Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...