Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...