Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...