Homeರಾಷ್ಟ್ರೀಯಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ

‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ

- Advertisement -
- Advertisement -

ಗಂಡು, ಹೆಣ್ಣು ಅಥವಾ ಟ್ರಾನ್ಸ್‌ಜೆಂಡರ್‌‌ ಹೀಗೆ ಯಾವುದೆ ಲಿಂಗತಾರತಮ್ಯವಿಲ್ಲದೆ ಎಲ್ಲಾ ಶಾಲಾ ಶಿಕ್ಷಕರನ್ನು ‘ಟೀಚರ್‌‌’ ಎಂದು ಸಂಬೋಧಿಸಬೇಕು ಎಂದು ಕೇರಳ ಮಕ್ಕಳ ಹಕ್ಕುಗಳ ಆಯೋಗ ಆದೇಶಿಸಿದೆ. ಶಿಕ್ಷಕರನ್ನು ಗೌರವಯುತವಾಗಿ ಸಂಬೋಧಿಸಲು ಇದು ಸೂಕ್ತ ಪದವಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ಅಧ್ಯಕ್ಷ ಕೆ.ವಿ. ಮನೋಜಕುಮಾರ್ ಮತ್ತು ಸದಸ್ಯ ಸಿ. ವಿಜಯಕುಮಾರ್ ಅವರಿದ್ದ ವಿಭಾಗೀಯ ಪೀಠ ನೀಡಿರುವ ಆದೇಶದ ಕುರಿತು ರಾಜ್ಯಾದ್ಯಂತ ಎಲ್ಲ ಶಾಲೆಗಳಿಗೆ ಮಾಹಿತಿ ನೀಡುವಂತೆ ಆಯೋಗವು ಸಾಮಾನ್ಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದು ಅತ್ಯಂತ ಸ್ವಾಗತಾರ್ಹ ತೀರ್ಮಾನವಾಗಿದೆ ಎಂದು ಪಟ್ಟೋಮ್‌ನ ಸರ್ಕಾರಿ ಮಾದರಿ ಬಾಲಕಿಯರ ಶಾಲೆಯ ಶಿಕ್ಷಕಿ ರತಿ ಕಿರಣ್ ಅಭಿಪ್ರಾಯಪಟ್ಟಿದ್ದಾರೆ. “ಇದು ಲಿಂಗ ತಾರತಮ್ಯವಿಲ್ಲದೆ ಎಲ್ಲಾ ಶಿಕ್ಷಕರನ್ನು ಸಂಬೋಧಿಸುವ ಸಾಮಾನ್ಯ ಪದವಾಗಿದೆ. ಕೆಲವು ಶಾಲೆಗಳ ಸಮವಸ್ತ್ರವನ್ನು ಲಿಂಗ ತಟಸ್ಥಗೊಳಿಸುವಲ್ಲಿ ನಾವು ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದೇವೆ. ಹುಡುಗಿಯರ ಸ್ಕರ್ಟ್ ಮತ್ತು ಬ್ಲೌಸ್‌ಗಳ ಬದಲಿಗೆ ಹೆಚ್ಚು ಆರಾಮದಾಯಕ ಶರ್ಟ್‌ ಮತ್ತು ಪ್ಯಾಂಟ್‌ಗಳಿಗೆ ಬದಲಾಯಿಸಲು ಅವಕಾಶ ನೀಡಿದ್ದೇವೆ. ಇದು ಲಿಂಗ ತಾರತಮ್ಯವನ್ನು ಹೋಗಲಾಡಿಸುವ ಮತ್ತೊಂದು ಹೆಜ್ಜೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಎಲ್ಲಾ ವೈದ್ಯರನ್ನು ಡಾಕ್ಟರ್‌‌ ಎಂದು ಕರೆಯಯುತ್ತೇವೆ ಹಾಗೆಯೆ ವೃತ್ತಿಯಿಂದ ಶಿಕ್ಷಕರನ್ನು ನಾವು ಟೀಚರ್‌‌ ಎಂದು ಯಾಕೆ ಕರೆಯಬಾರದು ಎಂದು ಅವರು ಕೇಳಿದ್ದಾರೆ.

ಎಲ್ಲಾ ಲಿಂಗಗಳಿಗೆ ಸೇರಿದ ಶಿಕ್ಷಕರಿಗೆ ‘ಟೀಚರ್‌‌’ ಎಂಬ ಸಾಮಾನ್ಯ ಪದವು ಉತ್ತಮವಾಗಿದೆ ಎಂದು ಕೋಝಿಕ್ಕೋಡ್‌ನ ಮೆಪ್ಪಯೂರ್‌ನಲ್ಲಿರುವ ಸರ್ಕಾರಿ ವೊಕೇಶನಲ್ ಶಾಲೆಯ ಶಿಕ್ಷಕ ದಿನೇಶ ಅಭಿಪ್ರಾಯಪಟ್ಟಿದ್ದಾರೆ. “ನಾನು ನನ್ನ ವಿದ್ಯಾರ್ಥಿಗಳನ್ನು ಸ್ನೇಹಿತರಂತೆ ಪರಿಗಣಿಸುವ ಶಿಕ್ಷಕ. ಅವರು ನನ್ನನ್ನು ಹೆಸರಿಟ್ಟು ಕರೆದರೆ ಕೂಡಾ ನನಗೆ ಅದು ವಿಷಯವಲ್ಲ. ಆದರೆ ಇದು ಸ್ವಾಗತಾರ್ಹ ಕ್ರಮವಾಗಿದೆ. ಶಿಕ್ಷಕರು ಪುರುಷ ಅಥವಾ ಮಹಿಳೆ ಅಥವಾ ಟ್ರಾನ್ಸ್‌ಜೆಂಡರ್‌ ಆಗಿರಲಿ ‘ಟೀಚರ್‌’ ಎಂಬ ಸಾಮಾನ್ಯ ಪದ ಅವರಿಗಿದೆ” ಎಂದು ಅವರು ಹೇಳಿದ್ದಾರೆ.

ಹೊಸ ಸಮಾಜಗಳನ್ನು ರಚಿಸಲು ಶಿಕ್ಷಕರು ದಾರಿ ಮಾಡಿಕೊಡುತ್ತಾರೆ. ‘ಸರ್’ ಮತ್ತು ‘ಮೇಡಂ’ ಎಂಬಂತಹ ಪದಗಳು ‘ಟೀಚರ್‌’ ಎಂಬ ಪದಕ್ಕೆ ಸಮಾನವಾಗುವುದಿಲ್ಲ ಎಂದು ಆಯೋಗದ ಆದೇಶವು ಹೇಳಿದೆ. ‘ಟೀಚರ್‌’ ಎಂಬ ಪದವನ್ನು ಬಳಸುವುದರಿಂದ ಸಮಾನತೆಯನ್ನು ಕಾಪಾಡಿಕೊಳ್ಳಲು ಮತ್ತು ಮಕ್ಕಳಿಗೆ ಹತ್ತಿರವಾಗಲು ಸಾಧ್ಯವಾಗುತ್ತದೆ. ಶಿಫಾರಸುಗಳನ್ನು ಆಧರಿಸಿದ ಕ್ರಿಯಾ ವರದಿಯನ್ನು ಎರಡು ತಿಂಗಳಲ್ಲಿ ಸಲ್ಲಿಸಬೇಕು ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...