Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...