Homeಕರ್ನಾಟಕಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

ಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

- Advertisement -
- Advertisement -

ಮುಸ್ಲಿಂ ಹೆಣ್ಣು ಮಕ್ಕಳು ತರಗತಿ ಕೊಠಡಿಗಳಿಗೆ ಹಿಜಾಬ್ ಧರಿಸಿ ಬರಬಾರದೆಂಬ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದ ನಂತರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಆ ನಂತರ ಕಾಲೇಜುಗಳು ಮತ್ತೆ ಆರಂಭವಾದಾಗ ವಿವಿಧ ಮುಸ್ಲಿಮೇತರ ಸಮುದಾಯದ ಹೆಣ್ಣುಮಕ್ಕಳು ಹಿಜಾಬ್ ಧರಿಸಿದ ಮುಸ್ಲಿಂ ಬಾಲಕಿಯ ಕೈಹಿಡಿದು ಶಾಲೆ ಪ್ರವೇಶಿಸಿದ ಫೋಟೋವೊಂದು ವೈರಲ್ ಆಗಿತ್ತು. ಇರ್ಷಾದ್ ಮೊಹಮ್ಮದ್ ತೆಗೆದ ಆ ಚೆಂದದ ಫೋಟೋವನ್ನು ‘Unity in Diversity’ ಶೀರ್ಷಿಕೆಯಡಿ ಡೆಕ್ಕನ್ ಹೆರಾಲ್ಡ್ ಪ್ರಕಟಿಸಿತ್ತು. ಈ ಜಾತಿ ಧರ್ಮದ ದ್ವೇಷ ದೊಡ್ಡವರು ಮಾಡಬಹುದು, ಆದರೆ ನಾವು ಎಳೆಯರು, ನಾವು ಗೆಳೆಯರು ನಮ್ಮಲ್ಲಿ ಅದಕ್ಕೆ ಅವಕಾಶವಿಲ್ಲವೆಂಬ ಸಂದೇಶವನ್ನು ಆ ಪುಟ್ಟ ಮಕ್ಕಳು ಸಾರಿದ್ದರು. ’ಇದು ನನ್ನ ಭಾರತ’ ಎಂದು ಸಾವಿರಾರು ಜನರು ಆ ಫೋಟೊವನ್ನು ಹಂಚಿಕೊಂಡಿದ್ದರು.

ಈ ರೀತಿಯ ಶಾಂತಿ ಸಹಬಾಳ್ವೆ ಸಾಮರಸ್ಯ ಸಾಮಾನ್ಯ ಜನರಲ್ಲಿ ಹಾಸುಹೊಕ್ಕಾಗಿದೆ. ಆದರೆ ದ್ವೇಷದ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸುವವರು ಅಂತಹ ಸಾಮರಸ್ಯಕ್ಕೆ ಗಲಭೆಗಳ ಮೂಲಕ ಹುಳಿಹಿಂಡಲು ಪದೇಪದೇ ಪ್ರಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿರುವ ಸರ್ಕಾರವೇ ಅಂತಹ ಕೆಲಸಕ್ಕೆ ಕುಮ್ಮಕ್ಕು ನೀಡಿದರೆ ಏನಾಗಬಹುದು ಎಂಬುದಕ್ಕೆ ನಮ್ಮ ಕರ್ನಾಟಕ ಸಾಕ್ಷಿಯಾಗಿದೆ. ಉಡುಪಿಯ ಕಾಪುವಿನಲ್ಲಿ ಮಾರಿಗುಡಿ ಜಾತ್ರೆಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಎಂಬ ಬ್ಯಾನರ್ ಹಾಕುವ ಮೂಲಕ ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳು ಕೋಮು ಧ್ರುವೀಕರಣ ಮತ್ತು ದ್ವೇಷ ಹುಟ್ಟುಹಾಕುವ ಪ್ರಕ್ರಿಯೆಗೆ ಮುಂದಾಗಿದ್ದವು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾರದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದರು. ಜಾತ್ರೆಯ ’ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ನಡೆಸಿಕೊಟ್ಟರು. ಎರಡು ದಿನವೂ ವಾಲಗ ಊದಿ ’ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದರು.

