Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...