Homeಕರ್ನಾಟಕಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

- Advertisement -
- Advertisement -

ಅಂತಾರಾಜ್ಯ ಜಲ ವಿವಾದಗಳ ಕುರಿತು ಚರ್ಚಿಸಲು ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಪಟ್ಟ ಸಚಿವ ಸಹೋದ್ಯೋಗಿಗಳು, ಕಾನೂನು ತಜ್ಞರು ಮತ್ತು ಹಿರಿಯ ವಕೀಲರೊಂದಿಗೆ ಅಂತಾರಾಜ್ಯ ಜಲ ವಿವಾದಗಳ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೃಷ್ಣಾ, ಕಾವೇರಿ ನದಿಗಳಿಗೆ ಸಂಬಂಧಿಸಿದ ವಿವಾದಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನದಿ ಜಲಾನಯನ ಪ್ರದೇಶಗಳು ಮತ್ತು ಮಹದಾಯಿ ಯೋಜನೆ ವಿಷಯಗಳು ನ್ಯಾಯಾಲಯದ ಮುಂದಿವೆ. ಜನವರಿ ಅಂತ್ಯದೊಳಗೆ ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಮತ್ತೊಂದು ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾನೂನು ಸಲಹೆಗಾರರು, ಜಲಸಂಪನ್ಮೂಲ ಸಚಿವರು ಮತ್ತು ಕಾನೂನು ಸಚಿವರೊಂದಿಗೆ ಕಾನೂನು ಹೋರಾಟದ ಪ್ರಗತಿಯ ಕುರಿತು ಚರ್ಚಿಸುತ್ತೇವೆ. ನಾವು ಹೇಗೆ ಮುಂದೆ ಸಾಗಬೇಕು, ರಾಜ್ಯದ ಹಿತದೃಷ್ಟಿಯಿಂದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತೀರ್ಮಾನಿಸುತ್ತೇವೆ ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ನಿರ್ಣಾಯಕ ಹಂತದಲ್ಲಿದ್ದು, ಕಾನೂನು ತಜ್ಞರು ಮತ್ತು ವಿರೋಧ ಪಕ್ಷದ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಬೇಕಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ನಮ್ಮ ನಿಲುವು ತಾಳುತ್ತೇವೆ ಎಂದಿದ್ದಾರೆ.

ಮೇಕೆದಾಟು ಯೋಜನೆಗೆ ಪ್ರತಿಯಾಗಿ ತಮಿಳುನಾಡು ಹೊಗೇನಕಲ್-2 ಯೋಜನೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಸರ್ಕಾರವಾಗಿ ನಾವು ಈ ಹಿಂದೆಯೂ ಇಂತಹ ಸವಾಲುಗಳನ್ನು ಎದುರಿಸಿದ್ದೇವೆ. ತಮಿಳುನಾಡಿನ ಹೊಗೇನಕಲ್-2 ಮತ್ತು ನದಿ ಜೋಡಣೆ ಯೋಜನೆಗಳನ್ನು ಕರ್ನಾಟಕ ಈಗಾಗಲೇ ವಿರೋಧಿಸಿದೆ. ನಾವು ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಿದ್ದೇವೆ. ಈ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿದ್ದೇವೆ. ನಾವು ಬಲವಾದ ಕಾನೂನು ಹೋರಾಟವನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ವಾಸ್ತವ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚೆಗೆ ಕಾಂಗ್ರೆಸ್ ಪಕ್ಷವು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿತ್ತು. ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ವಾಕ್ಸಮರ ನಡೆಸಿದ್ದವು.  ಪತ್ರಿಕೆಗಳಲ್ಲಿ ಜಾಹೀರಾತು ವಾರ್‌ ಕೂಡ ನಡೆದಿತ್ತು. ಈ ಕಾರಣಕ್ಕೆ ಮುಂದಿನ ಸರ್ವಪಕ್ಷ ಸಭೆ ಕುತೂಹಲ ಕೆರಳಿಸಿದೆ.


ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...