Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

ಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

- Advertisement -
- Advertisement -

ಒಲಿಂಪಿಕ್ ಶುರು ಆಗಲಿಕ್ಕೆ ಬಂದವು. ಅದಕ್ಕ ಸಂಬಂಧಪಟ್ಟ ಒಂದು ಕತಿ ಕೇಳೋಣ. ಒಂದಾನೊಂದು ಕಾಲದಾಗ, ಏಟೊಂದು ಮುದ ಇದ್ದ ಕಾಲದಾಗ ಗ್ರೀಕ್ ದೇಶದೊಳಗ ಒಬ್ಬವ ರಾಜಾ ಇದ್ದ. ಅವನ ಹೆಸರು ಪೊಸಯಿಡೋನ. ಆತ ಸಮುದ್ರ, ಭೂಕಂಪನ ಹಾಗೂ ಕುದುರೆಗಳ ದೇವರು. ಅವನ ಕೈಯಾಗ ಒಂದು ತ್ರಿಶೂಲ ಇತ್ತು. ತನ್ನ ತ್ರಿಶೂಲದಿಂದ ಭೂಮಿಮ್ಯಾಲೆ ಗೆರೆ ಹೊಡದು ನೀರಿನ ಝರಿಗಳನ್ನು ಆತ ಸೃಷ್ಟಿ ಮಾಡುತ್ತಿದ್ದ. ಇಡೀ ವಿಶ್ವವನ್ನೇ ಅಲುಗಾಡಿಸಬಲ್ಲ ಶಕ್ತಿ ಉಳ್ಳವನು ಅಂತ ಅವನಿಗೆ ‘ಭೂಕಂಪನಾಧೀಶ’ ಅಂತ ಹೆಸರು ಇತ್ತು. ಆತ ಹುಚ್ಚು ಕುದುರೆಗಳನ್ನು ಹತೋಟಿಗೆ ತರುವ ಕುಶಲತೆ ಇದ್ದವನು ಅನ್ನುವುದು ಅವನ ಹೆಗ್ಗಳಿಕೆ. ಎಲ್ಲಕ್ಕಿಂತ ಮುಖ್ಯವಾಗಿ ಆತ ಒಲಿಂಪಿಕ್ ಆಟಗಾರ.

ಅಣ್ಣಾ ತಮ್ಮಂದಿರ ನಡುವೆ ಆಸ್ತಿ ಬಟವಾಡೆ ಆದ ನಂತರ ತನ್ನ ಪಾಲಿಗೆ ಬಂದ ಸಮುದ್ರವನ್ನ ಇಟಗೊಂಡು ತಮ್ಮ ಪೊಸಯಿಡೋನ ತಣ್ಣಗೆ ಕೂತವನು. ದೇವ ಸಹಜ ಆಸೆ-ಆಕಾಂಕ್ಷೆಗಳಿಂದ ಬಳಲಿದವನು. ಒಂದುನೂರಕ್ಕಿಂತ ಹೆಚ್ಚು ಪತ್ನಿ-ಉಪ ಪತ್ನಿಯರ ಕಟ್ಟಿಕೊಂಡು ಸುಮಾರು ಮೂರುನೂರು ಜನ ಮಕ್ಕಳಿಗೆ ಜನ್ಮ ಕೊಟ್ಟವನು.

ಅವನ ಹೆಂಡತಿ ಮೆಡುಸ್ಸಾ. ಅಕಿನ್ನ ಯಾರಾದರೂ ಕಣ್ಣಿನೊಳಗ ಕಣ್ಣು ಇಟ್ಟು ನೋಡಿದರ ಅವರು ಕಲ್ಲಾಗಿಬಿಡತಿದ್ದರು. ಅಕಿ ತಲಿಮ್ಯಾಲೆ ಕೂದಲು ಇರಲಿಲ್ಲ. ಅದರ ಬದಲಿಗೆ ಸಣ್ಣ ಸಣ್ಣ ಹಾವು ಇದ್ದವು. ಆ ಹಾವುಗಳನ್ನ ಅಕಿ ತನ್ನ ಸೇವಕರ ತರಹ ಉಪಯೋಗ ಮಾಡತಿದ್ದಳು. ಅಕಿಗೆ ಅಣಿಮಾ-ಗರಿಮಾ ಶಕ್ತಿಗಳು ಸಿದ್ಧಿಸಿಬಿಟ್ಟಿದ್ದವು. ತಾನು ಬಯಸಿದಲ್ಲಿ ಪ್ರವಾಸ ಮಾಡುವ ಶಕ್ತಿ ಇತ್ತು.

