Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...