Homeಕರ್ನಾಟಕರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ರದ್ದುಪಡಿಸಿದ ರಾಜ್ಯ ಸರ್ಕಾರ: ರಂಗಕರ್ಮಿಗಳ ಆಕ್ರೋಶ

- Advertisement -
- Advertisement -

ಸರ್ಕಾರ ದಿಢೀರನೇ ರಂಗಾಯಣ ನಿರ್ದೇಶಕರ ನೇಮಕಾತಿಯನ್ನು ಮತ್ತು ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರುಗಳ ನಾಮನಿರ್ದೇಶನವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳೇ ನಿರ್ದೇಶಕರನ್ನಾಗಿ ನೇಮಕಗೊಂಡಿರುತ್ತಾರೆ. ಮೈಸೂರು ರಂಗಾಯಣದ ನಿರ್ದೇಶಕರರಾದ ಭಾಗಿರಥಿ ಬಾಯಿ ಕದಂ, ಶಿವಮೊಗ್ಗದ ನಿರ್ದೇಶಕರಾಗಿ ಎಂ.ಗಣೇಶ್, ಕಲ್ಬುರ್ಗಿ ರಂಗಾಯಣದ ಮಹೇಶ್ ವಿ.ಪಾಟೀಲ್, ಧಾರವಾಡದ ನಿರ್ಧೇಕರಾದ ಪ್ರಮೋದ್ ಶಿಗ್ಗಾಂವ್ ಹಾಗೂ ರಂಗಸಮಾಜದ ಸಾರ್ವತ್ರಿಕ ಮಂಡಳಿ ಸದಸ್ಯರಾದ ಶ್ರೀಪಾದ್ ಭಟ್, ಗೋಪಾಲಕೃಷ್ಣ ನಾಯರಿ, ಮಲ್ಲಿಕಾರ್ಜುನ ಕಡಕೋಳ, ವಿಶ್ವೇಶ್ವರಿ ಹಿರೇಮಠ, ಸಹನಾ ಪಿಂಜಾರ್, ಎಲ್.ಕೃಷ್ಣಪ್ಪ. ಎಂ.ಚಂದ್ರಾಕಾಂತರವರ ನೇಮಕಾತಿಯನ್ನು ರದ್ದುಗೊಳಿಸಿ, ಪದಮುಕ್ತಗೊಳಿಸಲಾಗಿದೆ.

