Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...