Homeಮುಖಪುಟಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: '3 ಈಡಿಯಟ್ಸ್' ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

ಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: ‘3 ಈಡಿಯಟ್ಸ್’ ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

- Advertisement -
- Advertisement -

ಸೋನಮ್ ವಾಂಗ್ಚುಕ್, ಲಡಾಖ್‌ನ ಸಮಾಜ ಸುಧಾರಕರು, ಅವರ ಜೀವನ ಕಥೆಯು ಬಾಲಿವುಡ್ ಚಲನಚಿತ್ರ ‘3 ಈಡಿಯಟ್ಸ್’ಗೆ ಸ್ಫೂರ್ತಿ ನೀಡಿತು. ಕೇಂದ್ರಾಡಳಿತ ಪ್ರದೇಶದಲ್ಲಿನ ಸುಮಾರು 2/3 ರಷ್ಟು ಹಿಮನದಿಗಳು ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಗಳು ಸೂಚಿಸಿವೆ. ಹಾಗಾಗಿ ಲಡಾಖ್‌ನ ಸುರಕ್ಷತೆ ಮತ್ತು ರಕ್ಷಣೆಯ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋನಮ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾನುವಾರ ಎಎನ್‌ಐ ಜೊತೆ ಮಾತನಾಡಿದ ಸೋನಮ್ ವಾಂಗ್‌ಚುಕ್, “ಇದೇ ರೀತಿಯ ಅಜಾಗರೂಕತೆ ಮುಂದುವರಿದರೆ ಮತ್ತು ಲಡಾಖ್‌ಗೆ ಕೈಗಾರಿಕೆಗಳಿಂದ ರಕ್ಷಣೆ ನೀಡದಿದ್ದರೆ, ಇಲ್ಲಿನ ಹಿಮನದಿಗಳು ಅಳಿದುಹೋಗುತ್ತವೆ. ಹೀಗಾಗಿ ಭಾರತ ಮತ್ತು ಅದರ ನೆರೆಹೊರೆಯ ದೇಶಗಳಿಗೆ ನೀರಿನ ಕೊರತೆ ಉಂಟಾಗಿ ಅಗಾಧವಾದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

“ಕಾಶ್ಮೀರ ವಿಶ್ವವಿದ್ಯಾನಿಲಯ ಮತ್ತು ಇತರ ಸಂಶೋಧನಾ ಸಂಸ್ಥೆಗಳ ಅಧ್ಯಯನಗಳ ಪ್ರಕಾರ ಲೇಹ್-ಲಡಾಖ್‌ನಲ್ಲಿರುವ ಹಿಮನದಿಗಳ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಅದರ 2/3 ಭಾಗ ಅಳಿದುಹೋಗುತ್ತವೆ ಎಂದು ಹೇಳಿವೆ. ಕಾಶ್ಮೀರ ವಿಶ್ವವಿದ್ಯಾನಿಲಯದ ಅಧ್ಯಯನವು ಹೆದ್ದಾರಿಗಳು ಮತ್ತು ಮಾನವ ಚಟುವಟಿಕೆಗಳಿಂದ ಆವೃತವಾಗಿರುವ ಹಿಮನದಿಗಳು ತುಲನಾತ್ಮಕವಾಗಿ ವೇಗವಾಗಿ ಕರಗುತ್ತಿವೆ ಎಂದು ಕಂಡುಹಿಡಿದಿದೆ” ಎಂದು ವಾಂಗ್ಚುಕ್ ಹೇಳಿದರು.

ಈ ಹವಾಮಾನ ಬದಲಾವಣೆಗೆ ಅಮೆರಿಕ ಮತ್ತು ಯುರೋಪ್‌ನ ಜಾಗತಿಕ ತಾಪಮಾನ ಮಾತ್ರ ಕಾರಣವಲ್ಲ, ಆದರೆ ಸ್ಥಳೀಯ ಕಾರ್ಖಾನೆಗಳ ಹೊರಸೂಸುವಿಕೆಯೂ ಕೂಡ ಇದಕ್ಕೆ ಸಮಾನವಾಗಿ ಕಾರಣವಾಗಿದೆ. ಲಡಾಖ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಮಾನವ ಚಟುವಟಿಕೆಗಳು ಇರಬೇಕು ಇದರಿಂದ ಹಿಮನದಿಗಳು ಉಳಿಯಬಹುದು” ಎಂದರು.

“ಈ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಒತ್ತಿಹೇಳುತ್ತಾ, ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳನ್ನು “ಕೈಗಾರಿಕಾ ಶೋಷಣೆ” ಯಿಂದ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಇದು ಜನರ ಜೀವನ ಮತ್ತು ಉದ್ಯೋಗವನ್ನು ರಕ್ಷಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

“ಈ ಕೈಗಾರಿಕಾ ಶೋಷಣೆಯಿಂದ ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳಿಗೆ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿಯವರಿಗೆ ನನ್ನ ಮನವಿಯಾಗಿದೆ ಏಕೆಂದರೆ ಇದು ಜನರ ಜೀವನ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ಷಿಸುತ್ತದೆ. ಆದರೆ, ಸರ್ಕಾರದ ಜೊತೆಗೆ ಜನರು ಸಹಕರಿಸಬೇಕು. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಅದನ್ನು ತಗ್ಗಿಸುವ ಕ್ರಮಗಳನ್ನು ಸರ್ಕಾರ ನೋಡಿಕೊಳ್ಳಬೇಕು” ಎಂದು ಹೇಳಿದರು.

