Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...