Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...