Homeಅಂಕಣಗಳುಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

ಸುದ್ದಿಯೇನೇ ಮನೋಲ್ಲಾಸಿನಿ: ಎಲ್ಲಾ ಸರಿ ಈ ಪೆಗಸಸ್ ಅಂದರೆ ಏನು?

- Advertisement -
- Advertisement -

ಒಲಿಂಪಿಕ್ ಶುರು ಆಗಲಿಕ್ಕೆ ಬಂದವು. ಅದಕ್ಕ ಸಂಬಂಧಪಟ್ಟ ಒಂದು ಕತಿ ಕೇಳೋಣ. ಒಂದಾನೊಂದು ಕಾಲದಾಗ, ಏಟೊಂದು ಮುದ ಇದ್ದ ಕಾಲದಾಗ ಗ್ರೀಕ್ ದೇಶದೊಳಗ ಒಬ್ಬವ ರಾಜಾ ಇದ್ದ. ಅವನ ಹೆಸರು ಪೊಸಯಿಡೋನ. ಆತ ಸಮುದ್ರ, ಭೂಕಂಪನ ಹಾಗೂ ಕುದುರೆಗಳ ದೇವರು. ಅವನ ಕೈಯಾಗ ಒಂದು ತ್ರಿಶೂಲ ಇತ್ತು. ತನ್ನ ತ್ರಿಶೂಲದಿಂದ ಭೂಮಿಮ್ಯಾಲೆ ಗೆರೆ ಹೊಡದು ನೀರಿನ ಝರಿಗಳನ್ನು ಆತ ಸೃಷ್ಟಿ ಮಾಡುತ್ತಿದ್ದ. ಇಡೀ ವಿಶ್ವವನ್ನೇ ಅಲುಗಾಡಿಸಬಲ್ಲ ಶಕ್ತಿ ಉಳ್ಳವನು ಅಂತ ಅವನಿಗೆ ‘ಭೂಕಂಪನಾಧೀಶ’ ಅಂತ ಹೆಸರು ಇತ್ತು. ಆತ ಹುಚ್ಚು ಕುದುರೆಗಳನ್ನು ಹತೋಟಿಗೆ ತರುವ ಕುಶಲತೆ ಇದ್ದವನು ಅನ್ನುವುದು ಅವನ ಹೆಗ್ಗಳಿಕೆ. ಎಲ್ಲಕ್ಕಿಂತ ಮುಖ್ಯವಾಗಿ ಆತ ಒಲಿಂಪಿಕ್ ಆಟಗಾರ.

ಅಣ್ಣಾ ತಮ್ಮಂದಿರ ನಡುವೆ ಆಸ್ತಿ ಬಟವಾಡೆ ಆದ ನಂತರ ತನ್ನ ಪಾಲಿಗೆ ಬಂದ ಸಮುದ್ರವನ್ನ ಇಟಗೊಂಡು ತಮ್ಮ ಪೊಸಯಿಡೋನ ತಣ್ಣಗೆ ಕೂತವನು. ದೇವ ಸಹಜ ಆಸೆ-ಆಕಾಂಕ್ಷೆಗಳಿಂದ ಬಳಲಿದವನು. ಒಂದುನೂರಕ್ಕಿಂತ ಹೆಚ್ಚು ಪತ್ನಿ-ಉಪ ಪತ್ನಿಯರ ಕಟ್ಟಿಕೊಂಡು ಸುಮಾರು ಮೂರುನೂರು ಜನ ಮಕ್ಕಳಿಗೆ ಜನ್ಮ ಕೊಟ್ಟವನು.

