Homeಮುಖಪುಟಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: '3 ಈಡಿಯಟ್ಸ್' ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

ಲಡಾಖ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ: ‘3 ಈಡಿಯಟ್ಸ್’ ಚಿತ್ರಕ್ಕೆ ಸ್ಫೂರ್ತಿಯಾದ ವ್ಯಕ್ತಿಯಿಂದ ಪ್ರಧಾನಿಗೆ ಮನವಿ

- Advertisement -
- Advertisement -

ಸೋನಮ್ ವಾಂಗ್ಚುಕ್, ಲಡಾಖ್‌ನ ಸಮಾಜ ಸುಧಾರಕರು, ಅವರ ಜೀವನ ಕಥೆಯು ಬಾಲಿವುಡ್ ಚಲನಚಿತ್ರ ‘3 ಈಡಿಯಟ್ಸ್’ಗೆ ಸ್ಫೂರ್ತಿ ನೀಡಿತು. ಕೇಂದ್ರಾಡಳಿತ ಪ್ರದೇಶದಲ್ಲಿನ ಸುಮಾರು 2/3 ರಷ್ಟು ಹಿಮನದಿಗಳು ಅಳಿವಿನಂಚಿನಲ್ಲಿವೆ ಎಂದು ಅಧ್ಯಯನಗಳು ಸೂಚಿಸಿವೆ. ಹಾಗಾಗಿ ಲಡಾಖ್‌ನ ಸುರಕ್ಷತೆ ಮತ್ತು ರಕ್ಷಣೆಯ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋನಮ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾನುವಾರ ಎಎನ್‌ಐ ಜೊತೆ ಮಾತನಾಡಿದ ಸೋನಮ್ ವಾಂಗ್‌ಚುಕ್, “ಇದೇ ರೀತಿಯ ಅಜಾಗರೂಕತೆ ಮುಂದುವರಿದರೆ ಮತ್ತು ಲಡಾಖ್‌ಗೆ ಕೈಗಾರಿಕೆಗಳಿಂದ ರಕ್ಷಣೆ ನೀಡದಿದ್ದರೆ, ಇಲ್ಲಿನ ಹಿಮನದಿಗಳು ಅಳಿದುಹೋಗುತ್ತವೆ. ಹೀಗಾಗಿ ಭಾರತ ಮತ್ತು ಅದರ ನೆರೆಹೊರೆಯ ದೇಶಗಳಿಗೆ ನೀರಿನ ಕೊರತೆ ಉಂಟಾಗಿ ಅಗಾಧವಾದ ಸಮಸ್ಯೆಗಳನ್ನು ಸೃಷ್ಟಿಸುತ್ತದೆ” ಎಂದು ಹೇಳಿದರು.

“ಕಾಶ್ಮೀರ ವಿಶ್ವವಿದ್ಯಾನಿಲಯ ಮತ್ತು ಇತರ ಸಂಶೋಧನಾ ಸಂಸ್ಥೆಗಳ ಅಧ್ಯಯನಗಳ ಪ್ರಕಾರ ಲೇಹ್-ಲಡಾಖ್‌ನಲ್ಲಿರುವ ಹಿಮನದಿಗಳ ಬಗ್ಗೆ ಸರಿಯಾಗಿ ಕಾಳಜಿ ವಹಿಸದಿದ್ದರೆ ಅದರ 2/3 ಭಾಗ ಅಳಿದುಹೋಗುತ್ತವೆ ಎಂದು ಹೇಳಿವೆ. ಕಾಶ್ಮೀರ ವಿಶ್ವವಿದ್ಯಾನಿಲಯದ ಅಧ್ಯಯನವು ಹೆದ್ದಾರಿಗಳು ಮತ್ತು ಮಾನವ ಚಟುವಟಿಕೆಗಳಿಂದ ಆವೃತವಾಗಿರುವ ಹಿಮನದಿಗಳು ತುಲನಾತ್ಮಕವಾಗಿ ವೇಗವಾಗಿ ಕರಗುತ್ತಿವೆ ಎಂದು ಕಂಡುಹಿಡಿದಿದೆ” ಎಂದು ವಾಂಗ್ಚುಕ್ ಹೇಳಿದರು.

