗೆ ದಲಿತ ವಿದ್ಯಾರ್ಥಿನಿ ಬಲಿ: ‘ಜಾತಿ ಮತ್ತು ಲಿಂಗ ಆಧಾರಿತ ಸಾಂಸ್ಥಿಕ ಹಿಂಸಾಚಾರದ ಗಂಭೀರ ನಿದರ್ಶನ’ ಎಂದ ಮಾನವ ಹಕ್ಕುಗಳ ಸಂಘಟನೆ

ಹಿಮಾಚಲ ಪ್ರದೇಶದ ಸರ್ಕಾರಿ ಕಾಲೇಜಿನಲ್ಲಿ 19 ವರ್ಷದ ದಲಿತ ವಿದ್ಯಾರ್ಥಿನಿಯ ಸಾವಿನ ನಂತರ, ದಲಿತ ಹಕ್ಕುಗಳ ಸಂಘಟನೆಗಳು ಶುಕ್ರವಾರ ಮೂವರು ಹಿರಿಯ ವಿದ್ಯಾರ್ಥಿಗಳು ಮತ್ತು ಕಾಲೇಜು ಪ್ರಾಧ್ಯಾಪಕರನ್ನು ಬಂಧಿಸಬೇಕು ಮತ್ತು ಅಧಿಕಾರಿಗಳು ಅದಕ್ಕೆ...

ಫ್ರೀಡಂ ಫ್ಲೋಟಿಲ್ಲಾ ಸದಸ್ಯರ ಮೇಲೆ ಇಸ್ರೇಲಿ ಪಡೆಗಳಿಂದ ಲೈಂಗಿಕ ದೌರ್ಜನ್ಯ ಆರೋಪ : ಸ್ವತಂತ್ರ ತನಿಖೆ ಆಗ್ರಹ

ಗಾಝಾ ಮೇಲೆ ವಿಧಿಸಲಾಗಿದ್ದ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸಿದ ಫ್ಲೋಟಿಲ್ಲಾ ಹಡಗುಗಳನ್ನು ತಡೆದ ನಂತರ, ಅವುಗಳಲ್ಲಿದ್ದ ಜಗತ್ತಿನ ವಿವಿಧ ಭಾಗಗಳ ಹಲವು ಹೋರಾಟಗಾರರನ್ನು ಇಸ್ರೇಲ್ ಸೇನೆ ಬಂಧಿಸಿದೆ. ಈ ಬಂಧಿತರ ಮೇಲೆ ಇಸ್ರೇಲಿ...

‘ನನಗೆ, ನನ್ನ ಕುಟುಂಬಕ್ಕೆ ‘ಝಡ್‌’ ಶ್ರೇಣಿ ಭದ್ರತೆ ಒದಗಿಸಿ’: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಾರ್ದನ ರೆಡ್ಡಿ ಪತ್ರ 

ಕೊಪ್ಪಳ: ಬಳ್ಳಾರಿಯಲ್ಲಿ ತಮ್ಮ ಮೇಲೆ "ಪೂರ್ವ ಯೋಜಿತ ಹತ್ಯೆ ಯತ್ನ" ನಡೆದಿದೆ ಎಂದು ಆರೋಪಿಸಿ, ಬಿಜೆಪಿ ಶಾಸಕ ಜಿ ಜನಾರ್ದನ ರೆಡ್ಡಿ ಅವರು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಗೃಹ ಸಚಿವ...

ಪೋಕ್ಸೋ ಪ್ರಕರಣದ ದೂರು ತಿರುಚಿದ ಪೊಲೀಸರು : ಸಂತ್ರಸ್ತೆಯ ತಾಯಿ ಆರೋಪ

​ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣವೊಂದನ್ನು ದಾಖಲಿಸುವ ವೇಳೆ ಸಂತ್ರಸ್ತೆಯ ತಾಯಿ ನೀಡಿದ ಮೂಲ ದೂರನ್ನು ತಿರುಚಿ, ಪೊಲೀಸರು ತಮಗೆ ಇಷ್ಟ ಬಂದಂತೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ...

‘ವೆನೆಜುವೆಲಾಗೆ ಅನಗತ್ಯ ಪ್ರಯಾಣ ತಪ್ಪಿಸಿ’: ಅಮೆರಿಕಾ ದಾಳಿ ನಂತರ ಭಾರತ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ ಸೂಚನೆ

ನವದೆಹಲಿ: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕ ಮಿಲಿಟರಿ ಕಾರ್ಯಾಚರಣೆಯಲ್ಲಿ ಸೆರೆಹಿಡಿದ ನಂತರ ಭಾರತ ಶನಿವಾರ ರಾತ್ರಿ ವೆನೆಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. ಜೊತೆಗೆ...

