Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...