Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...