ಅವನ ಹೆಂಡತಿ ಮೆಡುಸ್ಸಾ. ಅಕಿನ್ನ ಯಾರಾದರೂ ಕಣ್ಣಿನೊಳಗ ಕಣ್ಣು ಇಟ್ಟು ನೋಡಿದರ ಅವರು ಕಲ್ಲಾಗಿಬಿಡತಿದ್ದರು. ಅಕಿ ತಲಿಮ್ಯಾಲೆ ಕೂದಲು ಇರಲಿಲ್ಲ. ಅದರ ಬದಲಿಗೆ ಸಣ್ಣ ಸಣ್ಣ ಹಾವು ಇದ್ದವು. ಆ ಹಾವುಗಳನ್ನ ಅಕಿ ತನ್ನ ಸೇವಕರ ತರಹ ಉಪಯೋಗ ಮಾಡತಿದ್ದಳು. ಅಕಿಗೆ ಅಣಿಮಾ-ಗರಿಮಾ ಶಕ್ತಿಗಳು ಸಿದ್ಧಿಸಿಬಿಟ್ಟಿದ್ದವು. ತಾನು ಬಯಸಿದಲ್ಲಿ ಪ್ರವಾಸ ಮಾಡುವ ಶಕ್ತಿ ಇತ್ತು.

ಕೊನೆಗೆ ಅವಳ ಸಂಹಾರ ಮಾಡಿದವ ಯಾರು ಅಂದರ ಗ್ರೀಕ್ ದೇವತೆ ಪರ್ಸಿಯಸ್. ಆತ ತನ್ನ ಕಣ್ಣು ಕಟ್ಟಿಕೊಂಡು ಅವಳ ರುಂಡ ಕತ್ತರಿಸಿಬಿಟ್ಟ. ಆ ರುಂಡವನ್ನು ತನ್ನ ಈಟಿಗೆ ಚುಚ್ಚಿಕೊಂಡು ತಿರುಗಾಡುತ್ತಿದ್ದ. ಮೆಡುಸ್ಸಾ ಸತ್ತ ಮೇಲೆ ಸಹಿತ ಅವಳ ಶಾಪ ಕೊಡುವ ಶಕ್ತಿ ಹೋಗಲಿಲ್ಲ. ಇದನ್ನು ಅರಿತ ಪರ್ಸಿಯಸ್ ಅವಳ ತಲೆಯನ್ನ ಒಂದು ಆಯುಧದ ರೀತಿ ಬಳಸಿ ತನ್ನ ವೈರಿಗಳನ್ನು ಕೊಂದ.

ಇಷ್ಟೆಲ್ಲಾ ಆತಲ್ಲಾ, ಈಗ ನೋಡ್ರಿ. ಇಲ್ಲೇ ಐತಿ ಮಜಾ. ಮೆಡುಸ್ಸಾನ ಹತ್ಯೆ ಮಾಡುವಾಗ ಪರ್ಸಿಯಸ್ ಒಂದು ಚಮತ್ಕಾರಿ ವಾಹನ ಬಳಸಿದ್ದ. ಅದು ಯಾವುದು ಅಂದರ ಆಕಾಶದಲ್ಲಿ ಹಾರಾಡಬಲ್ಲ ಬಿಳಿಯ ಕುದುರೆ. ತನ್ನ ಎರಡೂ ಕಡೆಗಳಲ್ಲಿ ಇದ್ದ ರೆಕ್ಕೆಗಳನ್ನು ಬಳಸಿ ಅದು ಹಾರಬಹುದಿತ್ತು. ಮೂರುಲೋಕ ಸಂಚಾರ ಮಾಡಬಹುದಿತ್ತು.

ಆ ಶ್ವೇತಾಶ್ವದ ಹೆಸರು ಪೆಗಸಸ್. ಈ ದೈವಿ ಕುದುರೆಯ ತಾಯಿ ತಂದೆಗಳು ಯಾರು ಅಂದರ ಮೆಡುಸ್ಸಾ ಮತ್ತು ಪೊಸಯಿಡೋನ. ತನ್ನ ತಾಯಿಯ ಕೊಲೆಗಾರ ತನ್ನನ್ನು ವಾಹನವನ್ನಾಗಿ ಬಳಸಲಿಕ್ಕೆ ಹತ್ತಿಬಿಟ್ಟಾನು ಅಂತ ಅದಕ್ಕ ಗೊತ್ತಿತ್ತೋ ಇಲ್ಲೋ, ಒಟ್ಟಿನಲ್ಲಿ ತನ್ನ ಹೆತ್ತ ತಾಯಿಯ ಕೊಲೆಗೆ ಅದು ಭಾಗಿ ಆತು. ಹಿಂಗ ಮಾತೃ ಹತ್ಯೆ ಪಾಪದ ಲೇಪ ಅಂಟಿದ ಈ ಕುದುರೆ ಒಂದು ದಿನ ತನ್ನ ಮೇಲೆ ಏರಿದ ಸವಾರನನ್ನು ಕೆಳಗೆ ಕೆಡವಿ ಕೊಂದುಬಿಟ್ಟಿತು.

