Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...