ಕೊನೆಗೆ ಅವಳ ಸಂಹಾರ ಮಾಡಿದವ ಯಾರು ಅಂದರ ಗ್ರೀಕ್ ದೇವತೆ ಪರ್ಸಿಯಸ್. ಆತ ತನ್ನ ಕಣ್ಣು ಕಟ್ಟಿಕೊಂಡು ಅವಳ ರುಂಡ ಕತ್ತರಿಸಿಬಿಟ್ಟ. ಆ ರುಂಡವನ್ನು ತನ್ನ ಈಟಿಗೆ ಚುಚ್ಚಿಕೊಂಡು ತಿರುಗಾಡುತ್ತಿದ್ದ. ಮೆಡುಸ್ಸಾ ಸತ್ತ ಮೇಲೆ ಸಹಿತ ಅವಳ ಶಾಪ ಕೊಡುವ ಶಕ್ತಿ ಹೋಗಲಿಲ್ಲ. ಇದನ್ನು ಅರಿತ ಪರ್ಸಿಯಸ್ ಅವಳ ತಲೆಯನ್ನ ಒಂದು ಆಯುಧದ ರೀತಿ ಬಳಸಿ ತನ್ನ ವೈರಿಗಳನ್ನು ಕೊಂದ.

ಇಷ್ಟೆಲ್ಲಾ ಆತಲ್ಲಾ, ಈಗ ನೋಡ್ರಿ. ಇಲ್ಲೇ ಐತಿ ಮಜಾ. ಮೆಡುಸ್ಸಾನ ಹತ್ಯೆ ಮಾಡುವಾಗ ಪರ್ಸಿಯಸ್ ಒಂದು ಚಮತ್ಕಾರಿ ವಾಹನ ಬಳಸಿದ್ದ. ಅದು ಯಾವುದು ಅಂದರ ಆಕಾಶದಲ್ಲಿ ಹಾರಾಡಬಲ್ಲ ಬಿಳಿಯ ಕುದುರೆ. ತನ್ನ ಎರಡೂ ಕಡೆಗಳಲ್ಲಿ ಇದ್ದ ರೆಕ್ಕೆಗಳನ್ನು ಬಳಸಿ ಅದು ಹಾರಬಹುದಿತ್ತು. ಮೂರುಲೋಕ ಸಂಚಾರ ಮಾಡಬಹುದಿತ್ತು.

ಆ ಶ್ವೇತಾಶ್ವದ ಹೆಸರು ಪೆಗಸಸ್. ಈ ದೈವಿ ಕುದುರೆಯ ತಾಯಿ ತಂದೆಗಳು ಯಾರು ಅಂದರ ಮೆಡುಸ್ಸಾ ಮತ್ತು ಪೊಸಯಿಡೋನ. ತನ್ನ ತಾಯಿಯ ಕೊಲೆಗಾರ ತನ್ನನ್ನು ವಾಹನವನ್ನಾಗಿ ಬಳಸಲಿಕ್ಕೆ ಹತ್ತಿಬಿಟ್ಟಾನು ಅಂತ ಅದಕ್ಕ ಗೊತ್ತಿತ್ತೋ ಇಲ್ಲೋ, ಒಟ್ಟಿನಲ್ಲಿ ತನ್ನ ಹೆತ್ತ ತಾಯಿಯ ಕೊಲೆಗೆ ಅದು ಭಾಗಿ ಆತು. ಹಿಂಗ ಮಾತೃ ಹತ್ಯೆ ಪಾಪದ ಲೇಪ ಅಂಟಿದ ಈ ಕುದುರೆ ಒಂದು ದಿನ ತನ್ನ ಮೇಲೆ ಏರಿದ ಸವಾರನನ್ನು ಕೆಳಗೆ ಕೆಡವಿ ಕೊಂದುಬಿಟ್ಟಿತು.

ಈ ಪೆಗಸಸ್ ಬುದ್ಧಿವಂತರ ದೇಶ ಅಂತ ಹೆಸರು ಪಡೆದ ಇಸ್ರೇಲ್‌ನ ಅತಿ ಬುದ್ಧಿವಂತರು ಸೃಷ್ಟಿಸಿದ ತಂತ್ರಾಂಶ. ಇದನ್ನು ಎನ್‌ಎಸ್‌ಒ ಅನ್ನೋ ಕಂಪನಿಯವರು ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟ ಮಾಡತಾರೆ. ಅದನ್ನು ಭಯೋತ್ಪಾದಕರು, ರಾಷ್ಟ್ರ ವಿರೋಧಿ ಶಕ್ತಿಗಳು ಮುಂತಾದವರ ವಿರುದ್ಧ ಗೂಢಚಾರಿಕೆ ಮಾಡಲಿಕ್ಕೆ ಉಪಯೋಗ ಮಾಡತಾರ.