ಈ ಪೆಗಸಸ್ ಬುದ್ಧಿವಂತರ ದೇಶ ಅಂತ ಹೆಸರು ಪಡೆದ ಇಸ್ರೇಲ್‌ನ ಅತಿ ಬುದ್ಧಿವಂತರು ಸೃಷ್ಟಿಸಿದ ತಂತ್ರಾಂಶ. ಇದನ್ನು ಎನ್‌ಎಸ್‌ಒ ಅನ್ನೋ ಕಂಪನಿಯವರು ಕೇವಲ ಸರಕಾರಿ ಸಂಸ್ಥೆಗಳಿಗೆ ಮಾತ್ರ ಮಾರಾಟ ಮಾಡತಾರೆ. ಅದನ್ನು ಭಯೋತ್ಪಾದಕರು, ರಾಷ್ಟ್ರ ವಿರೋಧಿ ಶಕ್ತಿಗಳು ಮುಂತಾದವರ ವಿರುದ್ಧ ಗೂಢಚಾರಿಕೆ ಮಾಡಲಿಕ್ಕೆ ಉಪಯೋಗ ಮಾಡತಾರ.

ಭಾರತದ ಘನ ಸರಕಾರ ತೆರಿಗೆದಾರರು ಬೆವರು-ರಕ್ತ ಸುರಿಸಿ ಕಟ್ಟಿದ ಸುಂಕದ ಹಣವನ್ನು ತೊಗೊಂಡು ಈ ಬಿಳಿ ಕುದುರೆಯ ಬಲಕ್ಕೆ ಕಟ್ಟಿಬಿಟ್ಟೆದ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಇರೋ ದೇಶ ಸರ್ವಾಧಿಕಾರಿ ದೇಶಗಳು ಮತ್ತು ಅರೆ ಪ್ರಜಾಪ್ರಭುತ್ವವಾದಿ ದೇಶಗಳ ಸಾಲಿನಲ್ಲಿ ಸೇರಿಕೊಂಡುಬಿಟ್ಟದ.

ಅಜರ್ಬೈಜಾನ್ ಬಹರೈನ್, ಸೌದಿ ಅರೇಬಿಯಾ, ಹಂಗೇರಿ, ಮೆಕ್ಸಿಕೋ, ಮುಂತಾದ ದೇಶಗಳ ಜೊತೆಗೆ ಸ್ಪರ್ಧೆಗೆ ಬಿದ್ದಂಗ ಮಾಡಿ ಎರಡು ವರ್ಷದಲ್ಲಿ ಕನಿಷ್ಟ 600 ಕೋಟಿ ರೂಪಾಯಿ ಲಪಟಾಯಿಸಿಬಿಟ್ಟದ. ಸುಮಾರು ಮೂರು ನೂರು ಜನರ ಮ್ಯಾಲೆ ಎರಡು ವರ್ಷಗಟ್ಟಲೆ ಗೂಢಚಾರಿಕೆ ಮಾಡಿ ಅವರ ಖಾಸಗಿ ಮಾಹಿತಿ ಎಲ್ಲ ಸಂಗ್ರಹ ಮಾಡೆದ.

