Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...