ಭಾರತದ ಘನ ಸರಕಾರ ತೆರಿಗೆದಾರರು ಬೆವರು-ರಕ್ತ ಸುರಿಸಿ ಕಟ್ಟಿದ ಸುಂಕದ ಹಣವನ್ನು ತೊಗೊಂಡು ಈ ಬಿಳಿ ಕುದುರೆಯ ಬಲಕ್ಕೆ ಕಟ್ಟಿಬಿಟ್ಟೆದ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಇರೋ ದೇಶ ಸರ್ವಾಧಿಕಾರಿ ದೇಶಗಳು ಮತ್ತು ಅರೆ ಪ್ರಜಾಪ್ರಭುತ್ವವಾದಿ ದೇಶಗಳ ಸಾಲಿನಲ್ಲಿ ಸೇರಿಕೊಂಡುಬಿಟ್ಟದ.

ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ, ಮುಂತಾದ ದೇಶಗಳ ಜೊತೆಗೆ ಸ್ಪರ್ಧೆಗೆ ಬಿದ್ದಂಗ ಮಾಡಿ ಎರಡು ವರ್ಷದಲ್ಲಿ ಕನಿಷ್ಟ 600 ಕೋಟಿ ರೂಪಾಯಿ ಲಪಟಾಯಿಸಿಬಿಟ್ಟದ. ಸುಮಾರು ಮೂರು ನೂರು ಜನರ ಮ್ಯಾಲೆ ಎರಡು ವರ್ಷಗಟ್ಟಲೆ ಗೂಢಚಾರಿಕೆ ಮಾಡಿ ಅವರ ಖಾಸಗಿ ಮಾಹಿತಿ ಎಲ್ಲ ಸಂಗ್ರಹ ಮಾಡೆದ.

ಬರೆ ಇಷ್ಟ ಇದ್ದರ ಇದು ಸುದ್ದಿ ಆಗ್ತಾ ಇರಲಿಲ್ಲ. ಈ ಬಿಳಿ ರೆಕ್ಕೆಯ ಕುದುರೆಯಿಂದ ಯಾರದಾದರೂ ಫೋನುಗಳನ್ನು ಅದರ ಮಾಲೀಕರಿಗೆ ಗೊತ್ತಿಲ್ಲದೆ ಚಾಲೂ-ಬಂದ್ ಮಾಡಬಹುದು. ಅವರ ಫೋನು ಕ್ಯಾಮರಾದಿಂದ ಫೋಟೋ ತೆಗಿಬಹುದು, ವಿಡಿಯೋ ತೆಗಿಬಹುದು. ಅವರ ಮೆಸೇಜು, ವಾಟ್ಸಪ್ಪು, ಈಮೇಲೂ, ಇತ್ಯಾದಿಗಳ ಕಾಪಿ ಮಾಡಬಹುದು. ಅವರ ಬ್ಯಾಂಕ್ ವಹಿವಾಟಿನ ಮಾಹಿತಿ ಪಡೆಯಬಹುದು. ಅವರ ಆರೋಗ್ಯದ ಎಲ್ಲ ಮಾಹಿತಿ-ಉದಾಹರಣೆಗೆ ಅವರಿಗೆ ಇರುವ ಕಾಯಿಲೆ, ಅವರು ಆಪರೇಷನ್ ಮಾಡಿಸಿಕೊಂಡ ಮಾಹಿತಿ, ತೊಗೊಳ್ಳುವ ಔಷಧಿ, ಅವರ ವೈದ್ಯರ ನಂಬರ್ ಎಲ್ಲ ಸಂಗ್ರಹ ಮಾಡಬಹುದು.

ಇನ್ನೊಂದು ಖತರನಾಕ ವಿಚಾರ ಏನು ಅಂದರ ಎಲ್ಲೋ ದೂರ ಇಸ್ರೇಲ್-ಅಮೆರಿಕ ದೆಹಲಿಯೊಳಗ ಕುಳಿತುಕೊಂಡ ಇಂಜಿನಿಯರ್‌ಗಳು ಅಥವಾ ಪೊಲೀಸರು ನಿಮ್ಮ ಫೋನಿನ ಒಳಗ ನಿಮ್ಮನ್ನು ಕಾನೂನಿನ ಕುಣಿಕೆಗೆ ಸಿಕ್ಕಿಸುವಂತಹ ಮಾಹಿತಿ ಕಳಿಸಬಹುದು. ಅದು ನಿಮಗೆ ಗೊತ್ತಿರಲಾರದೆ ನಿಮ್ಮ ಫೋನಿನ ಒಳಗೆ ಬಂದು ಕೂತುಬಿಡುತ್ತದೆ. ನೀವು ಫೋನು ಬದಲು ಮಾಡಿದರೂ ಹೋಗೋದಿಲ್ಲ.