ಬರೆ ಇಷ್ಟ ಇದ್ದರ ಇದು ಸುದ್ದಿ ಆಗ್ತಾ ಇರಲಿಲ್ಲ. ಈ ಬಿಳಿ ರೆಕ್ಕೆಯ ಕುದುರೆಯಿಂದ ಯಾರದಾದರೂ ಫೋನುಗಳನ್ನು ಅದರ ಮಾಲೀಕರಿಗೆ ಗೊತ್ತಿಲ್ಲದೆ ಚಾಲೂ-ಬಂದ್ ಮಾಡಬಹುದು. ಅವರ ಫೋನು ಕ್ಯಾಮರಾದಿಂದ ಫೋಟೋ ತೆಗಿಬಹುದು, ವಿಡಿಯೋ ತೆಗಿಬಹುದು. ಅವರ ಮೆಸೇಜು, ವಾಟ್ಸಪ್ಪು, ಈಮೇಲೂ, ಇತ್ಯಾದಿಗಳ ಕಾಪಿ ಮಾಡಬಹುದು. ಅವರ ಬ್ಯಾಂಕ್ ವಹಿವಾಟಿನ ಮಾಹಿತಿ ಪಡೆಯಬಹುದು. ಅವರ ಆರೋಗ್ಯದ ಎಲ್ಲ ಮಾಹಿತಿ-ಉದಾಹರಣೆಗೆ ಅವರಿಗೆ ಇರುವ ಕಾಯಿಲೆ, ಅವರು ಆಪರೇಷನ್ ಮಾಡಿಸಿಕೊಂಡ ಮಾಹಿತಿ, ತೊಗೊಳ್ಳುವ ಔಷಧಿ, ಅವರ ವೈದ್ಯರ ನಂಬರ್ ಎಲ್ಲ ಸಂಗ್ರಹ ಮಾಡಬಹುದು.

ಇನ್ನೊಂದು ಖತರನಾಕ ವಿಚಾರ ಏನು ಅಂದರ ಎಲ್ಲೋ ದೂರ ಇಸ್ರೇಲ್-ಅಮೆರಿಕ ದೆಹಲಿಯೊಳಗ ಕುಳಿತುಕೊಂಡ ಇಂಜಿನಿಯರ್‌ಗಳು ಅಥವಾ ಪೊಲೀಸರು ನಿಮ್ಮ ಫೋನಿನ ಒಳಗ ನಿಮ್ಮನ್ನು ಕಾನೂನಿನ ಕುಣಿಕೆಗೆ ಸಿಕ್ಕಿಸುವಂತಹ ಮಾಹಿತಿ ಕಳಿಸಬಹುದು. ಅದು ನಿಮಗೆ ಗೊತ್ತಿರಲಾರದೆ ನಿಮ್ಮ ಫೋನಿನ ಒಳಗೆ ಬಂದು ಕೂತುಬಿಡುತ್ತದೆ. ನೀವು ಫೋನು ಬದಲು ಮಾಡಿದರೂ ಹೋಗೋದಿಲ್ಲ.

ನೀವು ನಿಮ್ಮ ಸ್ನೇಹಿತರಿಗೆ “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಮಂಡಕ್ಕಿ ಮಿರ್ಚಿ ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಹಾಲು, ಎರಡು ನೂರು ಗ್ರಾಂ ಚಹಾಪುಡಿ ತೊಗೊಂಡು ಬರ್ರಿ” ಅಂತ ಸಂದೇಶ ಕಳಿಸಿದರಿ ಅಂತ ತಿಳಕೋರಿ. ನಿಮ್ಮ ವಿರೋಧಿಗಳು “ಇವತ್ತು ಸಂಜೆ ಎಂಟು ಗಂಟೆಗೆ ನಮ್ಮ ರೂಮಿನೊಳಗ ಒಂದು ಟೈಮ್ ಬಾಂಬ್ ತಯಾರು ಮಾಡೋಣ. ಎಲ್ಲರೂ ಬನ್ನಿ. ಬರುವಾಗ ಒಂದು ಅರ್ಧ ಲೀಟರ್ ಸೋಡಿಯಂ ನೈಟ್ರೇಟ್ ದ್ರಾವಣ, ಎರಡು ನೂರು ಗ್ರಾ ಆರ್‌ಡಿ ಎಕ್ಸ್ ತೊಗೊಂಡು ಬರ್ರಿ” ಅಂತ ಬದಲು ಮಾಡಬಹುದು.

