Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

ಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

- Advertisement -
- Advertisement -

ಒಲಿಂಪಿಕ್ ಶುರು ಆಗಲಿಕ್ಕೆ ಬಂದವು. ಅದಕ್ಕ ಸಂಬಂಧಪಟ್ಟ ಒಂದು ಕತಿ ಕೇಳೋಣ. ಒಂದಾನೊಂದು ಕಾಲದಾಗ, ಏಟೊಂದು ಮುದ ಇದ್ದ ಕಾಲದಾಗ ಗ್ರೀಕ್ ದೇಶದೊಳಗ ಒಬ್ಬವ ರಾಜಾ ಇದ್ದ. ಅವನ ಹೆಸರು ಪೊಸಯಿಡೋನ. ಆತ ಸಮುದ್ರ, ಭೂಕಂಪನ ಹಾಗೂ ಕುದುರೆಗಳ ದೇವರು. ಅವನ ಕೈಯಾಗ ಒಂದು ತ್ರಿಶೂಲ ಇತ್ತು. ತನ್ನ ತ್ರಿಶೂಲದಿಂದ ಭೂಮಿಮ್ಯಾಲೆ ಗೆರೆ ಹೊಡದು ನೀರಿನ ಝರಿಗಳನ್ನು ಆತ ಸೃಷ್ಟಿ ಮಾಡುತ್ತಿದ್ದ. ಇಡೀ ವಿಶ್ವವನ್ನೇ ಅಲುಗಾಡಿಸಬಲ್ಲ ಶಕ್ತಿ ಉಳ್ಳವನು ಅಂತ ಅವನಿಗೆ ‘ಭೂಕಂಪನಾಧೀಶ’ ಅಂತ ಹೆಸರು ಇತ್ತು. ಆತ ಹುಚ್ಚು ಕುದುರೆಗಳನ್ನು ಹತೋಟಿಗೆ ತರುವ ಕುಶಲತೆ ಇದ್ದವನು ಅನ್ನುವುದು ಅವನ ಹೆಗ್ಗಳಿಕೆ. ಎಲ್ಲಕ್ಕಿಂತ ಮುಖ್ಯವಾಗಿ ಆತ ಒಲಿಂಪಿಕ್ ಆಟಗಾರ.

ಅಣ್ಣಾ ತಮ್ಮಂದಿರ ನಡುವೆ ಆಸ್ತಿ ಬಟವಾಡೆ ಆದ ನಂತರ ತನ್ನ ಪಾಲಿಗೆ ಬಂದ ಸಮುದ್ರವನ್ನ ಇಟಗೊಂಡು ತಮ್ಮ ಪೊಸಯಿಡೋನ ತಣ್ಣಗೆ ಕೂತವನು. ದೇವ ಸಹಜ ಆಸೆ-ಆಕಾಂಕ್ಷೆಗಳಿಂದ ಬಳಲಿದವನು. ಒಂದುನೂರಕ್ಕಿಂತ ಹೆಚ್ಚು ಪತ್ನಿ-ಉಪ ಪತ್ನಿಯರ ಕಟ್ಟಿಕೊಂಡು ಸುಮಾರು ಮೂರುನೂರು ಜನ ಮಕ್ಕಳಿಗೆ ಜನ್ಮ ಕೊಟ್ಟವನು.

ಅವನ ಹೆಂಡತಿ ಮೆಡುಸ್ಸಾ. ಅಕಿನ್ನ ಯಾರಾದರೂ ಕಣ್ಣಿನೊಳಗ ಕಣ್ಣು ಇಟ್ಟು ನೋಡಿದರ ಅವರು ಕಲ್ಲಾಗಿಬಿಡತಿದ್ದರು. ಅಕಿ ತಲಿಮ್ಯಾಲೆ ಕೂದಲು ಇರಲಿಲ್ಲ. ಅದರ ಬದಲಿಗೆ ಸಣ್ಣ ಸಣ್ಣ ಹಾವು ಇದ್ದವು. ಆ ಹಾವುಗಳನ್ನ ಅಕಿ ತನ್ನ ಸೇವಕರ ತರಹ ಉಪಯೋಗ ಮಾಡತಿದ್ದಳು. ಅಕಿಗೆ ಅಣಿಮಾ-ಗರಿಮಾ ಶಕ್ತಿಗಳು ಸಿದ್ಧಿಸಿಬಿಟ್ಟಿದ್ದವು. ತಾನು ಬಯಸಿದಲ್ಲಿ ಪ್ರವಾಸ ಮಾಡುವ ಶಕ್ತಿ ಇತ್ತು.

