Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...