ವಾಂಗ್‌ಚುಕ್ ಅವರು 13 ನಿಮಿಷಗಳ ಸುದೀರ್ಘ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಲಡಾಖ್‌ನ “ಪರಿಸರ ಸೂಕ್ಷ್ಮ” ಪ್ರದೇಶವನ್ನು ರಕ್ಷಿಸಲು ತುರ್ತಾಗಿ ಸಹಾಯ ಮಾಡಲು ದೇಶದ ಮತ್ತು ಪ್ರಪಂಚದ ಜನರಿಗೆ ಮನವಿ ಮಾಡಿದ್ದಾರೆ. ಪರಿಸರ ವ್ಯವಸ್ಥೆಯ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮತ್ತು ರಕ್ಷಿಸಲು ಅವರು ಪ್ರಧಾನಿ ಮೋದಿಯವರಿಗೆ ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಹೈಲೈಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದು, “ಲಡಾಖ್‌ನಲ್ಲಿ ಎಲ್ಲವೂ ಚೆನ್ನಾಗಿಲ್ಲ! ನನ್ನ ಇತ್ತೀಚಿನ ವೀಡಿಯೊದಲ್ಲಿ ನಾನು @narendramodi ಜೀ ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡುತ್ತಿದ್ದೇನೆ. ಹಾಳಾಗುತ್ತಿರುವ ಲಡಾಕ್ ಪ್ರದೇಶಕ್ಕೆ ರಕ್ಷಣೆ ನೀಡಿ. ಸರ್ಕಾರ ಮತ್ತು ಪ್ರಪಂಚದ ಗಮನ ಸೆಳೆಯಲು ನಾನು 26 ಜನವರಿಯಿಂದ 5 ದಿನ ಖರ್ಡೊಂಗ್ಲಾ ಪಾಸ್‌ನಲ್ಲಿ 18000 ಅಡಿ -40 ಡಿಗ್ರಿ ಸೆಲ್ಸಿಯಸ್‌ ಹವಾಮಾನದಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ವಾಂಗ್‌ಚುಕ್ ಎಎನ್‌ಐ ಜೊತೆ ಮಾತನಾಡುತ್ತಾ, “ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಮತ್ತು ಜನರಿಗೆ ನಾನು ಸಂದೇಶವನ್ನು ತಲುಪಿಸಬೇಕೆಂದು ಬಯಸುತ್ತಿದ್ದೇನೆ ಅದಕ್ಕಾಗಿ, ಖರ್ಡೊಂಗ್ಲಾ ಪಾಸ್‌ನಲ್ಲಿ ಐದು ದಿನಗಳ ಕಾಲ ಉಪವಾಸ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

“ನಾವು ಭೂಮಿಗೆ ಇಂತಹ ಅಪಾಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಈ ಹಿಮನದಿಗಳು ಇನ್ನು ಮುಂದೆ ಬದುಕುವುದಿಲ್ಲ. ಈ ನನ್ನ ಸಂದೇಶವನ್ನು ನೀಡಲು ನಾನು ಮೈನಸ್ 40 ಡಿಗ್ರಿ ತಾಪಮಾನದಲ್ಲಿ ಖಾರ್ಡೊಂಗ್ಲಾ ಪಾಸ್‌ನಲ್ಲಿ 5 ದಿನಗಳ ದೀರ್ಘ ಉಪವಾಸವನ್ನು ನಡೆಸುತ್ತೇನೆ” ಎಂದು ಅವರು ANI ಗೆ ತಿಳಿಸಿದ್ದಾರೆ.

ವಾಂಗ್‌ಚುಕ್ ಅವರು ತಮ್ಮ ಮತ್ತೊಂದು ಟ್ವೀಟ್‌ನಲ್ಲಿ “ನನ್ನ ಈ ಉಪವಾಸದ ಸಾಂಕೇತಿಕ ಸತ್ಯಾಗ್ರಹ 18,000 ಅಡಿಯಲ್ಲಿರುವ ಖಾರ್ಡೊಂಗ್ಲಾ ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ಜನವರಿ 26 ರಿಂದ ಪ್ರಾರಂಭವಾಗಲಿದೆ. ನನ್ನ ಛಾವಣಿಯ ಮೇಲೆ ಲಡಾಕ್ ಅನ್ನು ರಕ್ಷಿಸಿ ಎಂದು 20 ಅನುಭವಗಳು ಇರಲಿವೆ” ಎಂದು ತಿಳಿಸಿದ್ದಾರೆ.

ವಾಂಗ್ಚುಕ್ ಅವರು 1966 ರಲ್ಲಿ ಜನಿಸಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್ (HIAL) ನ ನಿರ್ದೇಶಕರರಾಗಿದ್ದಾರೆ. 2018 ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದರು.

2009ರಲ್ಲಿ ಬಮದಂತಹ ‘3 ಈಡಿಯಟ್ಸ್’ ಅಮೀರ್ ಖಾನ್ ಅವರ ಚಲನಚಿತ್ರದಲ್ಲಿ ಫುನ್ಸುಖ್ ವಾಂಗ್ಡು ಎಂಬ ಕಾಲ್ಪನಿಕ ಪಾತ್ರಕ್ಕೆ ವಾಂಗ್ಚುಕ್ ಅವರ ವ್ಯಕ್ತಿತ್ವವೇ ಸ್ಪೂರ್ತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...