ಕೊನೆಗೆ ಅವಳ ಸಂಹಾರ ಮಾಡಿದವ ಯಾರು ಅಂದರ ಗ್ರೀಕ್ ದೇವತೆ ಪರ್ಸಿಯಸ್. ಆತ ತನ್ನ ಕಣ್ಣು ಕಟ್ಟಿಕೊಂಡು ಅವಳ ರುಂಡ ಕತ್ತರಿಸಿಬಿಟ್ಟ. ಆ ರುಂಡವನ್ನು ತನ್ನ ಈಟಿಗೆ ಚುಚ್ಚಿಕೊಂಡು ತಿರುಗಾಡುತ್ತಿದ್ದ. ಮೆಡುಸ್ಸಾ ಸತ್ತ ಮೇಲೆ ಸಹಿತ ಅವಳ ಶಾಪ ಕೊಡುವ ಶಕ್ತಿ ಹೋಗಲಿಲ್ಲ. ಇದನ್ನು ಅರಿತ ಪರ್ಸಿಯಸ್ ಅವಳ ತಲೆಯನ್ನ ಒಂದು ಆಯುಧದ ರೀತಿ ಬಳಸಿ ತನ್ನ ವೈರಿಗಳನ್ನು ಕೊಂದ.

ಇಷ್ಟೆಲ್ಲಾ ಆತಲ್ಲಾ, ಈಗ ನೋಡ್ರಿ. ಇಲ್ಲೇ ಐತಿ ಮಜಾ. ಮೆಡುಸ್ಸಾನ ಹತ್ಯೆ ಮಾಡುವಾಗ ಪರ್ಸಿಯಸ್ ಒಂದು ಚಮತ್ಕಾರಿ ವಾಹನ ಬಳಸಿದ್ದ. ಅದು ಯಾವುದು ಅಂದರ ಆಕಾಶದಲ್ಲಿ ಹಾರಾಡಬಲ್ಲ ಬಿಳಿಯ ಕುದುರೆ. ತನ್ನ ಎರಡೂ ಕಡೆಗಳಲ್ಲಿ ಇದ್ದ ರೆಕ್ಕೆಗಳನ್ನು ಬಳಸಿ ಅದು ಹಾರಬಹುದಿತ್ತು. ಮೂರುಲೋಕ ಸಂಚಾರ ಮಾಡಬಹುದಿತ್ತು.

ಆ ಶ್ವೇತಾಶ್ವದ ಹೆಸರು ಪೆಗಸಸ್. ಈ ದೈವಿ ಕುದುರೆಯ ತಾಯಿ ತಂದೆಗಳು ಯಾರು ಅಂದರ ಮೆಡುಸ್ಸಾ ಮತ್ತು ಪೊಸಯಿಡೋನ. ತನ್ನ ತಾಯಿಯ ಕೊಲೆಗಾರ ತನ್ನನ್ನು ವಾಹನವನ್ನಾಗಿ ಬಳಸಲಿಕ್ಕೆ ಹತ್ತಿಬಿಟ್ಟಾನು ಅಂತ ಅದಕ್ಕ ಗೊತ್ತಿತ್ತೋ ಇಲ್ಲೋ, ಒಟ್ಟಿನಲ್ಲಿ ತನ್ನ ಹೆತ್ತ ತಾಯಿಯ ಕೊಲೆಗೆ ಅದು ಭಾಗಿ ಆತು. ಹಿಂಗ ಮಾತೃ ಹತ್ಯೆ ಪಾಪದ ಲೇಪ ಅಂಟಿದ ಈ ಕುದುರೆ ಒಂದು ದಿನ ತನ್ನ ಮೇಲೆ ಏರಿದ ಸವಾರನನ್ನು ಕೆಳಗೆ ಕೆಡವಿ ಕೊಂದುಬಿಟ್ಟಿತು.

ಈ ಪೆಗಸಸ್ ಬುದ್ಧಿವಂತರ ದೇಶ ಅಂತ ಹೆಸರು ಪಡೆದ ಇಸ್ರೇಲ್‌ನ ಅತಿ ಬುದ್ಧಿವಂತರು ಸೃಷ್ಟಿಸಿದ ತಂತ್ರಾಂಶ. ಇದನ್ನು ಎನ್‌ಎಸ್‌ಒ ಅನ್ನೋ ಕಂಪನಿಯವರು ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟ ಮಾಡತಾರೆ. ಅದನ್ನು ಭಯೋತ್ಪಾದಕರು, ರಾಷ್ಟ್ರ ವಿರೋಧಿ ಶಕ್ತಿಗಳು ಮುಂತಾದವರ ವಿರುದ್ಧ ಗೂಢಚಾರಿಕೆ ಮಾಡಲಿಕ್ಕೆ ಉಪಯೋಗ ಮಾಡತಾರ.

