Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...