Homeಕರ್ನಾಟಕಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಪ್ರಧಾನಿ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ್ದ ಪ್ರಧಾನಿ ಮೋದಿ, ಕೊರೊನಾ ನಿರ್ವಹಣೆಗೆ ಕೊನೆಯ ಅಸ್ತ್ರವಾಗಿ ಲಾಕ್‌ಡೌನ್‌ ಅನ್ನು ಬಳಸುವಂತೆ ರಾಜ್ಯಗಳಿಗೆ ಕರೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

“ರಾಜ್ಯದಲ್ಲಿ ಕೊರೊನಾ ಸೋಂಕಿತರು‌ ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ” ಎಂದು ಪ್ರಧಾನಿಗೆ ಕರೆ ನೀಡಿದ್ದಾರೆ.

“ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಲಾಕ್‌ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ” ಎಂದು ಕಿಡಿ ಕಾರಿದ್ದಾರೆ.

“ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ” ಎಂದು ಪ್ರಧಾನಿ ಜೊತೆಗೆ ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ಚಳುವಳಿ ಮಾಡಿದ್ರೆ ಮಾತ್ರ ಸಾಲಲ್ಲ, ಪೊಲಿಟಿಕಲ್ ಪವರ್ ನಿಮ್ಮ ಕೈಲಿ ಹಿಡ್ಕೊಬೇಕು

ವಿಡಿಯೊ ನೋಡಿ: ದೇಶದಲ್ಲಿ ಬಿಜೆಪಿ ಮುಕ್ತ ಆಗುವ ದಿನಗಳು ದೂರವಿಲ್ಲ, ಉದ್ದಟತನ ಬಿಡಿ: ಸಿಎಂಗೆ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...