ಅದರ ಆಧಾರದ ಮೇಲೆ ನಿಮ್ಮನ್ನ ದೇಶದ್ರೋಹದ ಕಾನೂನು ಅಡಿಯಲ್ಲಿ ಒದ್ದು ಒಳಗಹಾಕಬಹುದು.

ಹಿಂದಿ ಪಿಕ್ಚರ್‌ದಾಗ ಪೊಲೀಸ್ ಇನ್ಸ್ಪೆಕ್ಟರ್ ಅಮರೀಷ ಪುರಿ ’ಅಬೇ ಸಾಲೇ, ನಿನ್ನ ಮನಿಯೊಳಗ ಗಾಂಜಾ ಪೊಟ್ಟಣ ಇಟ್ಟು ಬಿಡತೆನಿ. ನಿನ್ನನ್ನ ಜೈಲಿಗೆ ಹಾಕತೆನಿ’ ಅಂತ ಧಮಕಿ ಕೊಡತನಲ್ಲ, ಅದಕ್ಕೂ ಇದಕ್ಕೂ ಏನು ವ್ಯತ್ಯಾಸ ಇಲ್ಲ. ಹಿಂಗ ಆಗಬಹುದು ಅಂತ ಅಲ್ಲ. ಆಗಿ ಹೊಗೇದ.

“ಇದೇನು ಹೊಸದಲ್ಲ. ಹಿಂದಿನ ಎಲ್ಲ ಸರಕಾರಗಳು ಗೂಢಚಾರಿಕೆ ಮಾಡಿದವರೇ” ಅಂತ ಹೇಳಿ ನಮ್ಮ ಡೋಂಟ್ ಕೇರ್ ಕುಮಾರಣ್ಣ ಅವರು ಹೇಳಿಕೆ ಕೊಟ್ಟಾರ. ಹಿಂದಿನವರು ಗೂಢಚಾರಿಕೆ ಮಾಡಿರಬಹುದು. ಅದರ ಅಮರೀಷ ಪುರಿ ತಂತ್ರ ಉಪಯೋಗಿಸಿ ನಿಮ್ಮ ಫೋನ್‌ದಾಗ ಬಾಂಬ್ ತಯಾರಿಸುವ ಸಂದೇಶ ಕಳಿಸಿಲ್ಲ. ಹಂಗ ಮಾಡಲಿಕ್ಕೆ ಆವಾಗ ತಂತ್ರಜ್ಞಾನನೂ ಇರಲಿಲ್ಲ, ಅಂತ ತಿಳಿರಿ.

ಈಗ ಸದ್ಯ ಟಿವಿ ಎರಡು ದೊಡ್ಡ ಸುದ್ದಿ ತೋರಸಲಿಕ್ಕೆ ಹತ್ತಿದಾವು. ಒಂದು ಈ ಗ್ರೀಕ್ ಪುರಾಣದ ಕತಿ. ಇನ್ನೊಂದು ನಮ್ಮ ಕುಡ್ಲದ ಹುಡುಗಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರ ಪುರಾಣದ ಕತಿ. ಸುಮ್ಮನೇ ಕುಂದರಲಾರದೆ ಕುಂದ್ರಾ ಅವರು ತಯಾರಿಸಿದರು ಎನ್ನಲಾದ ಅಶ್ಲೀಲ ಚಿತ್ರದ ಬಿಸಿ ಬಿಸಿ ಸುದ್ದಿ. ನೀವು ಯಾವುದನ್ನು ನೋಡತಿರಿ ಅನ್ನೋದರ ಮ್ಯಾಲೆ ನಿಮ್ಮ ಮತ್ತು ಈ ದೇಶದ ಭವಿಷ್ಯ ನಿರ್ಭರ ಆಗತದ.

ಅಲ್ಲವೇ ಮನೋಲ್ಲಾಸಿನಿ?


ಇದನ್ನೂ ಓದಿ: ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...