ಈ ಹವಾಮಾನ ಬದಲಾವಣೆಗೆ ಅಮೆರಿಕ ಮತ್ತು ಯುರೋಪ್‌ನ ಜಾಗತಿಕ ತಾಪಮಾನ ಮಾತ್ರ ಕಾರಣವಲ್ಲ, ಆದರೆ ಸ್ಥಳೀಯ ಕಾರ್ಖಾನೆಗಳ ಹೊರಸೂಸುವಿಕೆಯೂ ಕೂಡ ಇದಕ್ಕೆ ಸಮಾನವಾಗಿ ಕಾರಣವಾಗಿದೆ. ಲಡಾಖ್‌ನಂತಹ ಪ್ರದೇಶಗಳಲ್ಲಿ ಕನಿಷ್ಠ ಮಾನವ ಚಟುವಟಿಕೆಗಳು ಇರಬೇಕು ಇದರಿಂದ ಹಿಮನದಿಗಳು ಉಳಿಯಬಹುದು” ಎಂದರು.

“ಈ ಪ್ರದೇಶದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ ಎಂದು ಒತ್ತಿಹೇಳುತ್ತಾ, ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳನ್ನು “ಕೈಗಾರಿಕಾ ಶೋಷಣೆ” ಯಿಂದ ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಇದು ಜನರ ಜೀವನ ಮತ್ತು ಉದ್ಯೋಗವನ್ನು ರಕ್ಷಿಸಲು ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

“ಈ ಕೈಗಾರಿಕಾ ಶೋಷಣೆಯಿಂದ ಲಡಾಖ್ ಮತ್ತು ಇತರ ಹಿಮಾಲಯ ಪ್ರದೇಶಗಳಿಗೆ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿಯವರಿಗೆ ನನ್ನ ಮನವಿಯಾಗಿದೆ ಏಕೆಂದರೆ ಇದು ಜನರ ಜೀವನ ಮತ್ತು ಉದ್ಯೋಗಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ಷಿಸುತ್ತದೆ. ಆದರೆ, ಸರ್ಕಾರದ ಜೊತೆಗೆ ಜನರು ಸಹಕರಿಸಬೇಕು. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ ವಹಿಸಿ ಮತ್ತು ಅದನ್ನು ತಗ್ಗಿಸುವ ಕ್ರಮಗಳನ್ನು ಸರ್ಕಾರ ನೋಡಿಕೊಳ್ಳಬೇಕು” ಎಂದು ಹೇಳಿದರು.

ವಾಂಗ್‌ಚುಕ್ ಅವರು 13 ನಿಮಿಷಗಳ ಸುದೀರ್ಘ ವೀಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಅವರು ಲಡಾಖ್‌ನ “ಪರಿಸರ ಸೂಕ್ಷ್ಮ” ಪ್ರದೇಶವನ್ನು ರಕ್ಷಿಸಲು ತುರ್ತಾಗಿ ಸಹಾಯ ಮಾಡಲು ದೇಶದ ಮತ್ತು ಪ್ರಪಂಚದ ಜನರಿಗೆ ಮನವಿ ಮಾಡಿದ್ದಾರೆ. ಪರಿಸರ ವ್ಯವಸ್ಥೆಯ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಮತ್ತು ರಕ್ಷಿಸಲು ಅವರು ಪ್ರಧಾನಿ ಮೋದಿಯವರಿಗೆ ಭಾರತೀಯ ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಹೈಲೈಟ್ ಮಾಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದು, “ಲಡಾಖ್‌ನಲ್ಲಿ ಎಲ್ಲವೂ ಚೆನ್ನಾಗಿಲ್ಲ! ನನ್ನ ಇತ್ತೀಚಿನ ವೀಡಿಯೊದಲ್ಲಿ ನಾನು @narendramodi ಜೀ ಅವರಿಗೆ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡುತ್ತಿದ್ದೇನೆ. ಹಾಳಾಗುತ್ತಿರುವ ಲಡಾಕ್ ಪ್ರದೇಶಕ್ಕೆ ರಕ್ಷಣೆ ನೀಡಿ. ಸರ್ಕಾರ ಮತ್ತು ಪ್ರಪಂಚದ ಗಮನ ಸೆಳೆಯಲು ನಾನು 26 ಜನವರಿಯಿಂದ 5 ದಿನ ಖರ್ಡೊಂಗ್ಲಾ ಪಾಸ್‌ನಲ್ಲಿ 18000 ಅಡಿ -40 ಡಿಗ್ರಿ ಸೆಲ್ಸಿಯಸ್‌ ಹವಾಮಾನದಲ್ಲಿ ಉಪವಾಸ ಕುಳಿತುಕೊಳ್ಳಲು ನಿರ್ಧರಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ವಾಂಗ್‌ಚುಕ್ ಎಎನ್‌ಐ ಜೊತೆ ಮಾತನಾಡುತ್ತಾ, “ಗಣರಾಜ್ಯೋತ್ಸವದಂದು ಪ್ರಧಾನಿ ಮೋದಿ ಮತ್ತು ಜನರಿಗೆ ನಾನು ಸಂದೇಶವನ್ನು ತಲುಪಿಸಬೇಕೆಂದು ಬಯಸುತ್ತಿದ್ದೇನೆ ಅದಕ್ಕಾಗಿ, ಖರ್ಡೊಂಗ್ಲಾ ಪಾಸ್‌ನಲ್ಲಿ ಐದು ದಿನಗಳ ಕಾಲ ಉಪವಾಸ ಕುಳಿತುಕೊಳ್ಳುತ್ತೇನೆ” ಎಂದು ಹೇಳಿದರು.

