Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...