“ಇದೀಗ ಬಂದಿರುವ ಸುದ್ದಿಯಂತೆ ರಾಜ್ಯ ಸರ್ಕಾರ ನಾಲ್ಕೂ ರಂಗಾಯಣದ ನಿರ್ದೇಶಕರ ಮತ್ತು ರಂಗ ಸಮಾಜದ ಸದಸ್ಯರ ಅಧಿಕಾರ ಆವಧಿಯನ್ನು ರದ್ದು ಪಡಿಸಿ, ಪದಮುಕ್ತಗೊಳಿಸಲು ಆದೇಶಿಸಿದೆ. ಇದು ಸರ್ಕಾರಕ್ಕೆ ಗೌರವ ತರುವ ಆದೇಶ ಅಲ್ಲ. ಆ ನಿರ್ದೇಶಕರು ಮತ್ತು ಸದಸ್ಯರು ಹಾಕಿಕೊಂಡ ಯೋಜನೆ ಹಾಗೂ ಕನಸುಗಳನ್ನು ಹೊಸಕಿ ಹಾಕುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ. ಅವರ ಕಾಲಾವಧಿಯನ್ನು ಮುಂದುವರಿಸಿ. ನನಗೆ ಗೊತ್ತಿರುವಂತೆ ಶ್ರೀ ಡಾ. ಎಂ ಗಣೇಶ್, ಶ್ರೀ ಪ್ರಮೋದ್ ಶಿಗ್ಗಾಂವ್, ಶ್ರೀಮತಿ ಭಾಗೀರಥಿ ಬಾಯಿ ಕದಂ ಎಲ್ಲರೂ ಹೊಸ ತಲೆಮಾರಿನ ನಿರ್ದೇಶಕರು ಬಹಳ ಜತನದಿಂದ ಕೆಲಸ ಮಾಡುತ್ತಿದ್ದಾರೆ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದಾರೆ ಅದನ್ನು ಸಂಪೂರ್ಣವಾಗಿ ಮುಗಿಸಲು ಬಿಡಿ”. ಎಂದು ರಂಗ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ಇದೊಂದು ಅನಿಷ್ಟ ಅನಾರೋಗ್ಯಕರ ಪದ್ಧತಿ. ಇವರು ಹೀಗೆ ಮಾಡುತ್ತಿದ್ದಾರೆಂದು ಅವರು, ಅವರು ಹಾಗೆ ಮಾಡುತ್ತಿದ್ದಾರೆಂದು ಇವರು ಈ ರೀತಿ ಮಾಡುವುದು ಸರಿಯಲ್ಲ. ರಂಗಾಯಣದ ನಿರ್ದೇಶಕನೆಂದರೆ ಆತ/ಆಕೆ ಓಬ್ಬ ಕ್ರಿಯಾಶೀಲ ವ್ಯಕ್ತಿ. ಅವರು ಹಲವಾರು ರಂಗಕನಸನ್ನ ಈಡೇರಿಸಲು ರಂಗಾಯಣದ ಜವಾಬ್ದಾರಿ ಹೊತ್ತಿರುತ್ತಾರೆ. ಶಿವಮೊಗ್ಗ, ಧಾರವಾಡ, ಮೈಸೂರಿನ ರಂಗಾಯಣದ ನಿರ್ದೇಶಕರು ಸಮರ್ಥವಾಗಿ ಕೆಲಸಮಾಡುತ್ತಿದ್ದಾರೆ. ಅವರನ್ನು ಅವರ ಅವಧಿಯವರೆಗೆ ಮುಂದುವರೆಯಲು ಬಿಟ್ಟು ಸರ್ಕಾರ ಉದಾತ್ತತೆ ತೋರಿಸಬಹುದಾಗಿತ್ತು. ಒಂದು ಅನಿಷ್ಟ ಪದ್ಧತಿಗೆ ಇತೀಶ್ರೀ ಹಾಡಬಹುದಾಗಿತ್ತು. ಈಗಲಾದರೂ ಸರಿ ಮತ್ತೂಮ್ಮೆ ಸರಕಾರ ತನ್ನ ಈ ವಿವೇಚನೆ ಇಲ್ಲದ ನಿರ್ಧಾರವನ್ನು ಮರುಪರಿಶೀಲನೆ ಮಾಡಿಕೊಳ್ಳಬೇಕು. ರಂಗಾಯಣ ಯಾವುದೋ ಒಂದು ನಿಗಮ ಮಂಡಳಿಯಂತಲ್ಲ” ಎಂದು ಈ ಹಿಂದೆ ಧಾರವಾಡ ರಂಗಾಯಣದ ರಂಗನಿರ್ದೇಶಕರಾಗಿದ್ದ ಪ್ರಕಾಶ್ ಗರುಡರವರು ಹೇಳಿದ್ದಾರೆ

ದೇಶದ ರಂಗಭೂಮಿಯ ಇತಿಹಾಸದಲ್ಲಿ ಕನ್ನಡ ರಂಗಭೂಮಿ ತನ್ನದೇ ಆದ ಸ್ಥಾನ ಪಡೆಯಲು ಕಾರಣ ಸಾಕಷ್ಟು ಸ್ವತಂತ್ರ ರಂಗ ಪ್ರಯೋಗಗಳು. ಮತ್ತು ವ್ಯವಸ್ಥೆಯ ಹುಳಕುಗಳನ್ನು ಕನ್ನಡಿಯಂತೆ ರಂಗದ ಮೇಲೆ ತೋರಿಸಿದ ಸಾಕಷ್ಟು ಹಿರಿಯ ರಂಗಕರ್ಮಿಗಳ ಶ್ರಮದಿಂದ. ಕನ್ನಡ ರಂಗಭೂಮಿಯ ಚರಿಯತ್ರೆಯಲ್ಲಿ ಹಲವು ರಂಗ ಸಂಸ್ಥೆಗಳು ಕಲೆಗಾಗಿ ದುಡಿದಿವೆ. ಇಂತಹ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ಸರ್ಕಾರಿ ಸಂಸ್ಥೆಯಾದ ಕನ್ನಡ ಸಂಸ್ಕೃತಿ ಇಲಾಖೆಯ ಮೇಲಿದೆ. ಆದರೆ ಇಲಾಖೆ ಇತ್ತೀಚಿಗೆ ಕಲೆಯ ಆಳ ಅಗಲ ತಿಳಿಯದ ಅಧಿಕಾರಿಗಳು ಮತ್ತು ರಾಜಕಾರಣಿಗಳ ಕೈಗೆ ಸಿಕ್ಕು ಕೇವಲ ಕಲೆಗಾಗಿ ಕಲೆ ಎನ್ನುವಂತೆ ಆಗಿ ಹೋಗಿದೆ.

