Homeಮುಖಪುಟಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: '3 ಈಡಿಯಟ್ಸ್' ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

ಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: ‘3 ಈಡಿಯಟ್ಸ್’ ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

- Advertisement -
- Advertisement -

ಸೋನಮ್ ವಾಂಗ್ಚುಕ್, ಲಡಾಖ್‌ನ ಸಮಾಜ ಸುಧಾರಕರು, ಅವರ ಜೀವನ ಕಥೆಯು ಬಾಲಿವುಡ್ ಚಲನಚಿತ್ರ ‘3 ಈಡಿಯಟ್ಸ್’ಗೆ ಸ್ಫೂರ್ತಿ ನೀಡಿತು. ಕೇಂದ್ರಾಡಳಿತ ಪ್ರದೇಶದಲ್ಲಿನ ಸುಮಾರು 2/3 ರಷ್ಟು ಹಿಮನದಿಗಳು ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಗಳು ಸೂಚಿಸಿವೆ. ಹಾಗಾಗಿ ಲಡಾಖ್‌ನ ಸುರಕ್ಷತೆ ಮತ್ತು ರಕ್ಷಣೆಯ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋನಮ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾನುವಾರ ಎಎನ್‌ಐ ಜೊತೆ ಮಾತನಾಡಿದ ಸೋನಮ್ ವಾಂಗ್‌ಚುಕ್, “ಇದೇ ರೀತಿಯ ಅಜಾಗರೂಕತೆ ಮುಂದುವರಿದರೆ ಮತ್ತು ಲಡಾಖ್‌ಗೆ ಕೈಗಾರಿಕೆಗಳಿಂದ ರಕ್ಷಣೆ ನೀಡದಿದ್ದರೆ, ಇಲ್ಲಿನ ಹಿಮನದಿಗಳು ಅಳಿದುಹೋಗುತ್ತವೆ. ಹೀಗಾಗಿ ಭಾರತ ಮತ್ತು ಅದರ ನೆರೆಹೊರೆಯ ದೇಶಗಳಿಗೆ ನೀರಿನ ಕೊರತೆ ಉಂಟಾಗಿ ಅಗಾಧವಾದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

“ಕಾಶ್ಮೀರ ವಿಶ್ವವಿದ್ಯಾನಿಲಯ ಮತ್ತು ಇತರ ಸಂಶೋಧನಾ ಸಂಸ್ಥೆಗಳ ಅಧ್ಯಯನಗಳ ಪ್ರಕಾರ ಲೇಹ್-ಲಡಾಖ್‌ನಲ್ಲಿರುವ ಹಿಮನದಿಗಳ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಅದರ 2/3 ಭಾಗ ಅಳಿದುಹೋಗುತ್ತವೆ ಎಂದು ಹೇಳಿವೆ. ಕಾಶ್ಮೀರ ವಿಶ್ವವಿದ್ಯಾನಿಲಯದ ಅಧ್ಯಯನವು ಹೆದ್ದಾರಿಗಳು ಮತ್ತು ಮಾನವ ಚಟುವಟಿಕೆಗಳಿಂದ ಆವೃತವಾಗಿರುವ ಹಿಮನದಿಗಳು ತುಲನಾತ್ಮಕವಾಗಿ ವೇಗವಾಗಿ ಕರಗುತ್ತಿವೆ ಎಂದು ಕಂಡುಹಿಡಿದಿದೆ” ಎಂದು ವಾಂಗ್ಚುಕ್ ಹೇಳಿದರು.

ಈ ಹವಾಮಾನ ಬದಲಾವಣೆಗೆ ಅಮೆರಿಕ ಮತ್ತು ಯುರೋಪ್‌ನ ಜಾಗತಿಕ ತಾಪಮಾನ ಮಾತ್ರ ಕಾರಣವಲ್ಲ, ಆದರೆ ಸ್ಥಳೀಯ ಕಾರ್ಖಾನೆಗಳ ಹೊರಸೂಸುವಿಕೆಯೂ ಕೂಡ ಇದಕ್ಕೆ ಸಮಾನವಾಗಿ ಕಾರಣವಾಗಿದೆ. ಲಡಾಖ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಮಾನವ ಚಟುವಟಿಕೆಗಳು ಇರಬೇಕು ಇದರಿಂದ ಹಿಮನದಿಗಳು ಉಳಿಯಬಹುದು” ಎಂದರು.

“ಈ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಒತ್ತಿಹೇಳುತ್ತಾ, ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳನ್ನು “ಕೈಗಾರಿಕಾ ಶೋಷಣೆ” ಯಿಂದ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಇದು ಜನರ ಜೀವನ ಮತ್ತು ಉದ್ಯೋಗವನ್ನು ರಕ್ಷಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

“ಈ ಕೈಗಾರಿಕಾ ಶೋಷಣೆಯಿಂದ ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳಿಗೆ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿಯವರಿಗೆ ನನ್ನ ಮನವಿಯಾಗಿದೆ ಏಕೆಂದರೆ ಇದು ಜನರ ಜೀವನ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ಷಿಸುತ್ತದೆ. ಆದರೆ, ಸರ್ಕಾರದ ಜೊತೆಗೆ ಜನರು ಸಹಕರಿಸಬೇಕು. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಅದನ್ನು ತಗ್ಗಿಸುವ ಕ್ರಮಗಳನ್ನು ಸರ್ಕಾರ ನೋಡಿಕೊಳ್ಳಬೇಕು” ಎಂದು ಹೇಳಿದರು.