ಭಾರತದ ಘನ ಸರಕಾರ ತೆರಿಗೆದಾರರು ಬೆವರು-ರಕ್ತ ಸುರಿಸಿ ಕಟ್ಟಿದ ಸುಂಕದ ಹಣವನ್ನು ತೊಗೊಂಡು ಈ ಬಿಳಿ ಕುದುರೆಯ ಬಲಕ್ಕೆ ಕಟ್ಟಿಬಿಟ್ಟೆದ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಇರೋ ದೇಶ ಸರ್ವಾಧಿಕಾರಿ ದೇಶಗಳು ಮತ್ತು ಅರೆ ಪ್ರಜಾಪ್ರಭುತ್ವವಾದಿ ದೇಶಗಳ ಸಾಲಿನಲ್ಲಿ ಸೇರಿಕೊಂಡುಬಿಟ್ಟದ.

ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ, ಮುಂತಾದ ದೇಶಗಳ ಜೊತೆಗೆ ಸ್ಪರ್ಧೆಗೆ ಬಿದ್ದಂಗ ಮಾಡಿ ಎರಡು ವರ್ಷದಲ್ಲಿ ಕನಿಷ್ಟ 600 ಕೋಟಿ ರೂಪಾಯಿ ಲಪಟಾಯಿಸಿಬಿಟ್ಟದ. ಸುಮಾರು ಮೂರು ನೂರು ಜನರ ಮ್ಯಾಲೆ ಎರಡು ವರ್ಷಗಟ್ಟಲೆ ಗೂಢಚಾರಿಕೆ ಮಾಡಿ ಅವರ ಖಾಸಗಿ ಮಾಹಿತಿ ಎಲ್ಲ ಸಂಗ್ರಹ ಮಾಡೆದ.

ಬರೆ ಇಷ್ಟ ಇದ್ದರ ಇದು ಸುದ್ದಿ ಆಗ್ತಾ ಇರಲಿಲ್ಲ. ಈ ಬಿಳಿ ರೆಕ್ಕೆಯ ಕುದುರೆಯಿಂದ ಯಾರದಾದರೂ ಫೋನುಗಳನ್ನು ಅದರ ಮಾಲೀಕರಿಗೆ ಗೊತ್ತಿಲ್ಲದೆ ಚಾಲೂ-ಬಂದ್ ಮಾಡಬಹುದು. ಅವರ ಫೋನು ಕ್ಯಾಮರಾದಿಂದ ಫೋಟೋ ತೆಗಿಬಹುದು, ವಿಡಿಯೋ ತೆಗಿಬಹುದು. ಅವರ ಮೆಸೇಜು, ವಾಟ್ಸಪ್ಪು, ಈಮೇಲೂ, ಇತ್ಯಾದಿಗಳ ಕಾಪಿ ಮಾಡಬಹುದು. ಅವರ ಬ್ಯಾಂಕ್ ವಹಿವಾಟಿನ ಮಾಹಿತಿ ಪಡೆಯಬಹುದು. ಅವರ ಆರೋಗ್ಯದ ಎಲ್ಲ ಮಾಹಿತಿ-ಉದಾಹರಣೆಗೆ ಅವರಿಗೆ ಇರುವ ಕಾಯಿಲೆ, ಅವರು ಆಪರೇಷನ್ ಮಾಡಿಸಿಕೊಂಡ ಮಾಹಿತಿ, ತೊಗೊಳ್ಳುವ ಔಷಧಿ, ಅವರ ವೈದ್ಯರ ನಂಬರ್ ಎಲ್ಲ ಸಂಗ್ರಹ ಮಾಡಬಹುದು.

ಇನ್ನೊಂದು ಖತರನಾಕ ವಿಚಾರ ಏನು ಅಂದರ ಎಲ್ಲೋ ದೂರ ಇಸ್ರೇಲ್-ಅಮೆರಿಕ ದೆಹಲಿಯೊಳಗ ಕುಳಿತುಕೊಂಡ ಇಂಜಿನಿಯರ್‌ಗಳು ಅಥವಾ ಪೊಲೀಸರು ನಿಮ್ಮ ಫೋನಿನ ಒಳಗ ನಿಮ್ಮನ್ನು ಕಾನೂನಿನ ಕುಣಿಕೆಗೆ ಸಿಕ್ಕಿಸುವಂತಹ ಮಾಹಿತಿ ಕಳಿಸಬಹುದು. ಅದು ನಿಮಗೆ ಗೊತ್ತಿರಲಾರದೆ ನಿಮ್ಮ ಫೋನಿನ ಒಳಗೆ ಬಂದು ಕೂತುಬಿಡುತ್ತದೆ. ನೀವು ಫೋನು ಬದಲು ಮಾಡಿದರೂ ಹೋಗೋದಿಲ್ಲ.

