Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...