Homeಕರ್ನಾಟಕಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಬಾಕಿ ಉಳಿದಿದ್ದರೆ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್

ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕು, ಬಾಕಿ ಉಳಿದಿದ್ದರೆ ಮನೆ ಬೆಕ್ಕುಗಳಿಗೂ ಕೊಡಿಸಿ: ಯತ್ನಾಳ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವುದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಎಸ್‌ವೈ ಮತ್ತು ವಿಜಯೇಂದ್ರ ವಿರುದ್ದ ಯತ್ನಾಳ್ ಮತ್ತೊಮ್ಮೆ ಕಿಡಿಕಾರಿದ್ದಾರೆ.

ವಿಜಯಪುರದ ಆನಂದ ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ದಾನಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಮಾತನಾಡಿದ ಯತ್ನಾಳ್, “ಮೊದಲು ಮಾಜಿ ಮುಖ್ಯಮಂತ್ರಿ ಅಂತಿದ್ದರು. ಮುಖಭಂಗ ಆಗುತ್ತೆ ಅಂತ ಈಗ ನಿಕಟಪೂರ್ವ ಎಂದು ಹೇಳುತ್ತಿದ್ದಾರೆ. ಅಪ್ಪ, ಮಗ ನಾಟಕ ಮಾಡಬೇಡಿ ಅಂತ ನಾನು ಈ ಹಿಂದೆಯೇ ಹೇಳಿದ್ದೆ. ಎಲ್ಲಾ ಹುದ್ದೆ ತಮ್ಮ ಮಕ್ಕಳಿಗೆ ಬೇಕೆಂದು ನಾಟಕ ಮಾಡೋದು. ಯಾಕಂದ್ರೆ ಆ ಖುರ್ಚಿ ಬಿಡಬಾರದು ‌ಅಂತ. ಇನ್ನು ಏನಾದರೂ ಉಳಿದಿದ್ದರೆ ನಿಮ್ಮ ಮನೆಯ ಬೆಕ್ಕುಗಳಿಗೆ ಕೊಟ್ಟು ಬಿಡಿ ಎಂದು ಹೇಳಿದ್ದೇನೆ. ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಎಂದು ಮಾಡಿಕೊಳ್ಳಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನನ್ನನ್ನು ಹೆದರಿಸಬೇಕು ಎಂದು ಬ್ಲ್ಯಾಕ್​ಮೇಲ್ ಮಾಡ್ತಾರೆ. ನನ್ನನ್ನು ಬ್ಲ್ಯಾಕ್​ಮೇಲ್​ ಮಾಡಲು ಬಂದ್ರೆ ನಿಮ್ಮದು ನನ್ನ ಬಳಿ ಇದೆ” ಎಂದು ಯತ್ನಾಳ್ ಎಚ್ಚರಿಕೆ ಕೊಟ್ಟಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ಬಳಗದ ವಿರುದ್ಧ ವಾಗ್ದಾಳಿ ನಡೆಸಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ, “ನಾನು ವಾಜಪೇಯಿ ಸರ್ಕಾರದಲ್ಲಿ ಮಂತ್ರಿಯಾಗಿದ್ದವ. ಇವರೆಲ್ಲ ಬರುವ ಮುಂಚೆ ನಾನು ಕೇಂದ್ರ ಸಚಿವನಾಗಿದ್ದೆ. ಆದರೆ, ಈಗ ನನ್ನನ್ನು ಸರಿಯಾಗಿ ಪರಿಗಣಿಸುತ್ತಿಲ್ಲ” ಎಂಬ ದಾಟಿಯಲ್ಲಿ ಆಗಾಗ ಅಸಮಾಧಾನ ಹೊರ ಹಾಕುತ್ತಿದ್ದರು.

“ಯಡಿಯೂರಪ್ಪ ಸಿಎಂ ಕುರ್ಚಿಯಿಂದ ಕೆಳಗಿಳಿಯುತ್ತಾರೆ. ಮುಖ್ಯಮಂತ್ರಿ ಬದಲಾಗುತ್ತಾರೆ” ಎಂದು ಯತ್ನಾಳ್ ಆಗಾಗ ಹೇಳುತ್ತಿದ್ದರು. ಅದರಂತೆ, ಅವಧಿಗೂ ಮುನ್ನವೇ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಹೈಕಮಾಂಡ್ ಕೆಳಗಿಳಿಸಿತು. ಬಳಿಕ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಬದಿಗಿರುಸುತ್ತಾ ಹೋಯಿತು. ಆದರೆ, ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಯಡಿಯೂರಪ್ಪ ಇಲ್ಲದೆ ಏನೂ ನಡೆಯದು ಎಂದು ಅರಿತು ಅವರ ಮಗನಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದೆ. ಈ ಮೂಲಕ ಲೋಕಸಭೆ ಚುನಾವಣೆ ಗೆಲ್ಲುವ ಪ್ಲಾನ್ ಮಾಡಿದೆ.

ಈ ಬೆಳವಣಿಗೆಯಿಂದ ಯತ್ನಾಳ್ ನಿಗಿ ನಿಗಿ ಕೆಂಡದಂತಾಗಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷ ಆದ ಬೆನ್ನಲ್ಲೇ ಕಾಲಿಗೆ ಚಕ್ರ ಕಟ್ಟಿಕೊಂಡ ರೀತಿ ಓಡಾಡಿ ಅಸಮಾಧಾನಿತ ನಾಯಕರನ್ನು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದರು. ಅವರು ಯತ್ನಾಳ್ ಮನೆಗೂ ಹೋಗುವವರಿದ್ದರು. ಆದರೆ, ‘ಯತ್ನಾಳ್ ನನ್ನ ಮನೆಗೆ ಬರಬೇಡ’ ಎಂದು ನೇರವಾಗಿ ಹೇಳಿದ್ದರು.

ಇದನ್ನೂ ಓದಿ : 10 ವರ್ಷಗಳಲ್ಲಿ ಶೇ.50 ಮಹಿಳಾ ಮುಖ್ಯಮಂತ್ರಿ ಕಾಂಗ್ರೆಸ್ ಗುರಿ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...