Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...