Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....