ನೀವು ನಿಮ್ಮ ಸ್ನೇಹಿತರಿಗೆ “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಮಂಡಕ್ಕಿ ಮಿರ್ಚಿ ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಹಾಲು, ಎರಡು ನೂರು ಗ್ರಾಂ ಚಹಾಪುಡಿ ತೊಗೊಂಡು ಬರ್ರಿ” ಅಂತ ಸಂದೇಶ ಕಳಿಸಿದರಿ ಅಂತ ತಿಳಕೋರಿ. ನಿಮ್ಮ ವಿರೋಧಿಗಳು “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಟೈಮ್ ಬಾಂಬ್ ತಯಾರು ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಸೋಡಿಯಂ ನೈಟ್ರೇಟ್ ದ್ರಾವಣ, ಎರಡು ನೂರು ಗ್ರಾ ಆರ್‌ಡಿ ಎಕ್ಸ್ ತೊಗೊಂಡು ಬರ್ರಿ” ಅಂತ ಬದಲು ಮಾಡಬಹುದು.

ಅದರ ಆಧಾರದ ಮೇಲೆ ನಿಮ್ಮನ್ನ ದೇಶದ್ರೋಹದ ಕಾನೂನು ಅಡಿಯಲ್ಲಿ ಒದ್ದು ಒಳಗಹಾಕಬಹುದು.

ಹಿಂದಿ ಪಿಕ್ಚರ್‌ದಾಗ ಪೊಲೀಸ್ ಇನ್ಸ್ಪೆಕ್ಟರ್ ಅಮರೀಷ ಪುರಿ ’ಅಬೇ ಸಾಲೇ, ನಿನ್ನ ಮನಿಯೊಳಗ ಗಾಂಜಾ ಪೊಟ್ಟಣ ಇಟ್ಟು ಬಿಡತೆನಿ. ನಿನ್ನನ್ನ ಜೈಲಿಗೆ ಹಾಕತೆನಿ’ ಅಂತ ಧಮಕಿ ಕೊಡತನಲ್ಲ, ಅದಕ್ಕೂ ಇದಕ್ಕೂ ಏನು ವ್ಯತ್ಯಾಸ ಇಲ್ಲ. ಹಿಂಗ ಆಗಬಹುದು ಅಂತ ಅಲ್ಲ. ಆಗಿ ಹೊಗೇದ.

“ಇದೇನು ಹೊಸದಲ್ಲ. ಹಿಂದಿನ ಎಲ್ಲ ಸರಕಾರಗಳು ಗೂಢಚಾರಿಕೆ ಮಾಡಿದವರೇ” ಅಂತ ಹೇಳಿ ನಮ್ಮ ಡೋಂಟ್ ಕೇರ್ ಕುಮಾರಣ್ಣ ಅವರು ಹೇಳಿಕೆ ಕೊಟ್ಟಾರ. ಹಿಂದಿನವರು ಗೂಢಚಾರಿಕೆ ಮಾಡಿರಬಹುದು. ಅದರ ಅಮರೀಷ ಪುರಿ ತಂತ್ರ ಉಪಯೋಗಿಸಿ ನಿಮ್ಮ ಫೋನ್‌ದಾಗ ಬಾಂಬ್ ತಯಾರಿಸುವ ಸಂದೇಶ ಕಳಿಸಿಲ್ಲ. ಹಂಗ ಮಾಡಲಿಕ್ಕೆ ಆವಾಗ ತಂತ್ರಜ್ಞಾನನೂ ಇರಲಿಲ್ಲ, ಅಂತ ತಿಳಿರಿ.

ಈಗ ಸದ್ಯ ಟಿವಿ ಎರಡು ದೊಡ್ಡ ಸುದ್ದಿ ತೋರಸಲಿಕ್ಕೆ ಹತ್ತಿದಾವು. ಒಂದು ಈ ಗ್ರೀಕ್ ಪುರಾಣದ ಕತಿ. ಇನ್ನೊಂದು ನಮ್ಮ ಕುಡ್ಲದ ಹುಡುಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಪುರಾಣದ ಕತಿ. ಸುಮ್ಮನೇ ಕುಂದರಲಾರದೆ ಕುಂದ್ರಾ ಅವರು ತಯಾರಿಸಿದರು ಎನ್ನಲಾದ ಅಶ್ಲೀಲ ಚಿತ್ರದ ಬಿಸಿ ಬಿಸಿ ಸುದ್ದಿ. ನೀವು ಯಾವುದನ್ನು ನೋಡತಿರಿ ಅನ್ನೋದರ ಮ್ಯಾಲೆ ನಿಮ್ಮ ಮತ್ತು ಈ ದೇಶದ ಭವಿಷ್ಯ ನಿರ್ಭರ ಆಗತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...