ಈ ಎರಡು ಪ್ರಕರಣಗಳು ತೋರಿಸುವುದೇನೆಂದರೆ ಸರ್ಕಾರವೂ ಸೇರಿಕೊಂಡು, ಸಂಘಪರಿವಾರ, ಮುಖ್ಯವಾಹಿನಿ ಮಾಧ್ಯಮಗಳು ಎಷ್ಟೇ ದ್ವೇಷ ಹರಡಲು ಮುಂದಾದರೂ ಈ ನಾಡಿನ ಸಮುದಾಯಗಳ ಬಹುಸಂಖ್ಯೆಯ ಜನರಿಗೆ ಅದು ಬೇಕಾಗಿಲ್ಲ. ಏಕೆಂದರೆ ನಿತ್ಯವೂ ಅವರ ಬದುಕು ಬವಣೆ ನೂರಾರು ಜನರೊಂದಿಗೆ, ಹಲವು ಸಮುದಾಯಗಳೊಂದಿಗೆ ಹೆಣೆದುಕೊಂಡಿದೆ. ಹಾಗಾಗಿ ಅವರ ನಡುವೆ ಕೊಡುಕೊಳ್ಳುವಿಕೆ ಇಲ್ಲದೆ ಬದುಕು ಸಪ್ಪೆಯಾಗುತ್ತದೆ, ಮತ್ತು ಕೆಲವು ಕಡೆಗೆ ಅದು ವಿನಾಶಕ್ಕೂ ಎಡೆಮಾಡಿಕೊಡುತ್ತದೆ. ಕೊಡು-ಕೊಳ್ಳುವಿಕೆಯ ಸಂಪ್ರದಾಯದ ಪರಿಕಲ್ಪನೆಗಳಲ್ಲೀ ಸೌಹಾರ್ದತೆ-ಸಹಬಾಳ್ವೆಯೂ ಸೇರಿಕೊಂಡಿದೆ. ಆದನ್ನು ಮತ್ತಷ್ಟು ಉದ್ದೀಪನಗೊಳಿಸುವ ಪ್ರಯತ್ನದ ಭಾಗವಾಗಿ ಮೇ 14 ರಂದು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ ನಡೆಯುತ್ತಿದೆ.

