Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...