Homeಕರ್ನಾಟಕಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

ಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

- Advertisement -
- Advertisement -

ಮುಸ್ಲಿಂ ಹೆಣ್ಣು ಮಕ್ಕಳು ತರಗತಿ ಕೊಠಡಿಗಳಿಗೆ ಹಿಜಾಬ್ ಧರಿಸಿ ಬರಬಾರದೆಂಬ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದ ನಂತರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಆ ನಂತರ ಕಾಲೇಜುಗಳು ಮತ್ತೆ ಆರಂಭವಾದಾಗ ವಿವಿಧ ಮುಸ್ಲಿಮೇತರ ಸಮುದಾಯದ ಹೆಣ್ಣುಮಕ್ಕಳು ಹಿಜಾಬ್ ಧರಿಸಿದ ಮುಸ್ಲಿಂ ಬಾಲಕಿಯ ಕೈಹಿಡಿದು ಶಾಲೆ ಪ್ರವೇಶಿಸಿದ ಫೋಟೋವೊಂದು ವೈರಲ್ ಆಗಿತ್ತು. ಇರ್ಷಾದ್ ಮೊಹಮ್ಮದ್ ತೆಗೆದ ಆ ಚೆಂದದ ಫೋಟೋವನ್ನು ‘Unity in Diversity’ ಶೀರ್ಷಿಕೆಯಡಿ ಡೆಕ್ಕನ್ ಹೆರಾಲ್ಡ್ ಪ್ರಕಟಿಸಿತ್ತು. ಈ ಜಾತಿ ಧರ್ಮದ ದ್ವೇಷ ದೊಡ್ಡವರು ಮಾಡಬಹುದು, ಆದರೆ ನಾವು ಎಳೆಯರು, ನಾವು ಗೆಳೆಯರು ನಮ್ಮಲ್ಲಿ ಅದಕ್ಕೆ ಅವಕಾಶವಿಲ್ಲವೆಂಬ ಸಂದೇಶವನ್ನು ಆ ಪುಟ್ಟ ಮಕ್ಕಳು ಸಾರಿದ್ದರು. ’ಇದು ನನ್ನ ಭಾರತ’ ಎಂದು ಸಾವಿರಾರು ಜನರು ಆ ಫೋಟೊವನ್ನು ಹಂಚಿಕೊಂಡಿದ್ದರು.

ಈ ರೀತಿಯ ಶಾಂತಿ ಸಹಬಾಳ್ವೆ ಸಾಮರಸ್ಯ ಸಾಮಾನ್ಯ ಜನರಲ್ಲಿ ಹಾಸುಹೊಕ್ಕಾಗಿದೆ. ಆದರೆ ದ್ವೇಷದ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸುವವರು ಅಂತಹ ಸಾಮರಸ್ಯಕ್ಕೆ ಗಲಭೆಗಳ ಮೂಲಕ ಹುಳಿಹಿಂಡಲು ಪದೇಪದೇ ಪ್ರಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿರುವ ಸರ್ಕಾರವೇ ಅಂತಹ ಕೆಲಸಕ್ಕೆ ಕುಮ್ಮಕ್ಕು ನೀಡಿದರೆ ಏನಾಗಬಹುದು ಎಂಬುದಕ್ಕೆ ನಮ್ಮ ಕರ್ನಾಟಕ ಸಾಕ್ಷಿಯಾಗಿದೆ. ಉಡುಪಿಯ ಕಾಪುವಿನಲ್ಲಿ ಮಾರಿಗುಡಿ ಜಾತ್ರೆಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಎಂಬ ಬ್ಯಾನರ್ ಹಾಕುವ ಮೂಲಕ ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳು ಕೋಮು ಧ್ರುವೀಕರಣ ಮತ್ತು ದ್ವೇಷ ಹುಟ್ಟುಹಾಕುವ ಪ್ರಕ್ರಿಯೆಗೆ ಮುಂದಾಗಿದ್ದವು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾರದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದರು. ಜಾತ್ರೆಯ ’ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ನಡೆಸಿಕೊಟ್ಟರು. ಎರಡು ದಿನವೂ ವಾಲಗ ಊದಿ ’ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದರು.

ಈ ಎರಡು ಪ್ರಕರಣಗಳು ತೋರಿಸುವುದೇನೆಂದರೆ ಸರ್ಕಾರವೂ ಸೇರಿಕೊಂಡು, ಸಂಘಪರಿವಾರ, ಮುಖ್ಯವಾಹಿನಿ ಮಾಧ್ಯಮಗಳು ಎಷ್ಟೇ ದ್ವೇಷ ಹರಡಲು ಮುಂದಾದರೂ ಈ ನಾಡಿನ ಸಮುದಾಯಗಳ ಬಹುಸಂಖ್ಯೆಯ ಜನರಿಗೆ ಅದು ಬೇಕಾಗಿಲ್ಲ. ಏಕೆಂದರೆ ನಿತ್ಯವೂ ಅವರ ಬದುಕು ಬವಣೆ ನೂರಾರು ಜನರೊಂದಿಗೆ, ಹಲವು ಸಮುದಾಯಗಳೊಂದಿಗೆ ಹೆಣೆದುಕೊಂಡಿದೆ. ಹಾಗಾಗಿ ಅವರ ನಡುವೆ ಕೊಡುಕೊಳ್ಳುವಿಕೆ ಇಲ್ಲದೆ ಬದುಕು ಸಪ್ಪೆಯಾಗುತ್ತದೆ, ಮತ್ತು ಕೆಲವು ಕಡೆಗೆ ಅದು ವಿನಾಶಕ್ಕೂ ಎಡೆಮಾಡಿಕೊಡುತ್ತದೆ. ಕೊಡು-ಕೊಳ್ಳುವಿಕೆಯ ಸಂಪ್ರದಾಯದ ಪರಿಕಲ್ಪನೆಗಳಲ್ಲೀ ಸೌಹಾರ್ದತೆ-ಸಹಬಾಳ್ವೆಯೂ ಸೇರಿಕೊಂಡಿದೆ. ಆದನ್ನು ಮತ್ತಷ್ಟು ಉದ್ದೀಪನಗೊಳಿಸುವ ಪ್ರಯತ್ನದ ಭಾಗವಾಗಿ ಮೇ 14 ರಂದು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ ನಡೆಯುತ್ತಿದೆ.

’ಇದು ಬಹಳ ಮೇಲ್ಮಟ್ಟದ ಪರೀಕ್ಷೆ ಅಂದುಕೊಂಡರೂ, ಮುಸ್ಲಿಂ ಸಮುದಾಯವನ್ನು ದ್ವೇಷಿಸುವ ಯುವಕ-ಯುವತಿಯರೆ, ನಿಮಗೆ ವೈಯಕ್ತಿಕವಾಗಿ ಮೋಸ, ಅನ್ಯಾಯ ಮಾಡಿದ ಹತ್ತು ಜನರ ಹೆಸರು ಪಟ್ಟಿಮಾಡಿ ನೋಡಿ. ಅದರಲ್ಲಿ ಮುಸ್ಲಿಮರ ಹೆಸರು ಇರುವುದಕ್ಕಿಂತಲೂ, ನಿಮ್ಮದೆ ಧರ್ಮದ, ನಿಮ್ಮದೆ ಜಾತಿಯ ಜನರ ಹೆಸರುಗಳು ಹೆಚ್ಚು ಇರುತ್ತವೆ. ಹೀಗಿರುವಾಗ ಯಾರೋ ವಿಷ ಹರಡುವ ಇರಾದೆ ಹೊಂದಿರುವವರು ಹೇಳಿದ ಮಾತು ಕೇಳಿ ಮುಸ್ಲಿಮರನ್ನು ಏಕೆ ದ್ವೇಷಿಸುತ್ತೀರಿ? ಎಷ್ಟೋ ಬಾರಿ ನೀವು ಅವರೊಂದಿಗೆ ಒಡನಾಡಿಯಾಗಿರುವುದೇ ಇಲ್ಲ, ಅವರ ಆಚಾರ ವಿಚಾರದ ನೈಜ ದರ್ಶನ ನಿಮಗಾಗಿರುವುದಿಲ್ಲ. ಈ ಒಡನಾಟ ಸಾಧ್ಯವಾಗಿದ್ದರೆ ನೀವು ಅವರನ್ನು ಅಂದರೆ ಒಂದಿಡೀ ಜನಾಂಗವನ್ನು ದ್ವೇಷಿಸಲು ಸಾಧ್ಯವಾಗುವುದಿಲ್ಲ’ ಎಂದು ಗೆಳೆಯರೊಬ್ಬರು ನನಗೆ ಹೇಳಿದ್ದರು. ಅದು ಅಕ್ಷರಶಃ ನಿಜ ಎಂಬುದು ನನ್ನ ಅನುಭವ ಮತ್ತು ಅಭಿಮತ. ಉಡುಪಿಯ ಸಾಮರಸ್ಯ ಸಮಾವೇಶದಲ್ಲಿ ಸರ್ವಧರ್ಮಿಯರು, ಸಕಲ ಸಮುದಾಯದವರು ಬೆರೆತು ದ್ವೇಷ ಬಿತ್ತುವವರನ್ನು ಹಿಮ್ಮೆಟ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಪರಸ್ಪರ ಒಡನಾಟವನ್ನು ಹೆಚ್ಚಿಸುವ ಇರಾದೆ ಕೂಡ ಈ ಸಮಾವೇಶಕ್ಕಿದೆ.

ಉಡುಪಿಯ ಅಜ್ಜರಕಾಡು ಹುತಾತ್ಮ ಚೌಕದಿಂದ ಮೇ 14ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಾಮರಸ್ಯ ನಡಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ಸಹಬಾಳ್ವೆ ಸಮಾವೇಶ ನಡೆಯಲಿದೆ. ಸರ್ವಧರ್ಮಗಳ ಧರ್ಮಗುರುಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಂ.ಡಿ ಪಲ್ಲವಿ ಮತ್ತು ತಂಡದವರು ಸೌಹಾರ್ದ ಗೀತೆಗಳನ್ನು ಹಾಡಲಿದ್ದಾರೆ.

ಯೋಗೇಂದ್ರ ಯಾದವ್, ಡಾ. ರೊನಾಲ್ಡ್ ಕೊಲಾಸೊ, ಶಶಿಕಾಂತ್ ಸೆಂಥಿಲ್, ಮಾವಳ್ಳಿ ಶಂಕರ್, ಆರ್ ಮೋಹನ್ ರಾಜ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲಿ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ಕೆ.ನೀಲಾ, ಡಾ. ಬೆಳಗಾಮಿ ಮುಹಮ್ಮದ್ ಸಾದ್, ಸಬೀಹ ಫಾತಿಮ ಮತ್ತು ನಜ್ಮಾ ಚಿಕ್ಕನೇರಳೆ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅತಿಥಿಗಳ ಪಟ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ: ತೀವ್ರ ಟೀಕೆ ನಂತರ ಕೈಬಿಟ್ಟ ಸಮಿತಿ

ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶಕ್ಕೆ ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮಿಯನ್ನು ಆಹ್ವಾನಿಸಲಾಗಿತ್ತು. ಆದರೆ ಅವರು ಬಲಪಂಥೀಯ ವಿಚಾರಗಳನ್ನು ಉಗ್ರ ರೂಪದಲ್ಲಿ ಪ್ರತಿಪಾದಿಸಿದ್ದ ವಿವಾದಾತ್ಮಕ ವ್ಯಕ್ತಿ. ಈ ಹಿಂದೆ ಯೋಗೇಶ್ ಮಾಸ್ಟರ್‌ರವರು ಡುಂಢಿ ಕಾದಂಬರಿ ಬರೆದಾಗ ದೂರು ನೀಡಿದವರಲ್ಲಿ ಒಬ್ಬರಾಗಿ ಅಸಹಿಷ್ಣುತೆಯನ್ನು ತೋರ್ಪಡಿಸಿದ್ದವರು. ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಕರೆ ನೀಡಿದ್ದರು. ಹಿಂದೂ ಧರ್ಮದ ಉದ್ಧಾರಕ್ಕೆ ಮಹಿಳೆಯರು ಹತ್ತು ಮಕ್ಕಳು ಹೇರಬೇಕು ಎಂಬೆಲ್ಲಾ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು. ಆರ್ಯ ಈಡಿಗ ಸಮುದಾಯವೇ ಅವರನ್ನು ತಮ್ಮ ಸ್ವಾಮಿಯೆಂದು ಒಪ್ಪಿಕೊಳ್ಳುವುದಿಲ್ಲ, ಅವರಿಂದ ಎಂತಹ ಸಹಬಾಳ್ವೆ ಭಾಷಣ ಕೇಳುವುದು ಎಂಬ ತೀಕ್ಷ್ಣ ಟೀಕೆಗಳು ಕೇಳಿಬಂದವು.

ಕೆ.ಎಲ್ ಅಶೋಕ್

ನಂತರ ಸಮಾವೇಶದ ಸಂಘಟನಾ ಸಮಿತಿಯು ಎಚ್ಚೆತ್ತುಕೊಂಡು ಸಭೆ ನಡೆಸಿ ಆ ವ್ಯಕ್ತಿಯನ್ನು ಅತಿಥಿಗಳ ಪಟ್ಟಿಯಿಂದ ಕೈಬಿಟ್ಟಿದ್ದಾರೆ. “ಕೂಲಂಕಷ ಚರ್ಚೆ ಮಾಡದೆ ಆಹ್ವಾನಿಸಿರುವ ತಪ್ಪು ಸಮಿತಿಯಿಂದ ನಡೆದಿರುವುದರಿಂದ, ಸಮಿತಿಯೇ ಕ್ಷಮೆ ಕೋರಿ, ವಿಷಾದ ವ್ಯಕ್ತಪಡಿಸಿ ಅವರನ್ನು ಸಮ್ಮೇಳನದಿಂದ ಕೈಬಿಡುತ್ತಿದೆ” ಎಂದು ಹೇಳಿಕೆ ನೀಡಿತು.

ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ

“ಸಾಮರಸ್ಯ-ಸಹಬಾಳ್ವೆ ಎಂಬುದು ಈ ನೆಲದ ಸಂಸ್ಕೃತಿ ಮತ್ತು ಪ್ರಕೃತಿಯ ಮೂಲಗುಣ. ತಮ್ಮದಲ್ಲದ ಧರ್ಮವನ್ನು ದ್ವೇಷಿಸುವುದು ಸಹಜವಲ್ಲ. ಅದನ್ನು ಉದ್ದೇಶಪೂರ್ವಕವಾಗಿ ಜನರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನಿಸಲಾಗುತ್ತಿದೆ. ಅದನ್ನು ಮೀರಿ ಎಲ್ಲಾ ಧರ್ಮಗಳ ಸಾರ ಪ್ರೀತಿ-ಕರುಣೆಯೊಂದೆ. ಅಲ್ಲದೆ ಯಾವುದೇ ಧರ್ಮ ಮೇಲಲ್ಲ, ಯಾವುದೂ ಕೀಳಲ್ಲ, ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎಲ್ಲರೂ ಸಮಾನರು ಎಂಬುದನ್ನು ಸಾರಲು ಈ ಸಮಾವೇಶ ಹಮ್ಮಿಕೊಂಡಿದ್ದೇವೆ” ಎನ್ನುತ್ತಾರೆ ಸಮಾವೇಶದ ಸಂಘಟಕರಲ್ಲೊಬ್ಬರಾದ ಕೆ.ಎಲ್ ಅಶೋಕ್.

ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ

“ಕಳೆದ 5 ತಿಂಗಳುಗಳಲ್ಲಿ ಕರಾವಳಿಯ ಊರುಕೇರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ನಿತ್ಯ ಬದುಕಿನ ಮೇಲೆ ದಬ್ಬಾಳಿಕೆ ತೀವ್ರವಾಗಿದೆ. ಇದು ಕೋಮುವಾದ ಶಿಖರ ತಲುಪಿದೆ ಎನ್ನುವುದರ ಸಂಕೇತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ, ನಾಡಿನ ಅಲ್ಪಸಂಖ್ಯಾತ ಸಮುದಾಯ ಸಮಾಜದಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದೆ. ಹಾಗಾಗಿ ಅಲ್ಪಸಂಖ್ಯಾತರ ಜೊತೆ ನಾವಿದ್ದೇವೆ ಮತ್ತು ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ ಎಂದು ಸಾರಲು ಈ ಸಹಬಾಳ್ವೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಅಲ್ಪಸಂಖ್ಯಾತರ ಜೊತೆ ನಿಲ್ಲುತ್ತೇವೆ ಮತ್ತು ಈ ನಾಡನ್ನು ಕೋಮುವಾದಿಗಳ ಬೀಡಾಗಲು ಬಿಡುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇವೆ.

ಕೆ.ಫಣಿರಾಜ್

“ಈ ನಮ್ಮ ನಡಿಗೆಯಲ್ಲಿ ಎಲ್ಲರನ್ನು ಒಳಗೊಳ್ಳುವ, ಎಲ್ಲರನ್ನು ಗೌರವಿಸುವ ಕೆಲಸದಲ್ಲಿ ಕೆಲವು ತಪ್ಪುಗಳಾಗಿವೆ. ಅದಕ್ಕಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಆ ತಪ್ಪುಗಳನ್ನು ನಾವು ಒಪ್ಪಿಕೊಂಡು ತಿದ್ದಿಕೊಳ್ಳುತ್ತೇವೆ. ಆದರೆ ಆ ತಪ್ಪನ್ನೆ ದೊಡ್ಡದು ಮಾಡಿ ಇಡೀ ಸಮಾವೇಶದ ಆಶಯವನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಎಲ್ಲರಲ್ಲಿ ಪ್ರಾರ್ಥಿಸುತ್ತೇವೆ. ಈ ದುರಂತ ಕಾಲದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯಂತ ಅನಿವಾರ್ಯವಾಗಿದ್ದು. ಈ ನಾಡಿನ ಎಲ್ಲಾ ಕಿರಿಯ, ಹಿರಿಯರು ಈ ಸಮಾವೇಶದಲ್ಲಿ ಭಾಗಿಯಾಗಬೇಕೆಂದು ಸಂಘಟನಾ ಸಮಿತಿಯ ಪರವಾಗಿ ಬೇಡಿಕೊಳ್ಳುತ್ತೇನೆ” ಎನ್ನುತ್ತಾರೆ ಸಹಬಾಳ್ವೆ ಸಮಾವೇಶದ ಸಂಚಾಲಕ ಸಮಿತಿ ಸದಸ್ಯರು ಮತ್ತು ಚಿಂತಕರಾದ ಕೆ.ಫಣಿರಾಜ್.

ಇವು ದೇಶ ಕಾಣುತ್ತಿರುವ ಕರಾಳ ದಿನಗಳು. ಈ ಕರಾಳತೆಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ನಡೆಯುವ ಯಾವ ಸಣ್ಣ ದೊಡ್ಡ ಕೆಲಸವಾಗಲೀ ಇಂದಿನ ಅಗತ್ಯ. ಆ ನಿಟ್ಟಿನಲ್ಲಿ ಈ ಸಮಾವೇಶದ ಗುರಿ ಈಡೇರಲಿ ಎಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...