ಉತ್ತರ ಕನ್ನಡ | ಯಲ್ಲಾಪುರದ ರಂಜಿತಾ ಕೊಲೆ ಆರೋಪಿ ಶವವಾಗಿ ಪತ್ತೆ : ಆತ್ಮಹತ್ಯೆ ಶಂಕೆ

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರದಲ್ಲಿ ಶನಿವಾರ (ಜ.3) ನಡೆದ ಅಡುಗೆ ಸಹಾಯಕಿ ರಂಜಿತಾ ಮಲ್ಲಪ್ಪ ಬನ್ಸೊಡೆ (30) ಅವರ ಹತ್ಯೆ ಪ್ರಕರಣದ ಆರೋಪಿ ರಫೀಕ್ ಇಮಾಮಸಾಬ ಯಳ್ಳೂರ(30) ಅವರ ಮೃತದೇಹ ಆತ್ಮಹತ್ಯೆಗೈದ...

ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ ; ವೆನಿಜುವೆಲಾವನ್ನು ಅಮೆರಿಕ ಆಳಲಿದೆ ಎಂದ ಟ್ರಂಪ್

ಅಮೆರಿಕ ಸೇನೆಯಿಂದ ಶನಿವಾರ (ಜ.3) ಸೆರೆಹಿಡಿಯಲ್ಪಟ್ಟ ವೆನಿಜುವೆಲಾ ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ನ್ಯೂಯಾರ್ಕ್‌ಗೆ ಕರೆದೊಯ್ಯಲಾಗಿದೆ. ನ್ಯೂಯಾರ್ಕ್‌ನ ಡ್ರಗ್ ಎನ್‌ಫೋರ್ಸ್‌ಮೆಂಟ್ ಅಡ್ಮಿನಿಸ್ಟ್ರೇಷನ್ (ಡಿಇಎ) ಮುಖ್ಯ ಕಛೇರಿಯಲ್ಲಿ...

‘ನಾವು ಯಾರನ್ನು ಶಿಕ್ಷಿಸುತ್ತಿದ್ದೇವೆ?’: ಕೆಕೆಆರ್ ತಂಡದಿಂದ ಬಾಂಗ್ಲಾ ಕ್ರಿಕೆಟಿಗನನ್ನು ಕೈಬಿಡುವ ನಿರ್ಧಾರಕ್ಕೆ ಶಶಿ ತರೂರ್ ಪ್ರತಿಕ್ರಿಯೆ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳಿಗೆ ಪ್ರತಿಕ್ರಿಯೆಯಾಗಿ ಕ್ರಿಕೆಟ್ ಅನ್ನು "ಬುದ್ಧಿಹೀನವಾಗಿ ರಾಜಕೀಯಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಶನಿವಾರ ಹೇಳಿದ್ದಾರೆ.  ಶಾರುಖ್ ಖಾನ್ ಒಡೆತನದ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ, ಬಿಸಿಸಿಐ...

ಕಪ್ಪು ಶರ್ಟ್ ಧರಿಸಿದ್ದಕ್ಕೆ ‘ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ ಪುರಸ್ಕೃತ ಯುವ ಲೇಖಕನನ್ನೇ ತಡೆದ ಪೊಲೀಸರು

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಉಪಸ್ಥಿತಿಗೆ ಸಂಬಂಧಿಸಿದ ಭದ್ರತಾ ಶಿಷ್ಟಾಚಾರವನ್ನು ಉಲ್ಲೇಖಿಸಿ ಪೊಲೀಸರು, 99 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಕಪ್ಪು ಶರ್ಟ್ ಧರಿಸಿದ್ದಕ್ಕಾಗಿ ನನ್ನನ್ನು ತಡೆದರು ಎಂದು...

ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ; ಕೋಟೆ ನಿರ್ಮಿಸಿಕೊಂಡವರನ್ನು ಯಾರಾದಾರೂ ಕೊಲ್ಲಲು ಹೋಗುತ್ತಾರೆಯೇ: ಡಿಕೆ ಶಿವಕುಮಾರ್

"ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಶಾಸಕ...