Homeಮುಖಪುಟಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ಅತ್ಯಾಚಾರ ತಡೆಯಲು ಹೆಣ್ಣುಮಕ್ಕಳಲ್ಲಿ ‘ಸಂಸ್ಕಾರ’ ತುಂಬಬೇಕು: ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ಹತ್ರಾಸ್ ರೀತಿಯ ಘಟನೆಗಳು ಶಾಸನದಿಂದ ಅಥವಾ ತಲ್ವಾರ್‌ಗಳಿಂದ ನಿಲ್ಲವುದಿಲ್ಲ ಬದಲಿಗೆ ಉತ್ತಮ ಸಂಸ್ಕಾರದಿಂದ ಮಾತ್ರ ಕೊನೆಯಾಗಲು ಸಾಧ್ಯ.

- Advertisement -
- Advertisement -

“ಸರ್ಕಾರ ಕತ್ತಿ ಹಿಡಿದು ನಿಂತರೂ ಅತ್ಯಾಚಾರದ ಘಟನೆಗಳನ್ನು ತಡೆಯಲು ಸಾಧ್ಯವಿಲ್ಲ. ಬದಲಿಗೆ ಪೋಷಕರು ಹೆಣ್ಣು ಮಕ್ಕಳಲ್ಲಿ ಸಂಸ್ಕಾರ ಮತ್ತು ಉತ್ತಮ ಮೌಲ್ಯಗಳನ್ನು ತುಂಬಬೇಕು” – ಇದು ಹತ್ರಾಸ್ ಅತ್ಯಾಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಕೊಟ್ಟ ಹೇಳಿಕೆ. ದೇಶಾದ್ಯಂತ ಕೋಟ್ಯಾಂತರ ಜನರು ಹತ್ರಾಸ್ ಅತ್ಯಾಚಾರದ ಆರೋಪಿಗಳಿಗೆ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತಿದ್ದರೆ ಈ ಬಿಜೆಪಿ ಶಾಸಕ ಮಾತ್ರ ಹೆಣ್ಣುಮಕ್ಕಳಿಗೆ ಪಾಠ ಹೇಳುತ್ತಿದ್ದಾರೆ.

ಉತ್ತರ ಪ್ರದೇಶದ ಬಲಿಯಾ ಪ್ರಾಂತ್ಯದ ಬರಿಯಾ ಕ್ಷೇತ್ರವನ್ನು ಪ್ರತಿನಿಧಿಸುವ ಸುರೇಂದ್ರ ಸಿಂಗ್, “ಹತ್ರಾಸ್ ರೀತಿಯ ಘಟನೆಗಳು ಶಾಸನದಿಂದ ಅಥವಾ ತಲ್ವಾರ್‌ಗಳಿಂದ ನಿಲ್ಲವುದಿಲ್ಲ ಬದಲಿಗೆ ಉತ್ತಮ ಸಂಸ್ಕಾರದಿಂದ ಮಾತ್ರ ಕೊನೆಯಾಗಲು ಸಾಧ್ಯ. ಎಲ್ಲಾ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಉತ್ತರ ಸಂಸ್ಕಾರ ಮತ್ತು ಮೌಲ್ಯಗಳನ್ನು ತುಂಬಬೇಕು. ಸರ್ಕಾರ ಮತ್ತು ಉತ್ತಮ ಮೌಲ್ಯಗಳು ದೇಶವನ್ನು ಸುಂದರಗೊಳಿಸಲಿವೆ” ಎಂದು ಹೇಳಿದ್ದಾರೆ.

ನಾನು ಒಬ್ಬ ಶಿಕ್ಷಕನಾಗಿ ಹೇಳುತ್ತಿದ್ದೇನೆ. ಪ್ರಜೆಗಳಿಗೆ ರಕ್ಷಣೆ ನೀಡುವುದು ಹೇಗೆ ಸರ್ಕಾರದ ಜವಾಬ್ದಾರಿಯೋ ಹಾಗೆ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ತುಂಬುವುದು ಪೋಷಕರ ಜವಾಬ್ದಾರಿ. ಇವೆರೆಡರ ಸಹಯೋಗದಿಂದ ಮಾತ್ರ ಅತ್ಯಾಚಾರ ತಡೆಗಟ್ಟಲು ಸಾಧ್ಯ, ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಗ ಗಾಂಧಿ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, “ಅವರು ಏನೇ ಕೆಲಸ ಮಾಡಿದರೂ ಸಹ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ” ಎಂದು ಹೇಳಿದ್ದಾರೆ.

ಹತ್ರಾಸ್ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಉತ್ತರಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಂತೈಸಿದ್ದಾರೆ.. ಪ್ರಿಯಾಂಕಾ ಗಾಂಧಿ ಸಂತ್ರಸ್ತೆಯ ತಾಯಿಯನ್ನು ಅಪ್ಪಿಕೊಂಡಿರುವ ಮತ್ತು ತಂದೆಯೆದರು ರಾಹುಲ್ ಗಾಂಧಿ ತಲೆತಗ್ಗಿಸಿ ಕುಳಿತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ : ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...