Homeಮುಖಪುಟಹಿಮಾಚಲ ಕಾಂಗ್ರೆಸ್​​ನಲ್ಲಿ ಎಲ್ಲವೂ ಸರಿಯಿದೆ: ಡಿಕೆ ಶಿವಕುಮಾರ್

ಹಿಮಾಚಲ ಕಾಂಗ್ರೆಸ್​​ನಲ್ಲಿ ಎಲ್ಲವೂ ಸರಿಯಿದೆ: ಡಿಕೆ ಶಿವಕುಮಾರ್

- Advertisement -
- Advertisement -

ಬಣ ರಾಜಕೀಯದಿಂದ ಪತನವಾಗುವ ಹಂತ ತಲುಪಿದ್ದ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇದೆ ಎಂಬ ಸಂದೇಶವನ್ನು ಡಿ.ಕೆ ಶಿವಕುಮಾರ್ ರವಾನಿಸಿದ್ದಾರೆ.

ಶಿಮ್ಲಾದಲ್ಲಿ ಗುರುವಾರ ಸಂಜೆ ವಿಕ್ರಮಾದಿತ್ಯ ಸಿಂಗ್ ಹಾಗೂ ಪ್ರತಿಭಾ ಸಿಂಗ್ ಅವರೊಂದಿಗೆ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್, “ಎಲ್ಲವೂ ಸರಿಯಿದೆ. ಸರ್ಕಾರ 5 ವರ್ಷಗಳ ಕಾಲ ಆಡಳಿತ ನಡೆಸಲಿದೆ. ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲಾಗಿದೆ” ಎಂದು  ಎಂದಿದ್ದಾರೆ.

“ರಾಜ್ಯಸಭಾ ಚುನಾವಣೆಯ ಸೋಲಿನ ಹೊಣೆಯನ್ನು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ವಹಿಸಿಕೊಂಡಿದ್ದಾರೆ. ಕೆಲ ವೈಫಲ್ಯಗಳನ್ನು ನಮ್ಮ ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ನಾವು ಪಿಸಿಸಿ ಅಧ್ಯಕ್ಷರು, ಸಿಎಂ ಮತ್ತು ಪ್ರತಿಯೊಬ್ಬ ಶಾಸಕರ ಜೊತೆ ಮಾತನಾಡಿದ್ದೇವೆ‌. ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸಲು ಐದಾರು ಜನರ ಸಮಿತಿ ರಚಿಸುತ್ತೇವೆ” ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.

“ನಾವು ಶಾಸಕರನ್ನು ಹಿಡಿದಿಡುವಲ್ಲಿ ವಿಫಲವಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಇದರಲ್ಲಿ ಗುಪ್ತಚರದ ವೈಫಲ್ಯವೂ ಇತ್ತು. ಅಲ್ಲದೆ, ಬಿಜೆಪಿ ನಮ್ಮ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂಬುವುದು ನಮಗೆ ತಿಳಿದಿರಲಿಲ್ಲ” ಎಂದು ಸಿಎಂ ಸುಖ್ವಿಂದರ್ ಸಿಂಗ್ ಹೇಳಿದ್ದಾರೆ.

ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರಿಗೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಆಗುತ್ತಿಲ್ಲ ಎಂದು ಕೆಲ ಶಾಸಕರು ಆರೋಪಿಸಿದ್ದರು. ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ, ಸಚಿವ ವಿಕ್ರಮಾದಿತ್ಯ ಸಿಂಗ್, “ಸುಖ್ವಿಂದರ್ ಸಿಂಗ್ ನನ್ನ ತಂದೆಗೆ ಅವಮಾನ ಮಾಡಿದ್ದಾರೆ” ಎಂದು ಆರೋಪಿಸಿ ರಾಜೀನಾಮೆ ನೀಡಿದ್ದರು.

ಈ ಬೆನ್ನಲ್ಲೇ ಸರ್ಕಾರ ಪತನಗೊಳ್ಳುವ ಆತಂಕ ಎದುರಾಗಿತ್ತು. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಕೂಡ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಈ ನಡುವೆ ಹೈಕಮಾಂಡ್ ಸೂಚನೆಯಂತೆ ಶಿಮ್ಲಾಗೆ ತೆರಳಿದ ಡಿ.ಕೆ ಶಿವಕುಮಾರ್ ಅಸಮಾಧಾನಿತರನ್ನು ಸಮಾಧಾನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸರ್ಕಾರ ಸಂಕಷ್ಟಕ್ಕೆ ಸಿಲುಕಿದ್ದ ನಡುವೆ ನಿನ್ನೆ 15 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಸ್ಪೀಕರ್ ಅಮಾನತ್ತು ಮಾಡಿದ್ದರು. ಇಂದು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ 6 ಮಂದಿ ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿಯಲ್ಲಿ ಪೂಜೆಗೆ ಅವಕಾಶ ಕೊಟ್ಟಿದ್ದ ನ್ಯಾಯಾಧೀಶರಿಗೆ ಪ್ರಮುಖ ಹುದ್ದೆ ನೀಡಿದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...