ವಾಂಗ್‌ಚುಕ್ ಅವರು 13 ನಿಮಿಷಗಳ ಸುದೀರ್ಘ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಲಡಾಖ್‌ನ “ಪರಿಸರ ಸೂಕ್ಷ್ಮ” ಪ್ರದೇಶವನ್ನು ರಕ್ಷಿಸಲು ತುರ್ತಾಗಿ ಸಹಾಯ ಮಾಡಲು ದೇಶದ ಮತ್ತು ಪ್ರಪಂಚದ ಜನರಿಗೆ ಮನವಿ ಮಾಡಿದ್ದಾರೆ. ಪರಿಸರ ವ್ಯವಸ್ಥೆಯ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮತ್ತು ರಕ್ಷಿಸಲು ಅವರು ಪ್ರಧಾನಿ ಮೋದಿಯವರಿಗೆ ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಹೈಲೈಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದು, “ಲಡಾಖ್‌ನಲ್ಲಿ ಎಲ್ಲವೂ ಚೆನ್ನಾಗಿಲ್ಲ! ನನ್ನ ಇತ್ತೀಚಿನ ವೀಡಿಯೊದಲ್ಲಿ ನಾನು @narendramodi ಜೀ ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡುತ್ತಿದ್ದೇನೆ. ಹಾಳಾಗುತ್ತಿರುವ ಲಡಾಕ್ ಪ್ರದೇಶಕ್ಕೆ ರಕ್ಷಣೆ ನೀಡಿ. ಸರ್ಕಾರ ಮತ್ತು ಪ್ರಪಂಚದ ಗಮನ ಸೆಳೆಯಲು ನಾನು 26 ಜನವರಿಯಿಂದ 5 ದಿನ ಖರ್ಡೊಂಗ್ಲಾ ಪಾಸ್‌ನಲ್ಲಿ 18000 ಅಡಿ -40 ಡಿಗ್ರಿ ಸೆಲ್ಸಿಯಸ್‌ ಹವಾಮಾನದಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ವಾಂಗ್‌ಚುಕ್ ಎಎನ್‌ಐ ಜೊತೆ ಮಾತನಾಡುತ್ತಾ, “ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಮತ್ತು ಜನರಿಗೆ ನಾನು ಸಂದೇಶವನ್ನು ತಲುಪಿಸಬೇಕೆಂದು ಬಯಸುತ್ತಿದ್ದೇನೆ ಅದಕ್ಕಾಗಿ, ಖರ್ಡೊಂಗ್ಲಾ ಪಾಸ್‌ನಲ್ಲಿ ಐದು ದಿನಗಳ ಕಾಲ ಉಪವಾಸ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

“ನಾವು ಭೂಮಿಗೆ ಇಂತಹ ಅಪಾಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಈ ಹಿಮನದಿಗಳು ಇನ್ನು ಮುಂದೆ ಬದುಕುವುದಿಲ್ಲ. ಈ ನನ್ನ ಸಂದೇಶವನ್ನು ನೀಡಲು ನಾನು ಮೈನಸ್ 40 ಡಿಗ್ರಿ ತಾಪಮಾನದಲ್ಲಿ ಖಾರ್ಡೊಂಗ್ಲಾ ಪಾಸ್‌ನಲ್ಲಿ 5 ದಿನಗಳ ದೀರ್ಘ ಉಪವಾಸವನ್ನು ನಡೆಸುತ್ತೇನೆ” ಎಂದು ಅವರು ANI ಗೆ ತಿಳಿಸಿದ್ದಾರೆ.

ವಾಂಗ್‌ಚುಕ್ ಅವರು ತಮ್ಮ ಮತ್ತೊಂದು ಟ್ವೀಟ್‌ನಲ್ಲಿ “ನನ್ನ ಈ ಉಪವಾಸದ ಸಾಂಕೇತಿಕ ಸತ್ಯಾಗ್ರಹ 18,000 ಅಡಿಯಲ್ಲಿರುವ ಖಾರ್ಡೊಂಗ್ಲಾ ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ಜನವರಿ 26 ರಿಂದ ಪ್ರಾರಂಭವಾಗಲಿದೆ. ನನ್ನ ಛಾವಣಿಯ ಮೇಲೆ ಲಡಾಕ್ ಅನ್ನು ರಕ್ಷಿಸಿ ಎಂದು 20 ಅನುಭವಗಳು ಇರಲಿವೆ” ಎಂದು ತಿಳಿಸಿದ್ದಾರೆ.

ವಾಂಗ್ಚುಕ್ ಅವರು 1966 ರಲ್ಲಿ ಜನಿಸಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್ (HIAL) ನ ನಿರ್ದೇಶಕರರಾಗಿದ್ದಾರೆ. 2018 ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದರು.

2009ರಲ್ಲಿ ಬಮದಂತಹ ‘3 ಈಡಿಯಟ್ಸ್’ ಅಮೀರ್ ಖಾನ್ ಅವರ ಚಲನಚಿತ್ರದಲ್ಲಿ ಫುನ್ಸುಖ್ ವಾಂಗ್ಡು ಎಂಬ ಕಾಲ್ಪನಿಕ ಪಾತ್ರಕ್ಕೆ ವಾಂಗ್ಚುಕ್ ಅವರ ವ್ಯಕ್ತಿತ್ವವೇ ಸ್ಪೂರ್ತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...