Homeಕರ್ನಾಟಕಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

- Advertisement -
- Advertisement -

ಶೃಂಗೇರಿಯಲ್ಲಿ 2025 ಜನವರಿ 4ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಒಂದು ಸ್ವಹಿತಾಸಕ್ತಿ ಗುಂಪು ಆಯೋಜಿಸುತ್ತಿದ್ದು, ಪರಿಷತ್ತಿನ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸಮ್ಮೇಳನದ ಆಹ್ವಾನ ಪತ್ರಿಕೆಗಳು ಹಾಗೂ ಬ್ಯಾನರ್ಗಳಲ್ಲಿ, ಅವ್ಯವಹಾರಗಳ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ ಹೆಸರು ಹಾಗೂ ಭಾವಚಿತ್ರವನ್ನು ಬಳಸಿ, ಅವರನ್ನು ಇನ್ನೂ“ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು” ಎಂದು ಪ್ರಚುರಪಡಿಸಲಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಾಹಿತ್ಯಾಭಿಮಾನಿಗಳು ವಿರೋಧ ವ್ಯಕ್ತ ಪಡಿಸಿದ್ದಾರೆ. 

ಈ ಸಮ್ಮೇಳನವು ಸಮಗ್ರ ಸಾಹಿತ್ಯ ವಲಯವನ್ನು ಒಳಗೊಂಡಿಲ್ಲದೆ, ಕೆಲವೇ ಮಂದಿ ಸ್ವಾರ್ಥಪರ ವ್ಯಕ್ತಿಗಳ ವೈಯಕ್ತಿಕ ಲಾಭಕ್ಕಾಗಿ ಆಯೋಜಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದೇ ಗುಂಪಿನವರು ಹಿಂದೆ ಶೃಂಗೇರಿಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ, ಬಾಂಬ್ ಬೆದರಿಕೆ ಹಾಕುವ ಮೂಲಕ ಸಮ್ಮೇಳನವನ್ನು ಹಾಳುಗೆಡವಲು ಯತ್ನಿಸಿದ್ದರು ಎಂಬುದನ್ನು ನೆನಪಿಸಿದ್ದಾರೆ. 

ಹಿರಿಯ ಸಾಹಿತಿಗಳಾದ ಕಲ್ಕುಳಿ ವಿಠಲ ಹೆಗ್ಡೆಯವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅಂದಿನ ಎರಡು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ದಿನ ರಾಜ್ಯದ ಅನೇಕ ಸಾಹಿತ್ಯಾಸಕ್ತರ ನೆರವಿನಿಂದ ಸಮ್ಮೇಳನ ಯಶಸ್ವಿಯಾಗಿ ನೆರವೇರಿದ ನಂತರ, ಎರಡನೆಯ ದಿನ ಇದೇ ಚುಟುಕು ಸಾಹಿತ್ಯ ಸಮ್ಮೇಳನದ ರೂವಾರಿಗಳು ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುವ ಬೆದರಿಕೆ ಹಾಕಿ ಸಾಹಿತ್ಯ ಕಾರ್ಯಕ್ರಮವನ್ನೇ ಅರ್ಧಕ್ಕೆ ನಿಲ್ಲಿಸಿದ್ದರು. ಇಂತಹ ಸಾಹಿತ್ಯ ವಿರೋಧಿಗಳ ಗುಂಪು ಈಗ ಎಲ್ಲಾ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಮತ್ತೊಮ್ಮೆ ಕಾನೂನು ಬಾಹಿರವಾಗಿ ತಮ್ಮ ನಡೆ ಇಟ್ಟಿದ್ದಾರೆ ಎಂದು ಸಾಹಿತ್ಯಾಸಕ್ತರ ವಲಯ ಗಂಭೀರವಾಗಿ ಆರೋಪಿಸಿದೆ.

ಅಷ್ಟೇ ಅಲ್ಲದೆ, ಹಲವಾರು ಸಾಹಿತ್ಯಾಭಿಮಾನಿಗಳ ಮೇಲೆ ಅಸಂಬದ್ಧ ಆರೋಪಗಳನ್ನು ಹೊರಿಸಿ ಪ್ರಕರಣಗಳನ್ನು ದಾಖಲಿಸುವ ಮೂಲಕ ಮಾನಸಿಕ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ದೂರಲಾಗಿದೆ. ಇಂತಹ ನಡೆಗಳು ಸಾಹಿತ್ಯ ವಾತಾವರಣಕ್ಕೆ ಧಕ್ಕೆ ತರುತ್ತವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಸಾಹಿತ್ಯ ಮೌಲ್ಯಗಳು ಮತ್ತು ಶಿಷ್ಟಾಚಾರಗಳನ್ನು ಮೀರಿ, ರಾಜಕೀಯ ಉದ್ದೇಶದಿಂದ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ವಿರೋಧ ವ್ಯಕ್ತಪಡಿಸಿದವರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಶ್ರೀ ಮಂದಾರ, ಜಗದೀಶ್ ಕಣದಮನೆ, ಭರತ್ ಗಿಣಿಕಲ್, ವೆಂಕಟೇಶ್ ಹಾಗಲಗಂಜಿ, ಚಂದ್ರಶೇಖರ್ ಹೆಗ್ಡೆ ಕಲ್ಕುಳಿ, ಸಂತೋಷ್ ಕಾಳ್ಯ, ರಾಜಕುಮಾರ್ ಹೆಗ್ಡೆ, ತ್ರಿಮೂರ್ತಿ ಹೊಸ್ತೋಟ, ಕಳಸಪ್ಪ ಕೆಲವಳ್ಳಿ, ನವಿನ್ ಕರುವಾನೆ ಮತ್ತು ಅಶೋಕ್ ಕುಂದೂರ್ ಸೇರಿದಂತೆ ಹಲವು ಸಾಹಿತ್ಯಾಭಿಮಾನಿಗಳು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...