ನೀವು ನಿಮ್ಮ ಸ್ನೇಹಿತರಿಗೆ “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಮಂಡಕ್ಕಿ ಮಿರ್ಚಿ ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಹಾಲು, ಎರಡು ನೂರು ಗ್ರಾಂ ಚಹಾಪುಡಿ ತೊಗೊಂಡು ಬರ್ರಿ” ಅಂತ ಸಂದೇಶ ಕಳಿಸಿದರಿ ಅಂತ ತಿಳಕೋರಿ. ನಿಮ್ಮ ವಿರೋಧಿಗಳು “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಟೈಮ್ ಬಾಂಬ್ ತಯಾರು ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಸೋಡಿಯಂ ನೈಟ್ರೇಟ್ ದ್ರಾವಣ, ಎರಡು ನೂರು ಗ್ರಾ ಆರ್‌ಡಿ ಎಕ್ಸ್ ತೊಗೊಂಡು ಬರ್ರಿ” ಅಂತ ಬದಲು ಮಾಡಬಹುದು.

ಅದರ ಆಧಾರದ ಮೇಲೆ ನಿಮ್ಮನ್ನ ದೇಶದ್ರೋಹದ ಕಾನೂನು ಅಡಿಯಲ್ಲಿ ಒದ್ದು ಒಳಗಹಾಕಬಹುದು.

ಹಿಂದಿ ಪಿಕ್ಚರ್‌ದಾಗ ಪೊಲೀಸ್ ಇನ್ಸ್ಪೆಕ್ಟರ್ ಅಮರೀಷ ಪುರಿ ’ಅಬೇ ಸಾಲೇ, ನಿನ್ನ ಮನಿಯೊಳಗ ಗಾಂಜಾ ಪೊಟ್ಟಣ ಇಟ್ಟು ಬಿಡತೆನಿ. ನಿನ್ನನ್ನ ಜೈಲಿಗೆ ಹಾಕತೆನಿ’ ಅಂತ ಧಮಕಿ ಕೊಡತನಲ್ಲ, ಅದಕ್ಕೂ ಇದಕ್ಕೂ ಏನು ವ್ಯತ್ಯಾಸ ಇಲ್ಲ. ಹಿಂಗ ಆಗಬಹುದು ಅಂತ ಅಲ್ಲ. ಆಗಿ ಹೊಗೇದ.

“ಇದೇನು ಹೊಸದಲ್ಲ. ಹಿಂದಿನ ಎಲ್ಲ ಸರಕಾರಗಳು ಗೂಢಚಾರಿಕೆ ಮಾಡಿದವರೇ” ಅಂತ ಹೇಳಿ ನಮ್ಮ ಡೋಂಟ್ ಕೇರ್ ಕುಮಾರಣ್ಣ ಅವರು ಹೇಳಿಕೆ ಕೊಟ್ಟಾರ. ಹಿಂದಿನವರು ಗೂಢಚಾರಿಕೆ ಮಾಡಿರಬಹುದು. ಅದರ ಅಮರೀಷ ಪುರಿ ತಂತ್ರ ಉಪಯೋಗಿಸಿ ನಿಮ್ಮ ಫೋನ್‌ದಾಗ ಬಾಂಬ್ ತಯಾರಿಸುವ ಸಂದೇಶ ಕಳಿಸಿಲ್ಲ. ಹಂಗ ಮಾಡಲಿಕ್ಕೆ ಆವಾಗ ತಂತ್ರಜ್ಞಾನನೂ ಇರಲಿಲ್ಲ, ಅಂತ ತಿಳಿರಿ.

ಈಗ ಸದ್ಯ ಟಿವಿ ಎರಡು ದೊಡ್ಡ ಸುದ್ದಿ ತೋರಸಲಿಕ್ಕೆ ಹತ್ತಿದಾವು. ಒಂದು ಈ ಗ್ರೀಕ್ ಪುರಾಣದ ಕತಿ. ಇನ್ನೊಂದು ನಮ್ಮ ಕುಡ್ಲದ ಹುಡುಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಪುರಾಣದ ಕತಿ. ಸುಮ್ಮನೇ ಕುಂದರಲಾರದೆ ಕುಂದ್ರಾ ಅವರು ತಯಾರಿಸಿದರು ಎನ್ನಲಾದ ಅಶ್ಲೀಲ ಚಿತ್ರದ ಬಿಸಿ ಬಿಸಿ ಸುದ್ದಿ. ನೀವು ಯಾವುದನ್ನು ನೋಡತಿರಿ ಅನ್ನೋದರ ಮ್ಯಾಲೆ ನಿಮ್ಮ ಮತ್ತು ಈ ದೇಶದ ಭವಿಷ್ಯ ನಿರ್ಭರ ಆಗತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...