’ಇದು ಬಹಳ ಮೇಲ್ಮಟ್ಟದ ಪರೀಕ್ಷೆ ಅಂದುಕೊಂಡರೂ, ಮುಸ್ಲಿಂ ಸಮುದಾಯವನ್ನು ದ್ವೇಷಿಸುವ ಯುವಕ-ಯುವತಿಯರೆ, ನಿಮಗೆ ವೈಯಕ್ತಿಕವಾಗಿ ಮೋಸ, ಅನ್ಯಾಯ ಮಾಡಿದ ಹತ್ತು ಜನರ ಹೆಸರು ಪಟ್ಟಿಮಾಡಿ ನೋಡಿ. ಅದರಲ್ಲಿ ಮುಸ್ಲಿಮರ ಹೆಸರು ಇರುವುದಕ್ಕಿಂತಲೂ, ನಿಮ್ಮದೆ ಧರ್ಮದ, ನಿಮ್ಮದೆ ಜಾತಿಯ ಜನರ ಹೆಸರುಗಳು ಹೆಚ್ಚು ಇರುತ್ತವೆ. ಹೀಗಿರುವಾಗ ಯಾರೋ ವಿಷ ಹರಡುವ ಇರಾದೆ ಹೊಂದಿರುವವರು ಹೇಳಿದ ಮಾತು ಕೇಳಿ ಮುಸ್ಲಿಮರನ್ನು ಏಕೆ ದ್ವೇಷಿಸುತ್ತೀರಿ? ಎಷ್ಟೋ ಬಾರಿ ನೀವು ಅವರೊಂದಿಗೆ ಒಡನಾಡಿಯಾಗಿರುವುದೇ ಇಲ್ಲ, ಅವರ ಆಚಾರ ವಿಚಾರದ ನೈಜ ದರ್ಶನ ನಿಮಗಾಗಿರುವುದಿಲ್ಲ. ಈ ಒಡನಾಟ ಸಾಧ್ಯವಾಗಿದ್ದರೆ ನೀವು ಅವರನ್ನು ಅಂದರೆ ಒಂದಿಡೀ ಜನಾಂಗವನ್ನು ದ್ವೇಷಿಸಲು ಸಾಧ್ಯವಾಗುವುದಿಲ್ಲ’ ಎಂದು ಗೆಳೆಯರೊಬ್ಬರು ನನಗೆ ಹೇಳಿದ್ದರು. ಅದು ಅಕ್ಷರಶಃ ನಿಜ ಎಂಬುದು ನನ್ನ ಅನುಭವ ಮತ್ತು ಅಭಿಮತ. ಉಡುಪಿಯ ಸಾಮರಸ್ಯ ಸಮಾವೇಶದಲ್ಲಿ ಸರ್ವಧರ್ಮಿಯರು, ಸಕಲ ಸಮುದಾಯದವರು ಬೆರೆತು ದ್ವೇಷ ಬಿತ್ತುವವರನ್ನು ಹಿಮ್ಮೆಟ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಪರಸ್ಪರ ಒಡನಾಟವನ್ನು ಹೆಚ್ಚಿಸುವ ಇರಾದೆ ಕೂಡ ಈ ಸಮಾವೇಶಕ್ಕಿದೆ.

ಉಡುಪಿಯ ಅಜ್ಜರಕಾಡು ಹುತಾತ್ಮ ಚೌಕದಿಂದ ಮೇ 14ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಾಮರಸ್ಯ ನಡಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ಸಹಬಾಳ್ವೆ ಸಮಾವೇಶ ನಡೆಯಲಿದೆ. ಸರ್ವಧರ್ಮಗಳ ಧರ್ಮಗುರುಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಂ.ಡಿ ಪಲ್ಲವಿ ಮತ್ತು ತಂಡದವರು ಸೌಹಾರ್ದ ಗೀತೆಗಳನ್ನು ಹಾಡಲಿದ್ದಾರೆ.

ಯೋಗೇಂದ್ರ ಯಾದವ್, ಡಾ. ರೊನಾಲ್ಡ್ ಕೊಲಾಸೊ, ಶಶಿಕಾಂತ್ ಸೆಂಥಿಲ್, ಮಾವಳ್ಳಿ ಶಂಕರ್, ಆರ್ ಮೋಹನ್ ರಾಜ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲಿ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ಕೆ.ನೀಲಾ, ಡಾ. ಬೆಳಗಾಮಿ ಮುಹಮ್ಮದ್ ಸಾದ್, ಸಬೀಹ ಫಾತಿಮ ಮತ್ತು ನಜ್ಮಾ ಚಿಕ್ಕನೇರಳೆ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅತಿಥಿಗಳ ಪಟ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ: ತೀವ್ರ ಟೀಕೆ ನಂತರ ಕೈಬಿಟ್ಟ ಸಮಿತಿ

ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶಕ್ಕೆ ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮಿಯನ್ನು ಆಹ್ವಾನಿಸಲಾಗಿತ್ತು. ಆದರೆ ಅವರು ಬಲಪಂಥೀಯ ವಿಚಾರಗಳನ್ನು ಉಗ್ರ ರೂಪದಲ್ಲಿ ಪ್ರತಿಪಾದಿಸಿದ್ದ ವಿವಾದಾತ್ಮಕ ವ್ಯಕ್ತಿ. ಈ ಹಿಂದೆ ಯೋಗೇಶ್ ಮಾಸ್ಟರ್‌ರವರು ಡುಂಢಿ ಕಾದಂಬರಿ ಬರೆದಾಗ ದೂರು ನೀಡಿದವರಲ್ಲಿ ಒಬ್ಬರಾಗಿ ಅಸಹಿಷ್ಣುತೆಯನ್ನು ತೋರ್ಪಡಿಸಿದ್ದವರು. ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಕರೆ ನೀಡಿದ್ದರು. ಹಿಂದೂ ಧರ್ಮದ ಉದ್ಧಾರಕ್ಕೆ ಮಹಿಳೆಯರು ಹತ್ತು ಮಕ್ಕಳು ಹೇರಬೇಕು ಎಂಬೆಲ್ಲಾ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು. ಆರ್ಯ ಈಡಿಗ ಸಮುದಾಯವೇ ಅವರನ್ನು ತಮ್ಮ ಸ್ವಾಮಿಯೆಂದು ಒಪ್ಪಿಕೊಳ್ಳುವುದಿಲ್ಲ, ಅವರಿಂದ ಎಂತಹ ಸಹಬಾಳ್ವೆ ಭಾಷಣ ಕೇಳುವುದು ಎಂಬ ತೀಕ್ಷ್ಣ ಟೀಕೆಗಳು ಕೇಳಿಬಂದವು.

ಕೆ.ಎಲ್ ಅಶೋಕ್

ನಂತರ ಸಮಾವೇಶದ ಸಂಘಟನಾ ಸಮಿತಿಯು ಎಚ್ಚೆತ್ತುಕೊಂಡು ಸಭೆ ನಡೆಸಿ ಆ ವ್ಯಕ್ತಿಯನ್ನು ಅತಿಥಿಗಳ ಪಟ್ಟಿಯಿಂದ ಕೈಬಿಟ್ಟಿದ್ದಾರೆ. “ಕೂಲಂಕಷ ಚರ್ಚೆ ಮಾಡದೆ ಆಹ್ವಾನಿಸಿರುವ ತಪ್ಪು ಸಮಿತಿಯಿಂದ ನಡೆದಿರುವುದರಿಂದ, ಸಮಿತಿಯೇ ಕ್ಷಮೆ ಕೋರಿ, ವಿಷಾದ ವ್ಯಕ್ತಪಡಿಸಿ ಅವರನ್ನು ಸಮ್ಮೇಳನದಿಂದ ಕೈಬಿಡುತ್ತಿದೆ” ಎಂದು ಹೇಳಿಕೆ ನೀಡಿತು.

ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ

“ಸಾಮರಸ್ಯ-ಸಹಬಾಳ್ವೆ ಎಂಬುದು ಈ ನೆಲದ ಸಂಸ್ಕೃತಿ ಮತ್ತು ಪ್ರಕೃತಿಯ ಮೂಲಗುಣ. ತಮ್ಮದಲ್ಲದ ಧರ್ಮವನ್ನು ದ್ವೇಷಿಸುವುದು ಸಹಜವಲ್ಲ. ಅದನ್ನು ಉದ್ದೇಶಪೂರ್ವಕವಾಗಿ ಜನರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನಿಸಲಾಗುತ್ತಿದೆ. ಅದನ್ನು ಮೀರಿ ಎಲ್ಲಾ ಧರ್ಮಗಳ ಸಾರ ಪ್ರೀತಿ-ಕರುಣೆಯೊಂದೆ. ಅಲ್ಲದೆ ಯಾವುದೇ ಧರ್ಮ ಮೇಲಲ್ಲ, ಯಾವುದೂ ಕೀಳಲ್ಲ, ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎಲ್ಲರೂ ಸಮಾನರು ಎಂಬುದನ್ನು ಸಾರಲು ಈ ಸಮಾವೇಶ ಹಮ್ಮಿಕೊಂಡಿದ್ದೇವೆ” ಎನ್ನುತ್ತಾರೆ ಸಮಾವೇಶದ ಸಂಘಟಕರಲ್ಲೊಬ್ಬರಾದ ಕೆ.ಎಲ್ ಅಶೋಕ್.

ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ

“ಕಳೆದ 5 ತಿಂಗಳುಗಳಲ್ಲಿ ಕರಾವಳಿಯ ಊರುಕೇರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ನಿತ್ಯ ಬದುಕಿನ ಮೇಲೆ ದಬ್ಬಾಳಿಕೆ ತೀವ್ರವಾಗಿದೆ. ಇದು ಕೋಮುವಾದ ಶಿಖರ ತಲುಪಿದೆ ಎನ್ನುವುದರ ಸಂಕೇತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ, ನಾಡಿನ ಅಲ್ಪಸಂಖ್ಯಾತ ಸಮುದಾಯ ಸಮಾಜದಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದೆ. ಹಾಗಾಗಿ ಅಲ್ಪಸಂಖ್ಯಾತರ ಜೊತೆ ನಾವಿದ್ದೇವೆ ಮತ್ತು ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ ಎಂದು ಸಾರಲು ಈ ಸಹಬಾಳ್ವೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಅಲ್ಪಸಂಖ್ಯಾತರ ಜೊತೆ ನಿಲ್ಲುತ್ತೇವೆ ಮತ್ತು ಈ ನಾಡನ್ನು ಕೋಮುವಾದಿಗಳ ಬೀಡಾಗಲು ಬಿಡುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇವೆ.

ಕೆ.ಫಣಿರಾಜ್

“ಈ ನಮ್ಮ ನಡಿಗೆಯಲ್ಲಿ ಎಲ್ಲರನ್ನು ಒಳಗೊಳ್ಳುವ, ಎಲ್ಲರನ್ನು ಗೌರವಿಸುವ ಕೆಲಸದಲ್ಲಿ ಕೆಲವು ತಪ್ಪುಗಳಾಗಿವೆ. ಅದಕ್ಕಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಆ ತಪ್ಪುಗಳನ್ನು ನಾವು ಒಪ್ಪಿಕೊಂಡು ತಿದ್ದಿಕೊಳ್ಳುತ್ತೇವೆ. ಆದರೆ ಆ ತಪ್ಪನ್ನೆ ದೊಡ್ಡದು ಮಾಡಿ ಇಡೀ ಸಮಾವೇಶದ ಆಶಯವನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಎಲ್ಲರಲ್ಲಿ ಪ್ರಾರ್ಥಿಸುತ್ತೇವೆ. ಈ ದುರಂತ ಕಾಲದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯಂತ ಅನಿವಾರ್ಯವಾಗಿದ್ದು. ಈ ನಾಡಿನ ಎಲ್ಲಾ ಕಿರಿಯ, ಹಿರಿಯರು ಈ ಸಮಾವೇಶದಲ್ಲಿ ಭಾಗಿಯಾಗಬೇಕೆಂದು ಸಂಘಟನಾ ಸಮಿತಿಯ ಪರವಾಗಿ ಬೇಡಿಕೊಳ್ಳುತ್ತೇನೆ” ಎನ್ನುತ್ತಾರೆ ಸಹಬಾಳ್ವೆ ಸಮಾವೇಶದ ಸಂಚಾಲಕ ಸಮಿತಿ ಸದಸ್ಯರು ಮತ್ತು ಚಿಂತಕರಾದ ಕೆ.ಫಣಿರಾಜ್.

ಇವು ದೇಶ ಕಾಣುತ್ತಿರುವ ಕರಾಳ ದಿನಗಳು. ಈ ಕರಾಳತೆಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ನಡೆಯುವ ಯಾವ ಸಣ್ಣ ದೊಡ್ಡ ಕೆಲಸವಾಗಲೀ ಇಂದಿನ ಅಗತ್ಯ. ಆ ನಿಟ್ಟಿನಲ್ಲಿ ಈ ಸಮಾವೇಶದ ಗುರಿ ಈಡೇರಲಿ ಎಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...