“ನಾವು ಭೂಮಿಗೆ ಇಂತಹ ಅಪಾಯಗಳನ್ನು ಮಾಡುವುದನ್ನು ಮುಂದುವರಿಸಿದರೆ ಈ ಹಿಮನದಿಗಳು ಇನ್ನು ಮುಂದೆ ಬದುಕುವುದಿಲ್ಲ. ಈ ನನ್ನ ಸಂದೇಶವನ್ನು ನೀಡಲು ನಾನು ಮೈನಸ್ 40 ಡಿಗ್ರಿ ತಾಪಮಾನದಲ್ಲಿ ಖಾರ್ಡೊಂಗ್ಲಾ ಪಾಸ್‌ನಲ್ಲಿ 5 ದಿನಗಳ ದೀರ್ಘ ಉಪವಾಸವನ್ನು ನಡೆಸುತ್ತೇನೆ” ಎಂದು ಅವರು ANI ಗೆ ತಿಳಿಸಿದ್ದಾರೆ.

ವಾಂಗ್‌ಚುಕ್ ಅವರು ತಮ್ಮ ಮತ್ತೊಂದು ಟ್ವೀಟ್‌ನಲ್ಲಿ “ನನ್ನ ಈ ಉಪವಾಸದ ಸಾಂಕೇತಿಕ ಸತ್ಯಾಗ್ರಹ 18,000 ಅಡಿಯಲ್ಲಿರುವ ಖಾರ್ಡೊಂಗ್ಲಾ ನಲ್ಲಿ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ನಲ್ಲಿ ಜನವರಿ 26 ರಿಂದ ಪ್ರಾರಂಭವಾಗಲಿದೆ. ನನ್ನ ಛಾವಣಿಯ ಮೇಲೆ ಲಡಾಕ್ ಅನ್ನು ರಕ್ಷಿಸಿ ಎಂದು 20 ಅನುಭವಗಳು ಇರಲಿವೆ” ಎಂದು ತಿಳಿಸಿದ್ದಾರೆ.

ವಾಂಗ್ಚುಕ್ ಅವರು 1966 ರಲ್ಲಿ ಜನಿಸಿದ್ದು, ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ಸ್, ಲಡಾಖ್ (HIAL) ನ ನಿರ್ದೇಶಕರರಾಗಿದ್ದಾರೆ. 2018 ರಲ್ಲಿ ಮ್ಯಾಗ್ಸೆಸೆ ಪ್ರಶಸ್ತಿಗೆ ಭಾಜನರಾಗಿದ್ದರು.

2009ರಲ್ಲಿ ಬಮದಂತಹ ‘3 ಈಡಿಯಟ್ಸ್’ ಅಮೀರ್ ಖಾನ್ ಅವರ ಚಲನಚಿತ್ರದಲ್ಲಿ ಫುನ್ಸುಖ್ ವಾಂಗ್ಡು ಎಂಬ ಕಾಲ್ಪನಿಕ ಪಾತ್ರಕ್ಕೆ ವಾಂಗ್ಚುಕ್ ಅವರ ವ್ಯಕ್ತಿತ್ವವೇ ಸ್ಪೂರ್ತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...