ಇತ್ತಿಚಿಗೆ ಬಂದ ಬಿ.ಎಸ್.ಯಡಿಯೂರಪ್ಪನವರ ಹೊಸ ಸರ್ಕಾರ ಕಳೆದ ಸರ್ಕಾರ ನೇಮಕ ಮಾಡಿದ್ದ ರಂಗಾಯಣ ನಿರ್ದೇಶಕರು ಮತ್ತು ರಂಗ ಸಮಾಜದ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಗಾಳಿ ಸೋಕಿದೆ. ರಂಗಾಯಣ ಮತ್ತು ರಂಗಭೂಮಿಯ ಚಟುವಟಿಕೆಗಳನ್ನು ಈ ರೀತಿಯಾಗಿ ರಾಜಕೀಯವಾಗಿ ನೋಡುವುದು ಶುದ್ಧ ತಪ್ಪು. ಏಕೆಂದರೆ ರಂಗಾಯಣದ ರಂಗನಿರ್ದೇಶಕರು ಮತ್ತು ರಂಗಸಮಾಜ ತಮಗೆ ನೀಡಿದ ಸಮಯದಲ್ಲಿ ಒಂದಷ್ಟು ರಂಗ ಚಟುವಟಿಕೆಗಳ ಯೋಜನೆಗಳನ್ನು ಹಾಕಿಕೊಂಡಿರುತ್ತಾರೆ. ಆದರೆ ಈ ರೀತಿ ದಿಢೀರನೇ ಅವರನ್ನು ಮನೆಗೆ ಕಳುಹಿಸುವುದು ರಂಗಭೂಮಿಗೆ ಮಾಡಿದ ಅವಮಾನವಾಗಿದೆ. ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಎಲ್ಲಾ ರಾಜಕೀಯ ಸಂಸ್ಥೆಗಳಂತೆ ನೋಡದೆ, ವಿಶೇಷವಾದ ಸ್ವತಂತ್ರ ಸಂಸ್ಥೆಗಳಾಗಿಯೇ ನೋಡಬೇಕಿದೆ.

ನಮ್ಮ ಕರ್ನಾಟಕದಲ್ಲಿ ಒಂದಷ್ಟು ಸ್ಫಷ್ಟ ಸಾಂಸ್ಕೃತಿಕ ನೀತಿಗಳನ್ನು ರೂಪಿಸಿಕೊಳ್ಳುವ ಮೂಲಕ ಇಂತಹ ಅವಘಡಗಳನ್ನು ತಪ್ಪಿಸಬೇಕಿದೆ. ಈಗ ಬಲಪಂಥೀಯ ಸಿದ್ದಾಂತವನ್ನು ಪ್ರತಿಪಾದಿಸುವ ಪಕ್ಷ ಸರ್ಕಾರವನ್ನು ರಚಿಸಿರುವುದರಿಂದ ಅದು ಮತ್ತೆ ನೇಮಕ ಮಾಡುವ ರಂಗನಿರ್ದೇಶಕರು ಅದೇ ರೀತಿಯ ಮನಸ್ಥಿತಿಯವರಾದರೆ ರಂಗಭೂಮಿಯ ವಾತಾವರಣವೇ ಕಲುಷಿತಗೊಳ್ಳವ ಅವಕಾಶ ಹೆಚ್ಚಾಗಿಯೇ ಇದೆ ಎಂದು ಯುವ ರಂಗಕರ್ಮಿ ಅನಿಲ್ ಕುಮಾರ್ ಚಿಕ್ಕದಾಳವಟ್ಟ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...