Homeಮುಖಪುಟಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: '3 ಈಡಿಯಟ್ಸ್' ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

ಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: ‘3 ಈಡಿಯಟ್ಸ್’ ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

- Advertisement -
- Advertisement -

ಸೋನಮ್ ವಾಂಗ್ಚುಕ್, ಲಡಾಖ್‌ನ ಸಮಾಜ ಸುಧಾರಕರು, ಅವರ ಜೀವನ ಕಥೆಯು ಬಾಲಿವುಡ್ ಚಲನಚಿತ್ರ ‘3 ಈಡಿಯಟ್ಸ್’ಗೆ ಸ್ಫೂರ್ತಿ ನೀಡಿತು. ಕೇಂದ್ರಾಡಳಿತ ಪ್ರದೇಶದಲ್ಲಿನ ಸುಮಾರು 2/3 ರಷ್ಟು ಹಿಮನದಿಗಳು ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಗಳು ಸೂಚಿಸಿವೆ. ಹಾಗಾಗಿ ಲಡಾಖ್‌ನ ಸುರಕ್ಷತೆ ಮತ್ತು ರಕ್ಷಣೆಯ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋನಮ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾನುವಾರ ಎಎನ್‌ಐ ಜೊತೆ ಮಾತನಾಡಿದ ಸೋನಮ್ ವಾಂಗ್‌ಚುಕ್, “ಇದೇ ರೀತಿಯ ಅಜಾಗರೂಕತೆ ಮುಂದುವರಿದರೆ ಮತ್ತು ಲಡಾಖ್‌ಗೆ ಕೈಗಾರಿಕೆಗಳಿಂದ ರಕ್ಷಣೆ ನೀಡದಿದ್ದರೆ, ಇಲ್ಲಿನ ಹಿಮನದಿಗಳು ಅಳಿದುಹೋಗುತ್ತವೆ. ಹೀಗಾಗಿ ಭಾರತ ಮತ್ತು ಅದರ ನೆರೆಹೊರೆಯ ದೇಶಗಳಿಗೆ ನೀರಿನ ಕೊರತೆ ಉಂಟಾಗಿ ಅಗಾಧವಾದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

“ಕಾಶ್ಮೀರ ವಿಶ್ವವಿದ್ಯಾನಿಲಯ ಮತ್ತು ಇತರ ಸಂಶೋಧನಾ ಸಂಸ್ಥೆಗಳ ಅಧ್ಯಯನಗಳ ಪ್ರಕಾರ ಲೇಹ್-ಲಡಾಖ್‌ನಲ್ಲಿರುವ ಹಿಮನದಿಗಳ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಅದರ 2/3 ಭಾಗ ಅಳಿದುಹೋಗುತ್ತವೆ ಎಂದು ಹೇಳಿವೆ. ಕಾಶ್ಮೀರ ವಿಶ್ವವಿದ್ಯಾನಿಲಯದ ಅಧ್ಯಯನವು ಹೆದ್ದಾರಿಗಳು ಮತ್ತು ಮಾನವ ಚಟುವಟಿಕೆಗಳಿಂದ ಆವೃತವಾಗಿರುವ ಹಿಮನದಿಗಳು ತುಲನಾತ್ಮಕವಾಗಿ ವೇಗವಾಗಿ ಕರಗುತ್ತಿವೆ ಎಂದು ಕಂಡುಹಿಡಿದಿದೆ” ಎಂದು ವಾಂಗ್ಚುಕ್ ಹೇಳಿದರು.

ಈ ಹವಾಮಾನ ಬದಲಾವಣೆಗೆ ಅಮೆರಿಕ ಮತ್ತು ಯುರೋಪ್‌ನ ಜಾಗತಿಕ ತಾಪಮಾನ ಮಾತ್ರ ಕಾರಣವಲ್ಲ, ಆದರೆ ಸ್ಥಳೀಯ ಕಾರ್ಖಾನೆಗಳ ಹೊರಸೂಸುವಿಕೆಯೂ ಕೂಡ ಇದಕ್ಕೆ ಸಮಾನವಾಗಿ ಕಾರಣವಾಗಿದೆ. ಲಡಾಖ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಮಾನವ ಚಟುವಟಿಕೆಗಳು ಇರಬೇಕು ಇದರಿಂದ ಹಿಮನದಿಗಳು ಉಳಿಯಬಹುದು” ಎಂದರು.

“ಈ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಒತ್ತಿಹೇಳುತ್ತಾ, ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳನ್ನು “ಕೈಗಾರಿಕಾ ಶೋಷಣೆ” ಯಿಂದ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಇದು ಜನರ ಜೀವನ ಮತ್ತು ಉದ್ಯೋಗವನ್ನು ರಕ್ಷಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

“ಈ ಕೈಗಾರಿಕಾ ಶೋಷಣೆಯಿಂದ ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳಿಗೆ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿಯವರಿಗೆ ನನ್ನ ಮನವಿಯಾಗಿದೆ ಏಕೆಂದರೆ ಇದು ಜನರ ಜೀವನ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ಷಿಸುತ್ತದೆ. ಆದರೆ, ಸರ್ಕಾರದ ಜೊತೆಗೆ ಜನರು ಸಹಕರಿಸಬೇಕು. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಅದನ್ನು ತಗ್ಗಿಸುವ ಕ್ರಮಗಳನ್ನು ಸರ್ಕಾರ ನೋಡಿಕೊಳ್ಳಬೇಕು” ಎಂದು ಹೇಳಿದರು.

ವಾಂಗ್‌ಚುಕ್ ಅವರು 13 ನಿಮಿಷಗಳ ಸುದೀರ್ಘ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಲಡಾಖ್‌ನ “ಪರಿಸರ ಸೂಕ್ಷ್ಮ” ಪ್ರದೇಶವನ್ನು ರಕ್ಷಿಸಲು ತುರ್ತಾಗಿ ಸಹಾಯ ಮಾಡಲು ದೇಶದ ಮತ್ತು ಪ್ರಪಂಚದ ಜನರಿಗೆ ಮನವಿ ಮಾಡಿದ್ದಾರೆ. ಪರಿಸರ ವ್ಯವಸ್ಥೆಯ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮತ್ತು ರಕ್ಷಿಸಲು ಅವರು ಪ್ರಧಾನಿ ಮೋದಿಯವರಿಗೆ ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಹೈಲೈಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದು, “ಲಡಾಖ್‌ನಲ್ಲಿ ಎಲ್ಲವೂ ಚೆನ್ನಾಗಿಲ್ಲ! ನನ್ನ ಇತ್ತೀಚಿನ ವೀಡಿಯೊದಲ್ಲಿ ನಾನು @narendramodi ಜೀ ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡುತ್ತಿದ್ದೇನೆ. ಹಾಳಾಗುತ್ತಿರುವ ಲಡಾಕ್ ಪ್ರದೇಶಕ್ಕೆ ರಕ್ಷಣೆ ನೀಡಿ. ಸರ್ಕಾರ ಮತ್ತು ಪ್ರಪಂಚದ ಗಮನ ಸೆಳೆಯಲು ನಾನು 26 ಜನವರಿಯಿಂದ 5 ದಿನ ಖರ್ಡೊಂಗ್ಲಾ ಪಾಸ್‌ನಲ್ಲಿ 18000 ಅಡಿ -40 ಡಿಗ್ರಿ ಸೆಲ್ಸಿಯಸ್‌ ಹವಾಮಾನದಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ವಾಂಗ್‌ಚುಕ್ ಎಎನ್‌ಐ ಜೊತೆ ಮಾತನಾಡುತ್ತಾ, “ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಮತ್ತು ಜನರಿಗೆ ನಾನು ಸಂದೇಶವನ್ನು ತಲುಪಿಸಬೇಕೆಂದು ಬಯಸುತ್ತಿದ್ದೇನೆ ಅದಕ್ಕಾಗಿ, ಖರ್ಡೊಂಗ್ಲಾ ಪಾಸ್‌ನಲ್ಲಿ ಐದು ದಿನಗಳ ಕಾಲ ಉಪವಾಸ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

“ನಾವು ಭೂಮಿಗೆ ಇಂತಹ ಅಪಾಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಈ ಹಿಮನದಿಗಳು ಇನ್ನು ಮುಂದೆ ಬದುಕುವುದಿಲ್ಲ. ಈ ನನ್ನ ಸಂದೇಶವನ್ನು ನೀಡಲು ನಾನು ಮೈನಸ್ 40 ಡಿಗ್ರಿ ತಾಪಮಾನದಲ್ಲಿ ಖಾರ್ಡೊಂಗ್ಲಾ ಪಾಸ್‌ನಲ್ಲಿ 5 ದಿನಗಳ ದೀರ್ಘ ಉಪವಾಸವನ್ನು ನಡೆಸುತ್ತೇನೆ” ಎಂದು ಅವರು ANI ಗೆ ತಿಳಿಸಿದ್ದಾರೆ.

ವಾಂಗ್‌ಚುಕ್ ಅವರು ತಮ್ಮ ಮತ್ತೊಂದು ಟ್ವೀಟ್‌ನಲ್ಲಿ “ನನ್ನ ಈ ಉಪವಾಸದ ಸಾಂಕೇತಿಕ ಸತ್ಯಾಗ್ರಹ 18,000 ಅಡಿಯಲ್ಲಿರುವ ಖಾರ್ಡೊಂಗ್ಲಾ ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ಜನವರಿ 26 ರಿಂದ ಪ್ರಾರಂಭವಾಗಲಿದೆ. ನನ್ನ ಛಾವಣಿಯ ಮೇಲೆ ಲಡಾಕ್ ಅನ್ನು ರಕ್ಷಿಸಿ ಎಂದು 20 ಅನುಭವಗಳು ಇರಲಿವೆ” ಎಂದು ತಿಳಿಸಿದ್ದಾರೆ.

ವಾಂಗ್ಚುಕ್ ಅವರು 1966 ರಲ್ಲಿ ಜನಿಸಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್ (HIAL) ನ ನಿರ್ದೇಶಕರರಾಗಿದ್ದಾರೆ. 2018 ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದರು.

2009ರಲ್ಲಿ ಬಮದಂತಹ ‘3 ಈಡಿಯಟ್ಸ್’ ಅಮೀರ್ ಖಾನ್ ಅವರ ಚಲನಚಿತ್ರದಲ್ಲಿ ಫುನ್ಸುಖ್ ವಾಂಗ್ಡು ಎಂಬ ಕಾಲ್ಪನಿಕ ಪಾತ್ರಕ್ಕೆ ವಾಂಗ್ಚುಕ್ ಅವರ ವ್ಯಕ್ತಿತ್ವವೇ ಸ್ಪೂರ್ತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...